AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote: ಪಿಂಚಣಿಗಾಗಿ ಆಗ್ರಹಿಸಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕನ ಮನೆಗೆ ಸಿದ್ದರಾಮಯ್ಯ ಭೇಟಿ, ಕುಟುಂಬಕ್ಕೆ ಸಹಾಯಧನ

ಪಿಂಚಣಿಗಾಗಿ ಆಗ್ರಹಿಸಿ ಪ್ರತಿಭಟನಾನಿರತ ನಿವೃತ್ತ ಶಿಕ್ಷಕ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೆಮಠ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

Bagalkote: ಪಿಂಚಣಿಗಾಗಿ ಆಗ್ರಹಿಸಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕನ ಮನೆಗೆ ಸಿದ್ದರಾಮಯ್ಯ ಭೇಟಿ, ಕುಟುಂಬಕ್ಕೆ ಸಹಾಯಧನ
ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಗಲಕೋಟೆ ನಿವೃತ್ತ ಶಿಕ್ಷಕನ ಮನೆಗೆ ಭೇಟಿ
ವಿವೇಕ ಬಿರಾದಾರ
|

Updated on: Feb 28, 2023 | 1:29 PM

Share

ಬಾಗಲಕೋಟೆ: ಪಿಂಚಣಿಗಾಗಿ (Pension Scheme) ಆಗ್ರಹಿಸಿ ಪ್ರತಿಭಟನಾನಿರತ ನಿವೃತ್ತ ಶಿಕ್ಷಕ (Retired Teacher) ಸಿದ್ದಯ್ಯ ಹಿರೆಮಠ (Siddaiah Hiremath) ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿದ್ದಾರೆ. ಬಾಗಲಕೋಟೆ (Bagalkote) ಜಿಲ್ಲೆಯ ಬಾದಾಮಿ (Badami) ತಾಲೂಕಿನ ಪಟ್ಟದಕಲ್ಲಿನಲ್ಲಿರುವ ಶಿಕ್ಷಕನ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯನವರು, ಕುಟುಂಬಕ್ಕೆ ಸಾಂತ್ವಾನ ಹೇಳಿ 2 ಲಕ್ಷ ರೂ. ನೆರವು ನೀಡಿದ್ದಾರೆ.

ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ ಸಿದ್ದರಾಮಯ್ಯ 2006ನೇ ಇಸ್ವಿಯಲ್ಲಿ ಹೊಸ ಪಿಂಚಣಿ ಯೋಜನೆ ಜಾರಿಗೆ ಬಂತು. ಇದನ್ನು ಕೇಂದ್ರ ಸರಕಾರ ತೀರ್ಮಾನ ಮಾಡುತ್ತೆ. ಅವರು ಮಾಡಿದ್ದನ್ನು ರಾಜ್ಯ ಸರಕಾರ ಮಾಡುತ್ತದೆ. ನಾವು ಈ ಬಗ್ಗೆ ಪರಿಶೀಲು ಹೇಳಿದ್ದೇವೆ. ಈಗ ನಾವು ಸರಕಾರದಲ್ಲಿ ಇಲ್ಲ. ಸರಕಾರದಲ್ಲಿ ಇರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರು ತೀರ್ಮಾನವನ್ನು ಮಾಡಬೇಕು ಎಂದು ಹೇಳಿದರು

ನಿವೃತ್ತ ಶಿಕ್ಷಕ ಸಿದ್ದಯ್ಯ ಸಿದ್ದಯ್ಯ ಹಿರೆಮಠ ನಿಧನಕ್ಕೆ ಕಾರಣ

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಮುಷ್ಕರದಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಿಬ್ಬರು ಫೆ.23 ರಂದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಆ ಪೈಕಿ ಒಬ್ಬ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ (65) ಚಿಕಿತ್ಸೆ ಫಲಿಸದೆ ಫೆ. 24 ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಮೃತ ನಿವೃತ್ತ ಶಿಕ್ಷಕ. ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್ಲು ನಿವಾಸಿ. ಆಮರಣ, ಅರೆಬೆತ್ತಲೆ, ಭಿಕ್ಷಾಟನೆ ಎಲ್ಲ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

1990 ರಿಂದ ಅನುದಾನರಹಿತ ಶಾಲೆಯಲ್ಲಿ ಶಿಕ್ಷಕರಾಗಿದ್ದು, 2008ರಲ್ಲಿ ಸೇವೆ ಸಲ್ಲಿಸುತ್ತಿದ್ದ ಶಾಲೆ ಅನುದಾನಕ್ಕೆ ಒಳಪಟ್ಟಿತ್ತು. ಬಳಿಕ 2012ರಲ್ಲಿ ನಿವೃತ್ತಿ ಹೊಂದಿದ್ದರು. 9 ವರ್ಷ ಮಾತ್ರ ಸರಕಾರಿ ವೇತನ ಪಡೆದಿದ್ದರು. ನಿವೃತ್ತಿ ನಂತರ ಯಾವುದೇ ಪಿಂಚಣಿಗೆ ಅರ್ಹತೆಯಾಗಲಿಲ್ಲ. ಸದ್ಯ ಪತ್ನಿ, ನಾಲ್ಕು ಜನ ಹೆಣ್ಣುಮಕ್ಕಳು ಒಬ್ಬ ಮಗನನ್ನು ಅಗಲಿದ್ದಾರೆ.

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಪಿಂಚಣಿಗಾಗಿ 141 ದಿನಗಳಿಂದ ಶಿಕ್ಷಕರು ಮುಷ್ಕರ ನಡೆಸುತ್ತಿದ್ದಾರೆ. ಸಿದ್ದಯ್ಯ ಜೊತೆಗೆ ನಿವೃತ್ತ ಶಿಕ್ಷಕ ವೆಂಕಟರಾಜು ಸಹ ಆತ್ಮಹತ್ಯೆಗೆ ಯತ್ನಿಸಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ