ಬಾಗಲಕೋಟೆಯಲ್ಲಿ ಇ-ಆಫೀಸ್ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

ಬಾಗಲಕೋಟೆ ಜಿಲ್ಲೆಯ ಇ-ಆಫೀಸ್ ಕುರಿತು ತೀವ್ರ ನಿರ್ಲಕ್ಷ್ಯ ತೋರಿದ್ದಕ್ಕೆ ಆಕ್ರೋಶಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇ-ಆಫೀಸ್ ನಲ್ಲಿ ಬಾಗಲಕೋಟೆ ಹಿಂದಿದೆ. ಇ-ಆಫೀಸ್ ಅಂದರೆ ಏನು ಅಂತನಾದರೂ ಗೊತ್ತಾ ಎಂದು ತಹಶೀಲ್ದಾರ್​ಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಗಲಕೋಟೆಯಲ್ಲಿ ಇ-ಆಫೀಸ್ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ
Edited By: Rakesh Nayak Manchi

Updated on: Nov 06, 2023 | 5:10 PM

ಬಾಗಲಕೋಟೆ, ನ.6: ಜಿಲ್ಲೆಯ ಇ-ಆಫೀಸ್ (E-Office) ಕುರಿತು ತೀವ್ರ ನಿರ್ಲಕ್ಷ್ಯ ತೋರಿದ್ದಕ್ಕೆ ಆಕ್ರೋಶಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಇ-ಆಫೀಸ್ ನಲ್ಲಿ ಬಾಗಲಕೋಟೆ ಹಿಂದಿದೆ. ಇ-ಆಫೀಸ್ ಅಂದರೆ ಏನು ಅಂತನಾದರೂ ಗೊತ್ತಾ ಎಂದು ತಹಶೀಲ್ದಾರ್​ಗಳನ್ನು ತರಾಟೆಗೆ ತೆಗೆದುಕೊಂಡರು.

ಬಾಗಲಕೋಟೆ ಜಿಲ್ಲೆಯಲ್ಲಿ ಇ-ಆಫೀಸ್ ಯಾಕೆ ಆಗುತ್ತಿಲ್ಲ? ಎಂದು ಕೇಳಿದ ಕಂದಾಯ ಸಚಿವರು, ಅಚ್ಚರಿಯ ಕಾರಣಗಳನ್ನ ಎಳೆ ಎಳೆಯಾಗಿ ಬಿಚ್ಚಿಟ್ಟರು. ಅಧಿಕಾರಿಗಳು ತಮ್ಮ ತಪ್ಪು ಮುಚ್ಚಿಟ್ಟುಕೊಳ್ಳಲು ನಿಮಗೆ ಇಷ್ಟ ಬಂದಂತೆ ಕಡತ ಮೂವ್ ಮಾಡವುದು, ಬಿಡುವುದು ನಿಮ್ಮ ಕೈಯಲ್ಲಿ ಇರಬೇಕು ಎಂದು ದೂರಿದರು.

ಇದನ್ನೂ ಓದಿ: Bagalkote DC: ಬರಕ್ಕೆ ತತ್ತರಿಸಿರುವ ಬಾಗಲಕೋಟೆ, ಆದರೆ ಜಿಲ್ಲಾಧಿಕಾರಿ ಕಚೇರಿಯಲ್ಲೇ ನಿರಂತರ ನೀರು ಪೋಲು, ಸಿಬ್ಬಂದಿ ಬೇಜವಾಬ್ದಾರಿ

ಆಡಳಿತದಲ್ಲಿ ಪಾರದರ್ಶಕತೆ ಬರಬಾರದು, ಎಲ್ಲ ಜನಗಳ ಜುಟ್ಟು ನಿಮ್ಮ ಕೈಯಲ್ಲಿ ಇರಬೇಕು, ನೀವು ಏನು ಮಾಡುತ್ತೀರಿ, ನಿಮ್ಮ ಶಿರಸ್ತೇದಾರ ಏನು ಮಾಡುತ್ತಾರೆ, ಎಫ್​ಡಿಎ ಏನು ಮಾಡುತ್ತಾರೆ ಅಂತ ಗೊತ್ತಾಗಬಾರದು. ಯಾವ ಫೈಲ್ ಇರಬೇಕು, ಯಾವ ಫೈಲ್ ಕಳಿಯಬೇಕು ಅಂತ ಯಾರಿಗೂ ಗೊತ್ತಾಗಬಾರದು. ಭ್ರಷ್ಟಾಚಾರ, ಶ್ವೇಚ್ಛಾಚಾರ ನಡೆಯಬೇಕು. ಈ ದುರಾಧಿಕಾರ ನಿಮ್ಮಲ್ಲಿ ಇರಬೇಕು. ಈ ಎಲ್ಲ ಕಾರಣಗಳಿಂದ ಇ-ಆಫೀಸ್ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ನಾನು ಹೇಳಿದ್ದರಲ್ಲಿ ಯಾವುದಾದರೂ ತಪ್ಪಿದ್ದರೆ ಹೇಳಿ ಎಂದಾಗ ಎಲ್ಲಾ ಅಧಿಕಾರಿಗಳು ಮೌನಕ್ಕೆ ಶರಣಾದರು. ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾನಭವನದಲ್ಲಿ‌ ಅಧಿಕಾರಿಗಳ‌ ಜೊತೆ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us