AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ; ರಾಮಮಂದಿರ ನಿರ್ಮಾಣದ ಸಂಕಲ್ಪದೊಂದಿಗೆ 16 ಲಕ್ಷಕ್ಕೂ ಹೆಚ್ಚು ಬಾರಿ ರಾಮನಾಮ ಬರೆದ ವೃದ್ಧೆ

ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ಅನ್ನಪೂರ್ಣ ನಿರಂಜನ್ ಎಂಬ 64 ವರ್ಷದ ವೃದ್ಧೆ ಅಯೋಧ್ಯೆಯಲ್ಲಿ ರಾಮಮಂದಿರ ಆಗಬೇಕೆಂಬ ಸಂಕಲ್ಪದೊಂದಿಗೆ ಸುಮಾರು 25 ವರ್ಷದಿಂದ ರಾಮನಾಮ ಬರೆದಿದ್ದಾರೆ. ಇಲ್ಲಿವರೆಗೆ 31 ನೋಟ್ ಪುಸ್ತಕದಲ್ಲಿ ಬರೋಬ್ಬರಿ 16 ಲಕ್ಷ 68 ಸಾವಿರ ಬಾರಿ ರಾಮ ರಾಮ ಎಂದು ಬರೆದಿದ್ದಾರೆ.

ಬಾಗಲಕೋಟೆ; ರಾಮಮಂದಿರ ನಿರ್ಮಾಣದ ಸಂಕಲ್ಪದೊಂದಿಗೆ 16 ಲಕ್ಷಕ್ಕೂ ಹೆಚ್ಚು ಬಾರಿ ರಾಮನಾಮ ಬರೆದ ವೃದ್ಧೆ
ಅನ್ನಪೂರ್ಣ ನಿರಂಜನ್
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಆಯೇಷಾ ಬಾನು

Updated on: Jan 14, 2024 | 1:22 PM

ಬಾಗಲಕೋಟೆ, ಜ.14: ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ದಶಕಗಳ ಕನಸು ಈಡೇರಲಿದೆ. ಸದ್ಯ ರಾಮ ಮಂದಿರಕ್ಕಾಗಿ ಸುಮಾರು 25 ವರ್ಷದಿಂದ ಶಬರಿಯಂತೆ ರಾಮನಾಮ (Rama Nama) ಬರೆಯುತ್ತಿದ್ದ ಭಕ್ತೆ ಜನವರಿ 22ರಂದು ರಾಮನಾಮ ಬರೆದ ಪುಸ್ತಕ ಅಯೋಧ್ಯೆಗೆ ಸಮರ್ಪಿಸುವ ಆಸೆ ಹೊರ ಹಾಕಿದ್ದಾರೆ. ಬಾಗಲಕೋಟೆಯಲ್ಲಿ 64 ವರ್ಷದ ವೃದ್ಧೆಯೊಬ್ಬರು ರಾಮನಾಮ ಬರೆದು ಭಕ್ತರಿ ಸಮರ್ಪಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಗ್ರಾಮದ ಅನ್ನಪೂರ್ಣ ನಿರಂಜನ್ ಎಂಬ 64 ವರ್ಷದ ವೃದ್ಧೆ ಅಯೋಧ್ಯೆಯಲ್ಲಿ ರಾಮಮಂದಿರ ಆಗಬೇಕೆಂಬ ಸಂಕಲ್ಪದೊಂದಿಗೆ ಸುಮಾರು 25 ವರ್ಷದಿಂದ ರಾಮನಾಮ ಬರೆದಿದ್ದಾರೆ. ಇಲ್ಲಿವರೆಗೆ 31 ನೋಟ್ ಪುಸ್ತಕದಲ್ಲಿ ಬರೋಬ್ಬರಿ 16 ಲಕ್ಷ 68 ಸಾವಿರ ಬಾರಿ ರಾಮ ರಾಮ ಎಂದು ಬರೆದಿದ್ದಾರೆ. ಪ್ರತಿ ದಿನ ಸಂಜೆ 1-2 ತಾಸು ರಾಮನಾಮ ಬರೆಯಲೆಂದೇ ಸಮಯ ಮೀಸಲಿಟ್ಟು ರಾಮನಾಪ ಜಪಮಾಡಿದ್ದಾರೆ. ಸದ್ಯ ಜನವರಿ 22ರಂದು ಅವಕಾಶ ಸಿಕ್ಕರೆ ಎಲ್ಲಾ ಪುಸ್ತಕ ಅಯೋಧ್ಯೆಗೆ ಒಯ್ಯೋದಾಗಿ ಹೇಳಿದ್ದಾರೆ. ಇಲ್ಲದಿದ್ದರೆ ಮುಂದೊಂದು ದಿನ ಕುಟುಂಬಸ್ಥರ ಸಮೇತ ಅಯೋಧ್ಯೆಗೆ ಹೋಗಿ ರಾಮನಾಮ ಬರೆದ ಪುಸ್ತಕ ಸಮರ್ಪಿಸಲಿದ್ದಾರೆ.

old woman wrote Ramanama more than 16 lakh times in Bagalkot ayodhya ram mandir

ಇದನ್ನೂ ಓದಿ: ಅಯೋಧ್ಯೆ ಪ್ರವಾಸ: ವಿವಿಧ ಟೂರ್​ ಪ್ಯಾಕೇಜ್​ ಘೋಷಿಸಿದ ಏಜೆನ್ಸಿಸ್​​

ಇನ್ನು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಅನ್ನಪೂರ್ಣ ನಿರಂಜನ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈಗ ರಾಮಮಂದಿರ ಉದ್ಘಾಟನೆ ಆಗುತ್ತಿರೋದಕ್ಕೆ ಬಹಳ ಸಂತೋಷವಾಗ್ತಿದೆ. ಅಯೋಧ್ಯಾ ರಾಮಮಂದಿರ ಆಗಬೇಕೆಂಬ ಸಂಕಲ್ಪದೊಂದಿಗೆ ರಾಮನಾಮ ಬರೆದಿದ್ದೇನೆ. 1989ರಲ್ಲಿ ಮನೆ ಕಟ್ಟೋದಕ್ಕೆ ಆರಂಭವಾಯಿತು. ಅಂದಿನಿಂದ ರಾಮನಾಪ ಜಪ ಮಾಡುತ್ತಿದ್ದೇನೆ. ಮನೆ ಮೇಲೂ ಶ್ರೀರಾಮ ಎಂದು ಬರೆಸಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನು ಅನ್ನಪೂರ್ಣ ನಿರಂಜನ್ ಅವರ ಭಕ್ತಿಯನ್ನು ಮೆಚ್ಚಿ ಕೆಲ ಗಣ್ಯರು ಸನ್ಮಾನ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ