AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ಪರಿಹಾರ ಕೋರಿ ಪ್ರತಿಸ್ಪರ್ಧಿಗೆ ಮಾನಹಾನಿ ನೋಟಿಸ್ ನೀಡಿದ ​ಮಾಜಿ ಸಚಿವ ಮುರುಗೇಶ್ ನಿರಾಣಿ

Defamation case: ಮಾಜಿ ಸಚಿವ ಮುರುಗೇಶ್ ನಿರಾಣಿ ಪರ ಮುಧೋಳ ತಾಲ್ಲೂಕಾ ನ್ಯಾಯಾಲಯದ ವಕೀಲ ಎಮ್ ಎಸ್ ಟಂಕಸಾಲಿ ಅವರು 5 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನಹಾನಿ ನೊಟೀಸ್ ಜಾರಿಗೊಳಿಸಿದ್ದಾರೆ. ಚುನಾವಣೆ ವೇಳೆ ತಮ್ಮ ಭಾಷಣದಿಂದ ಮತ್ತು ಫೇಸ್ಬುಕ್ ಪೋಸ್ಟ್ ನಿಂದ ನಮ್ಮ ಕಕ್ಷಿದಾರಾದ ನಿರಾಣಿಗೆ ದೈಹಿಕ ಹಾಗೂ ಮಾನಸಿಕ ಆಘಾತ ಆಗಿದೆ. ಆದ್ದರಿಂದ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮೂಲಕ ಕಕ್ಷಿದಾರರಾದ ಮುರುಗೇಶ್ ನಿರಾಣಿ ಅವರ ಕ್ಷಮೆ ಕೇಳಬೇಕು. ಜೊತೆಗೆ ಮಾನಹಾನಿ ಪರಿಹಾರಾರ್ಥವಾಗಿ ಐದು ಕೋಟಿ ರೂಪಾಯಿ ನೀಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

5 ಕೋಟಿ ಪರಿಹಾರ ಕೋರಿ ಪ್ರತಿಸ್ಪರ್ಧಿಗೆ ಮಾನಹಾನಿ ನೋಟಿಸ್ ನೀಡಿದ ​ಮಾಜಿ ಸಚಿವ ಮುರುಗೇಶ್ ನಿರಾಣಿ
ಪ್ರತಿಸ್ಪರ್ಧಿಗೆ ಮಾನಹಾನಿ ನೋಟಿಸ್ ನೀಡಿದ ​ ಮುರುಗೇಶ್ ನಿರಾಣಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Aug 17, 2023 | 10:41 AM

Share

ಬಾಗಲಕೋಟೆ, ಆಗಸ್ಟ್​​ 17: ಇತ್ತೀಚೆಗೆ ಮಗಿದ ರಾಜ್ಯ ಅಸೆಂಬ್ಲಿ ಚುನಾವಣಾ (Karnataka Assembly Election 2023) ಪ್ರಚಾರ ಭಾಷಣದ ವೇಳೆ ಹಾಗೂ ಸಾಮಾಜಿಕ‌ ಜಾಲತಾಣದಲ್ಲಿ ತಮ್ಮ ವಿರುದ್ದ ಪೋಸ್ಟ್ ಹಾಕಿದ್ದ ಹಿನ್ನೆಲೆ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಮಾನಹಾನಿ ಕೇಸ್ (defamation case) ಹಾಕಲು ಮುಂದಾಗಿದ್ದಾರೆ. ಭಾಷ‌ಣ ಮಾಡಿದ ಮತ್ತು ಫೇಸ್ ಬುಕ್ ಪೋಸ್ಟ್ ಹಾಕಿದ್ದ ಯಲ್ಲಪ್ಪ ಹೆಗಡೆಗೆ ತಮ್ಮ ವಕೀಲರ ಮೂಲಕ ನಿರಾಣಿ ಮಾನಹಾನಿ ಬಗ್ಗೆ ಲೀಗಲ್ ನೊಟೀಸ್ ಜಾರಿಗೊಳಿಸಿದ್ದಾರೆ. ಅಂದಹಾಗೆ ಯಲ್ಲಪ್ಪ ಹೆಗಡೆ ಅವರು ರೈತ ಸಂಘದ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಬೀಳಗಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅದೇ ಕ್ಷೇತ್ರದಿಂದ ನಿರಾಣಿ ಬಿಜೆಪಿ ಅಭ್ಯರ್ಥಿ ಆಗಿದ್ದರು. 2023ರ ಫೆಬ್ರವರಿ, ಮಾರ್ಚ್, ಮೇ ತಿಂಗಳಲ್ಲಿ ಮಾಡಿದ್ದ ಪೋಸ್ಟ್ ಹಾಗೂ ಭಾಷಣಗಳ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಇದೀಗ ತಿರುಗಿಬಿದ್ದಿದ್ದಾರೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ಅಲಾರಾಂ, ಸಕ್ಕರೆ, ಸೀರೆ, ಆರತಿ ಸೆಟ್ ಹಂಚಿದ್ದಾರೆ. ಸಕ್ಕರೆ ಕಾರ್ಖಾನೆ ಟ್ಯಾಕ್ಸ್ ಕಟ್ಟಿಲ್ಲ ಎಂದೆಲ್ಲಾ ಉಲ್ಲೇಖಿಸಿ, ಭಾಷಣ ಹಾಗೂ ಫೇಸ್ ಬುಕ್‌‌ನಲ್ಲಿ ಪೋಸ್ಟ್ ಹಾಕಿದ್ದಾರೆ ಎಂಬುದು ಆರೋಪ. ನಿನ್ನೆ ಅಗಸ್ಟ್​ ೧೬ ರಂದು ಯಲ್ಲಪ್ಪ ಹೆಗಡೆಗೆ ವಕೀಲ ಎಮ್ ಎಸ್ ಟಂಕಸಾಲಿ ಮೂಲಕ ಲೀಗಲ್‌ ನೊಟೀಸ್ ತಲುಪಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: RTO ಅಧಿಕಾರಿಗಳಿಗೆ ಹೆದ್ದಾರಿಯಲ್ಲಿ ದುಡ್ಡಿನ ಸುರಿಮಳೆ, ವಸೂಲಿಗೆ ಬ್ರೇಕ್ ಹಾಕುವವರೇ ಇಲ್ಲ, ಅದರಿಂದ ಅಪಘಾತಗಳೂ ಹೆಚ್ಚುತ್ತಿವೆ!

ಎಮ್ ಎಸ್ ಟಂಕಸಾಲಿ ಮುಧೋಳ ತಾಲ್ಲೂಕಾ ನ್ಯಾಯಾಲಯದ ವಕೀಲ. 5 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನಹಾನಿ ನೊಟೀಸ್ ಜಾರಿಗೊಳಿಸಲಾಗಿದೆ. ಚುನಾವಣೆ ವೇಳೆ ತಮ್ಮ ಭಾಷಣದಿಂದ ಮತ್ತು ಫೇಸ್ಬುಕ್ ಪೋಸ್ಟ್ ನಿಂದ ನಮ್ಮ ಕಕ್ಷಿದಾರ ಮುರುಗೇಶ್ ನಿರಾಣಿ ಅವರಿಗೆ ದೈಹಿಕ ಹಾಗೂ ಮಾನಸಿಕ ಆಘಾತ ಆಗಿದೆ. ಆದ್ದರಿಂದ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮೂಲಕ ಕಕ್ಷಿದಾರರಾದ ಮುರುಗೇಶ್ ನಿರಾಣಿ ಅವರ ಕ್ಷಮೆ ಕೇಳಬೇಕು. ಜೊತೆಗೆ ಮಾನಹಾನಿ ಪರಿಹಾರಾರ್ಥವಾಗಿ ಐದು ಕೋಟಿ ರೂಪಾಯಿ ನೀಡಬೇಕು. ಒಂದು ವಾರದೊಳಗೆ ಈ ಷರತ್ತು ಈಡೇರಿಸದಿದ್ದರೆ, ಕೋರ್ಟ್ ನಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ದಾಖಲು ಮಾಡೋದಾಗಿ ವಕೀಲ ಟಂಕಸಾಲಿ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:52 am, Thu, 17 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?