AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ-ವಾಡಿ, ಬಾಗಲಕೋಟೆ-ಕುಡಚಿ ರೈಲು ಮಾರ್ಗ ಯಾವಾಗ ಮುಗಿಯುತ್ತೆ? ಮಾಹಿತಿ ನೀಡಿದ ಎಂಬಿ ಪಾಟೀಲ್

ಗದಗ-ವಾಡಿ ಮತ್ತು ಬಾಗಲಕೋಟೆ-ಕುಡುಚಿ ಎರಡು ರೈಲು ಮಾರ್ಗಗಳು ಉತ್ತರ ಕರ್ನಾಟಕದ ಬಹು ಮುಖ್ಯ ರೈಲು ಯೋಜನೆಗಳಾಗಿವೆ. ಈ ಮಾರ್ಗಗಳ ರೈಲು ಸಂಚಾರ ಬಹುಮುಖ್ಯವಾಗಿದೆ. ಈಗಾಗಲೆ ಈ ಮಾರ್ಗಗಳ ರೈಲು ಕಾಮಗಾರಿ ಆರಂಭವಾಗಿದ್ದು, ಯಾವಾಗ ಮುಗಿಯುತ್ತೆ ಎಂಬುವುದರ ಕುರಿತು ಸಚಿವ ಎಂ.ಬಿ ಪಾಟೀಲ್​ ಮಾಹಿತಿ ನೀಡಿದ್ದಾರೆ.

ಗದಗ-ವಾಡಿ, ಬಾಗಲಕೋಟೆ-ಕುಡಚಿ ರೈಲು ಮಾರ್ಗ ಯಾವಾಗ ಮುಗಿಯುತ್ತೆ? ಮಾಹಿತಿ ನೀಡಿದ ಎಂಬಿ ಪಾಟೀಲ್
ಕುಡಚಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 08, 2023 | 7:35 AM

ಬೆಂಗಳೂರು: ಉತ್ತರ ಕರ್ನಾಟಕದ (North Karnataka) ಎರಡು ಮಹತ್ವದ ರೈಲ್ವೆ ಯೋಜನೆಗಳಾದ (Railway Project) ಬಾಗಲಕೋಟೆ-ಕುಡಚಿ (Bagalkot-Kudachi) ರೈಲು ಮಾರ್ಗವನ್ನು 2025 ರ ಅಂತ್ಯದೊಳಗೆ ಮತ್ತು ಗದಗ-ವಾಡಿ (Gadag-Wadi) ಮಾರ್ಗವನ್ನು ಮಾರ್ಚ್ 2026 ರೊಳಗೆ ಪೂರ್ಣಗೊಳಿಸಲು ಗಡುವು ಹಾಕಿಕೊಳ್ಳಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (MB Patil)​ ಹೇಳಿದರು. ಬುಧವಾರ ಗದಗ-ವಾಡಿ ಮತ್ತು ಬಾಗಲಕೋಟೆ-ಕುಡುಚಿ ನಡುವಿನ ಮಾರ್ಗಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ಎರಡೂ ರೈಲು ಮಾರ್ಗಗಳು ಉತ್ತರ ಕರ್ನಾಟಕದ ವಿವಿಧ ಪಟ್ಟಣಗಳಿಗೆ ಸಂಪರ್ಕವನ್ನು ಒದಗಿಸುತ್ತವೆ. ಈ ಯೋಜನೆಯು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆಗಳ ತಲಾ ಶೇ 50 ರಷ್ಟು ವೆಚ್ಚ ಹಂಚಿಕೆಯಲ್ಲಿ ನಡೆಯುತ್ತಿದೆ ಎಂದರು.

42 ಕಿ.ಮೀ ಉದ್ದದ ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಅಂದಾಜು ವೆಚ್ಚ 1,530 ಕೋಟಿ ರೂ. ಇದೆ. ಕಾಮಗಾರಿಗೆ ಬೇಕಾಗಿದ್ದ 2,496 ಎಕರೆ ಭೂಮಿಯ ಪೈಕಿ 2,476 ಎಕರೆ ಹಸ್ತಾಂತರಿಸಲಾಗಿದೆ. ಉಳಿದ 20 ಎಕರೆ ಭೂಮಿಯನ್ನು ಸದ್ಯದಲ್ಲೇ ಬಿಟ್ಟುಕೊಡಲಾಗುವುದು. 2025ರ ಡಿಸೆಂಬರ್​ ಒಳಗೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಹುಬ್ಬಳ್ಳಿ ಅಂಕೋಲಾ ರೈಲ್ವೆ ಯೋಜನೆಗೆ ಭೂಕುಸಿತದ ಆತಂಕ; ಈ ಬಗ್ಗೆ ತಜ್ಞರು ಹೇಳುವುದೇನು?

ಬಾಗಲಕೋಟ-ಖಚ್ಚಿದೋಣಿ-ಲೋಕಾಪುರ 60 ಕಿ.ಮೀ ರೈಲು ಕಾಮಗಾರಿ 2024ರ ಮಾರ್ಚ್‌ ವೇಳೆಗೆ ಪೂರ್ಣಗೊಳ್ಳಲಿದ್ದು, ನಂತರ ರೈಲು ಸಂಚಾರ ಆರಂಭಿಸಲಾಗುವುದು. ಮತ್ತೊಂದು ಕುಡಚಿ ಕಡೆಯಿಂದ ಕಾಮಗಾರಿ ಆರಂಭಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಲಸ ಆರಂಭವಾಗಬೇಕಿದೆ. ಇನ್ನು ಕುಡಚಿ-ಜಗದಾಳ್​ವರೆಗಿನ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಹೇಳಿದರು.

ಗದಗ-ವಾಡಿ ಯೋಜನೆಗೆ 1922 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಯೋಜನೆಗೆ ಒಟ್ಟು 4,002 ಎಕರೆ ಅಗತ್ಯವಿದ್ದು, ಇದುವರೆಗೆ 3,945 ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಿಕ್ಕ 57 ಎಕರೆ ಭೂಮಿಯನ್ನು ಇನ್ನೊಂದು ತಿಂಗಳಲ್ಲಿ ಇಲಾಖೆಗೆ ನೀಡಲಾಗುತ್ತದೆ. ಗದಗ-ತಳಕಲ್​ವರೆಗೆ ಈಗಾಗಲೆ ರೈಲು ಹಳಿ ಇದೆ. ತಳಕಲ್ ಮತ್ತು ಕುಷ್ಟಗಿ ನಡುವಿನ ಮಾರ್ಗವನ್ನು ಮಾರ್ಚ್ 2024 ರೊಳಗೆ ಪೂರ್ಣಗೊಳಿಸಲಾಗುವುದು. ಅದಾದ ಬಳಿಕ ಪ್ರಾಯೋಗಿಕ ಸಂಚಾರ ಪ್ರಾರಂಭವಾಗುತ್ತದೆ. ವಾಡಿ-ಶೊರಾಪುರ ನಡುವಿನ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.

ಗದಗ-ವಾಡಿ ರೈಲು ಮಾರ್ಗ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಒತ್ತು ಕೊಡುವಂತೆ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಸಚಿವರನ್ನು ಕೋರಿದರು. ಕಾಮಗಾರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ಕಾಮಗಾರಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ಕರಡಿ ಸಂಗಣ್ಣ, ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು