5 ಕೋಟಿ ಪರಿಹಾರ ಕೋರಿ ಪ್ರತಿಸ್ಪರ್ಧಿಗೆ ಮಾನಹಾನಿ ನೋಟಿಸ್ ನೀಡಿದ ​ಮಾಜಿ ಸಚಿವ ಮುರುಗೇಶ್ ನಿರಾಣಿ

Defamation case: ಮಾಜಿ ಸಚಿವ ಮುರುಗೇಶ್ ನಿರಾಣಿ ಪರ ಮುಧೋಳ ತಾಲ್ಲೂಕಾ ನ್ಯಾಯಾಲಯದ ವಕೀಲ ಎಮ್ ಎಸ್ ಟಂಕಸಾಲಿ ಅವರು 5 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನಹಾನಿ ನೊಟೀಸ್ ಜಾರಿಗೊಳಿಸಿದ್ದಾರೆ. ಚುನಾವಣೆ ವೇಳೆ ತಮ್ಮ ಭಾಷಣದಿಂದ ಮತ್ತು ಫೇಸ್ಬುಕ್ ಪೋಸ್ಟ್ ನಿಂದ ನಮ್ಮ ಕಕ್ಷಿದಾರಾದ ನಿರಾಣಿಗೆ ದೈಹಿಕ ಹಾಗೂ ಮಾನಸಿಕ ಆಘಾತ ಆಗಿದೆ. ಆದ್ದರಿಂದ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮೂಲಕ ಕಕ್ಷಿದಾರರಾದ ಮುರುಗೇಶ್ ನಿರಾಣಿ ಅವರ ಕ್ಷಮೆ ಕೇಳಬೇಕು. ಜೊತೆಗೆ ಮಾನಹಾನಿ ಪರಿಹಾರಾರ್ಥವಾಗಿ ಐದು ಕೋಟಿ ರೂಪಾಯಿ ನೀಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

5 ಕೋಟಿ ಪರಿಹಾರ ಕೋರಿ ಪ್ರತಿಸ್ಪರ್ಧಿಗೆ ಮಾನಹಾನಿ ನೋಟಿಸ್ ನೀಡಿದ ​ಮಾಜಿ ಸಚಿವ ಮುರುಗೇಶ್ ನಿರಾಣಿ
ಪ್ರತಿಸ್ಪರ್ಧಿಗೆ ಮಾನಹಾನಿ ನೋಟಿಸ್ ನೀಡಿದ ​ ಮುರುಗೇಶ್ ನಿರಾಣಿ
Edited By: ಸಾಧು ಶ್ರೀನಾಥ್​

Updated on: Aug 17, 2023 | 10:41 AM

ಬಾಗಲಕೋಟೆ, ಆಗಸ್ಟ್​​ 17: ಇತ್ತೀಚೆಗೆ ಮಗಿದ ರಾಜ್ಯ ಅಸೆಂಬ್ಲಿ ಚುನಾವಣಾ (Karnataka Assembly Election 2023) ಪ್ರಚಾರ ಭಾಷಣದ ವೇಳೆ ಹಾಗೂ ಸಾಮಾಜಿಕ‌ ಜಾಲತಾಣದಲ್ಲಿ ತಮ್ಮ ವಿರುದ್ದ ಪೋಸ್ಟ್ ಹಾಕಿದ್ದ ಹಿನ್ನೆಲೆ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಮಾನಹಾನಿ ಕೇಸ್ (defamation case) ಹಾಕಲು ಮುಂದಾಗಿದ್ದಾರೆ. ಭಾಷ‌ಣ ಮಾಡಿದ ಮತ್ತು ಫೇಸ್ ಬುಕ್ ಪೋಸ್ಟ್ ಹಾಕಿದ್ದ ಯಲ್ಲಪ್ಪ ಹೆಗಡೆಗೆ ತಮ್ಮ ವಕೀಲರ ಮೂಲಕ ನಿರಾಣಿ ಮಾನಹಾನಿ ಬಗ್ಗೆ ಲೀಗಲ್ ನೊಟೀಸ್ ಜಾರಿಗೊಳಿಸಿದ್ದಾರೆ. ಅಂದಹಾಗೆ ಯಲ್ಲಪ್ಪ ಹೆಗಡೆ ಅವರು ರೈತ ಸಂಘದ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಬೀಳಗಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅದೇ ಕ್ಷೇತ್ರದಿಂದ ನಿರಾಣಿ ಬಿಜೆಪಿ ಅಭ್ಯರ್ಥಿ ಆಗಿದ್ದರು. 2023ರ ಫೆಬ್ರವರಿ, ಮಾರ್ಚ್, ಮೇ ತಿಂಗಳಲ್ಲಿ ಮಾಡಿದ್ದ ಪೋಸ್ಟ್ ಹಾಗೂ ಭಾಷಣಗಳ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಇದೀಗ ತಿರುಗಿಬಿದ್ದಿದ್ದಾರೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ಅಲಾರಾಂ, ಸಕ್ಕರೆ, ಸೀರೆ, ಆರತಿ ಸೆಟ್ ಹಂಚಿದ್ದಾರೆ. ಸಕ್ಕರೆ ಕಾರ್ಖಾನೆ ಟ್ಯಾಕ್ಸ್ ಕಟ್ಟಿಲ್ಲ ಎಂದೆಲ್ಲಾ ಉಲ್ಲೇಖಿಸಿ, ಭಾಷಣ ಹಾಗೂ ಫೇಸ್ ಬುಕ್‌‌ನಲ್ಲಿ ಪೋಸ್ಟ್ ಹಾಕಿದ್ದಾರೆ ಎಂಬುದು ಆರೋಪ. ನಿನ್ನೆ ಅಗಸ್ಟ್​ ೧೬ ರಂದು ಯಲ್ಲಪ್ಪ ಹೆಗಡೆಗೆ ವಕೀಲ ಎಮ್ ಎಸ್ ಟಂಕಸಾಲಿ ಮೂಲಕ ಲೀಗಲ್‌ ನೊಟೀಸ್ ತಲುಪಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: RTO ಅಧಿಕಾರಿಗಳಿಗೆ ಹೆದ್ದಾರಿಯಲ್ಲಿ ದುಡ್ಡಿನ ಸುರಿಮಳೆ, ವಸೂಲಿಗೆ ಬ್ರೇಕ್ ಹಾಕುವವರೇ ಇಲ್ಲ, ಅದರಿಂದ ಅಪಘಾತಗಳೂ ಹೆಚ್ಚುತ್ತಿವೆ!

ಎಮ್ ಎಸ್ ಟಂಕಸಾಲಿ ಮುಧೋಳ ತಾಲ್ಲೂಕಾ ನ್ಯಾಯಾಲಯದ ವಕೀಲ. 5 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನಹಾನಿ ನೊಟೀಸ್ ಜಾರಿಗೊಳಿಸಲಾಗಿದೆ. ಚುನಾವಣೆ ವೇಳೆ ತಮ್ಮ ಭಾಷಣದಿಂದ ಮತ್ತು ಫೇಸ್ಬುಕ್ ಪೋಸ್ಟ್ ನಿಂದ ನಮ್ಮ ಕಕ್ಷಿದಾರ ಮುರುಗೇಶ್ ನಿರಾಣಿ ಅವರಿಗೆ ದೈಹಿಕ ಹಾಗೂ ಮಾನಸಿಕ ಆಘಾತ ಆಗಿದೆ. ಆದ್ದರಿಂದ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮೂಲಕ ಕಕ್ಷಿದಾರರಾದ ಮುರುಗೇಶ್ ನಿರಾಣಿ ಅವರ ಕ್ಷಮೆ ಕೇಳಬೇಕು. ಜೊತೆಗೆ ಮಾನಹಾನಿ ಪರಿಹಾರಾರ್ಥವಾಗಿ ಐದು ಕೋಟಿ ರೂಪಾಯಿ ನೀಡಬೇಕು. ಒಂದು ವಾರದೊಳಗೆ ಈ ಷರತ್ತು ಈಡೇರಿಸದಿದ್ದರೆ, ಕೋರ್ಟ್ ನಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ದಾಖಲು ಮಾಡೋದಾಗಿ ವಕೀಲ ಟಂಕಸಾಲಿ ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:52 am, Thu, 17 August 23

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us