AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯ ತಹಶೀಲ್ದಾರ್ ಕಚೇರಿಯಲ್ಲಿ ಪಹಣಿ ತಿದ್ದುಪಡಿ ಪ್ರಕರಣ: ತಹಶಿಲ್ದಾರ್ ಮತ್ತು ಪಿಎಸ್​​​ಐ ವಿರುದ್ಧ ಪ್ರತಿದೂರು ನೀಡಿದ ಮಹಿಳಾ ಶಿರಸ್ತೇದಾರ್

ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಪಹಣಿ ತಿದ್ದುಪಡಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮಹಿಳಾ ಶಿರಸ್ತೇದಾರ್ ಶಾಂತಾ ತನ್ನ ಮೇಲೆ ಹೊರಸಿದ  ಆರೋಪವನ್ನು ನಿರಾಕರಿಸಿ ಬಾಗಲಕೋಟೆಯ ನವನಗರ ಮಹಿಳಾ ಪೋಲಿಸ ಠಾಣೆಯಲ್ಲಿ  ತಹಶಿಲ್ದಾರ್ ಮತ್ತು ಪಿಎಸ್​​​ಐ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಗಲಕೋಟೆಯ ತಹಶೀಲ್ದಾರ್ ಕಚೇರಿಯಲ್ಲಿ ಪಹಣಿ ತಿದ್ದುಪಡಿ ಪ್ರಕರಣ: ತಹಶಿಲ್ದಾರ್ ಮತ್ತು ಪಿಎಸ್​​​ಐ ವಿರುದ್ಧ ಪ್ರತಿದೂರು ನೀಡಿದ ಮಹಿಳಾ ಶಿರಸ್ತೇದಾರ್
ಮಹಿಳಾ ಶಿರಸ್ತೇದಾರ್ ಶಾಂತಾ
TV9 Web
| Updated By: ವಿವೇಕ ಬಿರಾದಾರ|

Updated on:May 28, 2022 | 12:56 PM

Share

ಬಾಗಲಕೋಟೆ: ಬಾಗಲಕೋಟೆಯ (Bagalakote)  ತಹಶೀಲ್ದಾರ್ ಕಚೇರಿಯಲ್ಲಿ ಪಹಣಿ ತಿದ್ದುಪಡಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮಹಿಳಾ ಶಿರಸ್ತೇದಾರ್ ಶಾಂತಾ ವಿರುದ್ಧ ಆರೋಪ  ಕೇಳಿ ಬಂದಿದ್ದು, ಶಾಂತ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ತನ್ನ ಮೇಲೆ ಹೊರಸಿದ  ಆರೋಪವನ್ನು ನಿರಾಕರಿಸಿ ಬಾಗಲಕೋಟೆಯ ನವನಗರ ಮಹಿಳಾ ಪೋಲಿಸ ಠಾಣೆಯಲ್ಲಿ  ತಹಶಿಲ್ದಾರ್ ಮತ್ತು ಪಿಎಸ್​​​ಐ ವಿರುದ್ಧ ದೂರು ದಾಖಲಿಸಿದ್ದಾರೆ.  ತಹಶಿಲ್ದಾರ್ ಗುರುಸಿದ್ದಯ್ಯ ಹಿರೇಮಠ ವಿರುದ್ಧ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.  ಅವರು ನನ್ನ ಮೇಲಿನ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಎಫ್​ಐಆರ್​​ ದಾಖಲಿಸಿರುವ ಹಿಂದೆ ಷಡ್ಯಂತ್ರವಿದೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ: ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ?- ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರಶ್ನೆ

ಮಹಿಳಾ ಶಿರಸ್ತೇದಾರ್ ಶಾಂತಾ ಸುಳ್ಳು ದಾಖಲೆ ತಿದ್ದುಪಡಿ ಆರೋಪದ ಅಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು.  ಸದ್ಯ ಬಾಗಲಕೋಟೆ ತಹಶೀಲ್ದಾರ್ ವಿರುದ್ಧ ಮಹಿಳಾ ಶಿರಸ್ತೇದಾರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಮೇಲಿನ ದ್ವೇಷದಿಂದ ಸುಳ್ಳು ಪ್ರಕರಣ ದಾಖಲಿಸಿ ಸಿಕ್ಕಿಸುವ ಪ್ರಯತ್ನ ಮಾಡಿದ್ದಾರೆ. ನನಗೆ ಸಂಬಂಧ ಇಲ್ಲದ ಕೆಲಸದಲ್ಲಿ ನನ್ನ ಮೇಲೆ ಸುಳ್ಳು ಆರೋಪ ಮಾಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಅಭಿಲೇಖಾಲಯದಲ್ಲಿ ಪಹಣಿ ತಿದ್ದುಪಡಿ ವಿಚಾರದಲ್ಲಿ ನನ್ನದೇನು ಪಾತ್ರವಿಲ್ಲ. ಆದರೂ ನನ್ನ ಮೇಲೆ ಕೇಸ್ ದಾಖಲಿಸಲಾಗಿದೆ. ತಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿರೋ ಹಿಂದೆ ಷಡ್ಯಂತ್ರವಿದೆ ಎಂದು ಶಾಂತಾ ಕುಟುಂಬ ಸದಸ್ಯರೊಂದಿಗೆ ಪೊಲೀಸ್ ಠಾಣೆ ಎದುರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ
Image
Viral Photo: ಮತ್ಸ್ಯಕನ್ಯೆಯಂತೆ ಕಂಗೊಳಿಸುತ್ತಿರುವ ನಟಿ ಸೋನಾಕ್ಷಿ ಸಿನ್ಹಾ ಅವರ ಮಾಲ್ಡಿವ್ಸ್ ಫೋಟೋಗಳು ವೈರಲ್
Image
Jos Buttler: RCB ಬೌಲರ್​ಗಳ ಬೆಂಡೆತ್ತಿ ವಿಶೇಷ ದಾಖಲೆ ಬರೆದ ಜೋಸ್ ಬಟ್ಲರ್
Image
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್ ದಾಖಲು
Image
ವೈಶಾಲಿಯಾನ: ಇಂಗ್ಲಿಷ್! ಹೆಮ್ಮೆಯಿಂದ ಬಳಸುತ್ತಿದ್ದೇವೋ, ಸಂಕೋಚದಿಂದ ಮುದುಡಿ ಹೋಗುತ್ತಿದ್ದೇವೋ?

ಜಗಳೂರು ತಾಲೂಕಿ‌ನ ನರೇನಹಳ್ಳಿಯ ಸಿಆರ್​ಪಿಎಫ್​ ಯೋಧ ಸಾವು 

ದಾವಣಗೆರೆ: ಮಹಾರಾಷ್ಟ್ರ ದ ನಾಗಪುರನಲ್ಲಿ ಬಡಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಆರ್​ಪಿಎಫ್  ಯೋಧ  ಎನ್. ಜೆ.ಬಾಬು(48) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಸ್ವಗ್ರಾಮ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನರೇನಹಳ್ಳಿಗೆ ಪಾರ್ಥೀವ ಶರೀರ ಆಗಮಿಸಲಿದೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನು ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಎಫ್​ಐಆರ್ ದಾಖಲು

ಕೆಲ ದಿ‌ನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಬು, ಇದೇ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರಿಯರು ಓರ್ವ ಪುತ್ರ ಹಾಗು ಅಪಾರ ಬಂಧುಗಳನ್ನ ಬಾಬು ಅಗಲಿದ್ದಾರೆ.  ಗ್ರಾಮಕ್ಕೆ ಸಿಆರ್ ಪಿಎಫ್ ಯೋಧರು ಜಗಳೂರು ತಹಶಿಲ್ದಾರ ಹಾಗೂ ಪೊಲೀಸ್ ಅಧಿಕಾರಿಗಳ ಆಗಮಸಿದ್ದು, ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಅಳ್ನಾವರ ಪಟ್ಟಣದಲ್ಲಿ ಬೀಗ ಮುರಿದು ಅಂಗಡಿಗಳ ಕಳ್ಳತನ

ಧಾರವಾಡ: ಅಳ್ನಾವರ ಪಟ್ಟಣದಲ್ಲಿ ಬೀಗ ಮುರಿದು ಅಂಗಡಿಗಳನ್ನು ಕಳ್ಳತನ ಮಾಡಿರೊ ಘಟನೆ ನಡೆದಿದೆ. ಬಟ್ಟೆ ಮತ್ತು ಔಷಧ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಸತೀಶ ತಿಗಡೊಳ್ಳಿ ಮತ್ತು ಭೂಮಣ್ಣವರ ಅನ್ನೋರ ಅಂಗಡಿಗಳು ಕಳ್ಳತನವಾಗಿವೆ. ಸ್ಥಳಕ್ಕೆ ಅಳ್ನಾವರ ಪೊಲೀಸರು ಭೇಟಿ ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸುತ್ತಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Sat, 28 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ