AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಗ್ರಾಮ ಪಂಚಾಯಿತಿಗೆ ಬಾರದ ಸಿಬ್ಬಂದಿ; ಹೈರಾಣಾದ ಸಾರ್ವಜನಿಕರು, ಸಿಬ್ಬಂದಿಗಾಗಿ ಕಾದು ಕಾದು ಮನೆಗೆ ವಾಪಸ್

ಗ್ರಾಮ ಪಂಚಾಯಿತಿ ಮೂಲಕ ಗ್ರಾಮೀಣ ಭಾಗದ ಜನರಿಗೆ ಎಮ್ಎನ್ಆರ್ಇಜಿ ಕೂಲಿ ಕೆಲಸ ಕೊಡಬೇಕು. ಆದರೆ ಕಂದಗಲ್ ಗ್ರಾ.ಪಂ ಸಿಬ್ಬಂದಿ ಕೆಲಸ ಕೇಳಿ ಗ್ರಾಮೀಣ ಕೂಲಿಕಾರರು ಪಂಚಾಯಿತಿಗೆ ಬಂದರೆ ಅವರಿಗೆ ಭೇಟಿಯೇ ಆಗೋದಿಲ್ಲವಂತೆ. ಇದರಿಂದ ಸಿಬ್ಬಂದಿಗಾಗಿ ಕಾದು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬಾಗಲಕೋಟೆಯಲ್ಲಿ ಗ್ರಾಮ ಪಂಚಾಯಿತಿಗೆ ಬಾರದ ಸಿಬ್ಬಂದಿ; ಹೈರಾಣಾದ ಸಾರ್ವಜನಿಕರು, ಸಿಬ್ಬಂದಿಗಾಗಿ ಕಾದು ಕಾದು ಮನೆಗೆ ವಾಪಸ್
ಬಾಗಲಕೋಟೆಯಲ್ಲಿ ಗ್ರಾಮ ಪಂಚಾಯಿತಿಗೆ ಬಾರದ ಸಿಬ್ಬಂದಿ; ಹೈರಾಣಾದ ಸಾರ್ವಜನಿಕರು, ಸಿಬ್ಬಂದಿಗಾಗಿ ಕಾದು ಕಾದು ಮನೆಗೆ ವಾಪಸ್
TV9 Web
| Edited By: |

Updated on: Apr 28, 2022 | 1:47 PM

Share

ಬಾಗಲಕೋಟೆ: ಗ್ರಾಮ ಪಂಚಾಯಿತಿಗಳು ಅಂದರೆ ಗ್ರಾಮೀಣ ಭಾಗದ ಜನರ ಅಭಿವೃದ್ದಿಗಾಗಿ ಅವರ ಸಮಸ್ಯೆ ಸರಿಪಡಿಸೋದಕ್ಕೆ ಇದ್ದ ಸ್ಥಳೀಯ ಸಂಸ್ಥೆ. ಆದರೆ ಕೆಲವೊಂದು ಗ್ರಾಮಪಂಚಾಯಿತಿ ಸಿಬ್ಬಂದಿಯಿಂದ ಬೇಕಾಬಿಟ್ಟಿ ವರ್ತನೆ ನಡೆಯುತ್ತಲೇ ಇದೆ. ಇಂದಿಗೂ ತಮ್ಮ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು ಗ್ರಾ.ಪಂಗೆ ದಿನಾಲು ಅಲೆದಾಡಬೇಕಾಗಿದೆ. ಇಂತಹ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಕಂದಗಲ್ ಗ್ರಾಮಪಂಚಾಯಿತಿ. ಹೌದು ಇಲ್ಲಿ ಸಿಬ್ಬಂದಿ ಆಡಿದ್ದೇ ಆಟ ಮಾಡಿದ್ದೆ ಕಾರುಬಾರು ಎಂಬಂತಾಗಿದೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಪಂಚಾಯಿತಿಗೆ ಬಂದರೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಎಂದೂ ಸಿಗೋದಿಲ್ಲ. ಇದರಿಂದ ಪಂಚಾಯಿತಿ ಯಾಕೆ ಬೇಕು ಎಂಬ ಪ್ರಶ್ನೆ ಎದುರಾಗಿದೆ.

ಗ್ರಾ.ಪಂ ಸಿಬ್ಬಂದಿಗಾಗಿ ಕಾದು ಕೂತ ಗ್ರಾಮೀಣ ಕೂಲಿಕಾರ ಮಹಿಳೆಯರು ಗ್ರಾಮ ಪಂಚಾಯಿತಿ ಮೂಲಕ ಗ್ರಾಮೀಣ ಭಾಗದ ಜನರಿಗೆ ಎಮ್ಎನ್ಆರ್ಇಜಿ ಕೂಲಿ ಕೆಲಸ ಕೊಡಬೇಕು. ಆದರೆ ಕಂದಗಲ್ ಗ್ರಾ.ಪಂ ಸಿಬ್ಬಂದಿ ಕೆಲಸ ಕೇಳಿ ಗ್ರಾಮೀಣ ಕೂಲಿಕಾರರು ಪಂಚಾಯಿತಿಗೆ ಬಂದರೆ ಅವರಿಗೆ ಭೇಟಿಯೇ ಆಗೋದಿಲ್ಲವಂತೆ. ಇದರಿಂದ ಸಿಬ್ಬಂದಿಗಾಗಿ ಕಾದು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

“ಬೆಳಿಗ್ಗೆಯಿಂದ ಕಾದು ಕೂತಿದ್ದೇವೆ, ಇದುವರೆಗೂ ಯಾರು ಬಂದಿಲ್ಲ. ಕಂದಗಲ್‌ ಗ್ರಾ.ಪಂ ಸಿಬ್ಬಂದಿ ಎಂದೂ ಸರಿಯಾಗಿ ಪಂಚಾಯಿತಿಗೆ ಬರೋದಿಲ್ಲ. ನಮಗೆ ಸಮಯಕ್ಕೆ ಸರಿಯಾಗಿ ಎಮ್ಎನ್ಆರ್ಇಜಿ ಕೆಲಸ ಕೂಡ ನೀಡುತ್ತಿಲ್ಲ” ಎಂದು ಗ್ರಾಮದ ಮಹಿಳೆ ನೀಲವ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾ.ಪಂ ಉಪಾಧ್ಯಕ್ಷನಿಗೆ ಕರೆ ಮಾಡಿದರೆ ಬೇಜವಾಬ್ದಾರಿ ಉತ್ತರ ಇನ್ನು ಇಲ್ಲಿ ಗ್ರಾ.ಪಂ ಆಡಳಿತ ಮಂಡಳಿಯೂ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ ಎಂಬುದಕ್ಕೆ ಆಡಿಯೊ‌ ಸಂಭಾಷಣೆ ಸಾಕ್ಷಿಯಾಗಿದೆ. ಗ್ರಾಮಸ್ಥರೊಬ್ಬರು ಪಂಚಾಯಿತಿಯಲ್ಲಿ ಯಾವುದೇ ಸಿಬ್ಬಂದಿಯಿಲ್ಲ ಎಂದು ಕರೆ ಮಾಡಿದರೆ ಉಪಾಧ್ಯಕ್ಷ ಅಮಾತೆಪ್ಪ ಯರದಾಳ, ಇಲ್ಲದಿದ್ದರೆ ನಾನೇನು ಮಾಡಬೇಕು ಎಂದು ಬೇಜವಾಬ್ದಾರಿ ಉತ್ತರ ನೀಡಿದ ಆಡಿಯೊ ಇವರ ಕಾರ್ಯವೈಖರಿ ಹೇಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಂದಗಲ್ ಗ್ರಾ.ಪಂ ಸಿಬ್ಬಂದಿ ದಿವ್ಯ ನಿರ್ಲಕ್ಷ್ಯದ ಬಗ್ಗೆ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಸರಿಯಾದ ಸಮಯಕ್ಕೆ ಜನರ ಸಮಸ್ಯೆಗೆ ಸ್ಪಂದಿಸಬೇಕಾಗಿದೆ.

ಇದನ್ನೂ ಓದಿ: ಕೆ.ಎಸ್​.ಈಶ್ವರಪ್ಪ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿ, ನಮ್ಮ ರಾಜ್ಯದಲ್ಲಿ ಹೀಗೆಲ್ಲ ಆಗೋದಿಲ್ಲವೆಂದ ತೆಲಂಗಾಣ ಸಿಎಂ; ಹಿಜಾಬ್​ ವಿವಾದದ ಬಗ್ಗೆಯೂ ಟೀಕೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ