AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಇ-ಆಫೀಸ್ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

ಬಾಗಲಕೋಟೆ ಜಿಲ್ಲೆಯ ಇ-ಆಫೀಸ್ ಕುರಿತು ತೀವ್ರ ನಿರ್ಲಕ್ಷ್ಯ ತೋರಿದ್ದಕ್ಕೆ ಆಕ್ರೋಶಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇ-ಆಫೀಸ್ ನಲ್ಲಿ ಬಾಗಲಕೋಟೆ ಹಿಂದಿದೆ. ಇ-ಆಫೀಸ್ ಅಂದರೆ ಏನು ಅಂತನಾದರೂ ಗೊತ್ತಾ ಎಂದು ತಹಶೀಲ್ದಾರ್​ಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಗಲಕೋಟೆಯಲ್ಲಿ ಇ-ಆಫೀಸ್ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ
ರವಿ ಹೆಚ್ ಮೂಕಿ, ಕಲಘಟಗಿ
| Edited By: Rakesh Nayak Manchi|

Updated on: Nov 06, 2023 | 5:10 PM

Share

ಬಾಗಲಕೋಟೆ, ನ.6: ಜಿಲ್ಲೆಯ ಇ-ಆಫೀಸ್ (E-Office) ಕುರಿತು ತೀವ್ರ ನಿರ್ಲಕ್ಷ್ಯ ತೋರಿದ್ದಕ್ಕೆ ಆಕ್ರೋಶಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇ-ಆಫೀಸ್ ನಲ್ಲಿ ಬಾಗಲಕೋಟೆ ಹಿಂದಿದೆ. ಇ-ಆಫೀಸ್ ಅಂದರೆ ಏನು ಅಂತನಾದರೂ ಗೊತ್ತಾ ಎಂದು ತಹಶೀಲ್ದಾರ್​ಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಗಲಕೋಟೆ ಜಿಲ್ಲೆಯಲ್ಲಿ ಇ-ಆಫೀಸ್ ಯಾಕೆ ಆಗುತ್ತಿಲ್ಲ? ಎಂದು ಕೇಳಿದ ಕಂದಾಯ ಸಚಿವರು, ಅಚ್ಚರಿಯ ಕಾರಣಗಳನ್ನ ಎಳೆ ಎಳೆಯಾಗಿ ಬಿಚ್ಚಿಟ್ಟರು. ಅಧಿಕಾರಿಗಳು ತಮ್ಮ ತಪ್ಪು ಮುಚ್ಚಿಟ್ಟುಕೊಳ್ಳಲು ನಿಮಗೆ ಇಷ್ಟ ಬಂದಂತೆ ಕಡತ ಮೂವ್ ಮಾಡವುದು, ಬಿಡುವುದು ನಿಮ್ಮ ಕೈಯಲ್ಲಿ ಇರಬೇಕು ಎಂದು ದೂರಿದರು.

ಇದನ್ನೂ ಓದಿ: Bagalkote DC: ಬರಕ್ಕೆ ತತ್ತರಿಸಿರುವ ಬಾಗಲಕೋಟೆ, ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ನಿರಂತರ ನೀರು ಪೋಲು, ಸಿಬ್ಬಂದಿ ಬೇಜವಾಬ್ದಾರಿ

ಆಡಳಿತದಲ್ಲಿ ಪಾರದರ್ಶಕತೆ ಬರಬಾರದು, ಎಲ್ಲ ಜನಗಳ ಜುಟ್ಟು ನಿಮ್ಮ ಕೈಯಲ್ಲಿ ಇರಬೇಕು, ನೀವು ಏನು ಮಾಡುತ್ತೀರಿ, ನಿಮ್ಮ ಶಿರಸ್ತೇದಾರ ಏನು ಮಾಡುತ್ತಾರೆ, ಎಫ್​ಡಿಎ ಏನು ಮಾಡುತ್ತಾರೆ ಅಂತ ಗೊತ್ತಾಗಬಾರದು. ಯಾವ ಫೈಲ್ ಇರಬೇಕು, ಯಾವ ಫೈಲ್ ಕಳಿಯಬೇಕು ಅಂತ ಯಾರಿಗೂ ಗೊತ್ತಾಗಬಾರದು. ಭ್ರಷ್ಟಾಚಾರ, ಶ್ವೇಚ್ಛಾಚಾರ ನಡೆಯಬೇಕು. ಈ ದುರಾಧಿಕಾರ ನಿಮ್ಮಲ್ಲಿ ಇರಬೇಕು. ಈ ಎಲ್ಲ ಕಾರಣಗಳಿಂದ ಇ-ಆಫೀಸ್ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ನಾನು ಹೇಳಿದ್ದರಲ್ಲಿ ಯಾವುದಾದರೂ ತಪ್ಪಿದ್ದರೆ ಹೇಳಿ ಎಂದಾಗ ಎಲ್ಲಾ ಅಧಿಕಾರಿಗಳು ಮೌನಕ್ಕೆ ಶರಣಾದರು. ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾನಭವನದಲ್ಲಿ‌ ಅಧಿಕಾರಿಗಳ‌ ಜೊತೆ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ