AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕಿ ಬಾತ್​ನಲ್ಲಿ ಬಾಗಲಕೋಟೆಯ ಗೊಂದಲಿ ಪದ ಹಾಡುಗಾರನ ಗುಣಗಾನ ಮಾಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಫೆ.25) ರಂದು 110ನೇ ಮನ್​ ಕೀ ಬಾತ್ ​ (ರೇಡಿಯೋ ಕಾರ್ಯಕ್ರಮ) ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಾಗಲಕೋಟೆಯ ಗೊಂದಲಿ ಪದ ಹಾಡುಗಾರ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಹೊಗಳಿದರು.

Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Feb 25, 2024 | 1:23 PM

ಬಾಗಲಕೋಟೆ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಫೆ.25) ರಂದು 110ನೇ ಮನ್​ ಕೀ ಬಾತ್ (Mann Ki Baat)​ (ರೇಡಿಯೋ ಕಾರ್ಯಕ್ರಮ) ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಬಾಗಲಕೋಟೆಯ (Bagalakote) ಗೊಂದಲಿ ಪದ (Gondhali Pada) ಹಾಡುಗಾರ ವೆಂಕಪ್ಪ ಅಂಬಾಜಿ ಸುಗತೇಕರ್ (Venkappa Ambaji Sugtekr) ಅವರ ಗುಣಗಾನ ಮಾಡಿದರು.

“ಭಾರತದ ಸಂಸ್ಕೃತಿ, ಗಾಯನಗಳಿಗೆ ಲಕ್ಷಾಂತರ ಜನ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಬಾಗಲಕೋಟೆಯ ನವನಗರದ ನಿವಾಸಿಯಾಗಿರುವ ವೆಂಕಪ್ಪ ಅಂಬಾಜಿ ಸುಗತೇಕರ್ ಅವರು ಸಾವಿರಕ್ಕೂ ಅಧಿಕ ಜನಪದ (ಗೊಂದಲಿ) ಹಾಡುಗಳನ್ನು ಹಾಡಿ ಜನಪ್ರಿಯರಾಗಿದ್ದಾರೆ. ಹಾಗೆಯೇ, ಇವರು ಒಂದು ರೂಪಾಯಿಯನ್ನೂ ಪಡೆಯದೆ ಸಾವಿರಾರು ಜನರಿಗೆ ಜನಪದ ಹಾಡುಗಳನ್ನು ಹಾಡುವುದನ್ನು ಕಲಿಸಿದ್ದಾರೆ. ಇವರ ಸೇವೆ ಶ್ಲಾಘನೀಯವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

ಇದನ್ನೂ ಓದಿ: ಹಳ್ಳಿಗಳಲ್ಲಿರುವ ಪ್ರತಿಯೊಂದು ಮಹಿಳೆಯನ್ನೂ ಲಕ್ಷಾಧಿಪತಿಯನ್ನಾಗಿ ಮಾಡುವುದು ನಮ್ಮ ಧ್ಯೇಯ: ಮೋದಿ

81 ವರ್ಷರ ವೆಂಕಪ್ಪ ಸುಗತೇಕರ್ ಅವರು 150ಕ್ಕೂ ಹೆಚ್ಚು ಕಥೆ ಹೇಳುವ ಸಾವಿರಕ್ಕೂ ಅಧಿಕ ಗೊಂದಲಿ ಹಾಡುಗಳನ್ನು ಹಾಡಿದ್ದಾರೆ. ಕಳೆದ 71 ವರ್ಷಗಳಿಂದ ಗೊಂದಲಿ ಪದಗಳನ್ನು ಹಾಡುತ್ತಾ ಬಂದಿದ್ದಾರೆ. ವೆಂಕಪ್ಪ ಸುಗತೇಕರ್ ಅವರು ಶಾಲೆಯ ಮೆಟ್ಟಿಲು ಹತ್ತಿಲ್ಲ. ಆದರೆ ಈ ಕಲೆ ಅವರಿಗೆ ವಂಶ ಪಾರಂಪರ್ಯವಾಗಿ ಒಲಿದಿದೆ. ಗೊಂದಲಿ ಪದ ಸೇವೆಗೆ 2022ರಲ್ಲಿ ಜನಪದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು. 2012ರಲ್ಲಿ ರಾಜ್ಯ ಸರ್ಕಾರ “ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಿದೆ. ವೆಂಕಪ್ಪ ಸುಗತೇಕರ್ ಅವರು ಆಕಾಶವಾಣಿ, ದೂರದರ್ಶನ ಸೇರಿದಂತೆ ರಾಜ್ಯ, ಅಂತರಾಜ್ಯದಲ್ಲಿ ಸಾವಿರಾರು ಕಾರ್ಯಕ್ರಮ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು