AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಪಂಚಮಸಾಲಿ ಮೂರನೆ ಪೀಠದ ಕಹಳೆ; ಸಮುದಾಯದ ಸ್ವಾಮೀಜಿಗಳ ಗೌಪ್ಯ ಸಭೆ

ದೀಪಾವಳಿ ಬಳಿಕ ಕಟ್ಟಡಕ್ಕೆ ಶಂಕುಸ್ಥಾಪನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಮದ್ಯಾಹ್ನ 1 ರಿಂದ ನಾಲ್ಕು ಗಂಟೆವರೆಗೆ ಮೂರು ತಾಸುಗಳ ಕಾಲ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಮತ್ತೆ ಪಂಚಮಸಾಲಿ ಮೂರನೆ ಪೀಠದ ಕಹಳೆ; ಸಮುದಾಯದ ಸ್ವಾಮೀಜಿಗಳ ಗೌಪ್ಯ ಸಭೆ
ಪಂಚಮಸಾಲಿ ಸಮಾಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 17, 2021 | 9:45 PM

Share

ಬಾಗಲಕೋಟೆ: ಪಂಚಮಸಾಲಿ ಮೂರನೇ ಪೀಠದ ವಿಚಾರವಾಗಿ ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಂದ ಗೌಪ್ಯ ಸಭೆ ನಡೆಸಲಾಗಿದೆ ಎಂದು ಇಂದು (ಅಕ್ಟೋಬರ್ 17) ಮಾಹಿತಿ ಲಭ್ಯವಾಗಿದೆ. ಅಲಗೂರು ಪುನರ್ವಸತಿ ಕೇಂದ್ರದಲ್ಲಿ ಗೌಪ್ಯ ಸಭೆ ನಡೆಸಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಎಂಬಲ್ಲಿನ ಸಮುದಾಯದ ಮುಖಂಡರೊಬ್ಬರ ಮನೆಯಲ್ಲಿ ಸಭೆ ನಡೆಸಲಾಗಿದೆ.

ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ 20 ಪಂಚಮಸಾಲಿ ಸ್ವಾಮೀಜಿಗಳು ಸಭೆಯಲ್ಲಿ ಭಾಗಿ ಆಗಿದ್ದಾರೆ ಎಂದು ತಿಳಿದುಬಂದಿದೆ. ಪಂಚಮಸಾಲಿ ಮೂರನೇ ಪೀಠದ ಕಟ್ಟಡದ ಬಗ್ಗೆ ಚರ್ಚೆ ನಡೆಸಲಾಗಿದೆ. ದೀಪಾವಳಿ ಬಳಿಕ ಕಟ್ಟಡಕ್ಕೆ ಶಂಕುಸ್ಥಾಪನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಮದ್ಯಾಹ್ನ 1 ರಿಂದ ನಾಲ್ಕು ಗಂಟೆವರೆಗೆ ಮೂರು ತಾಸುಗಳ ಕಾಲ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಜಮಖಂಡಿ ನಗರದಲ್ಲಿ ಸ್ವಾಮೀಜಿಗಳು ಹಾಗೂ ಮುಖಂಡರು ಎರಡು ಬಾರಿ ಸಭೆ ನಡೆಸಿದ್ದರು. ಜಮಖಂಡಿ ನಗರದಲ್ಲಿ ಇದು ಮೂರನೆ ಬಾರಿ ನಡೆದ ಪಂಚಮಸಾಲಿ ಸ್ವಾಮೀಜಿಗಳ ಸಭೆಯಾಗಿದೆ. ಬಬಲೇಶ್ವರ ಮಠದ ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಮನಗೂಳಿ ಹಿರೆಮಠದ ಸಂಗನಬಸವ ಸ್ವಾಮೀಜಿ, ಕುಂಚನೂರು ಸಿದ್ದಲಿಂಗದೇವರು, ಅಲಗೂರು ಲಕ್ಷ್ಮಣ ಮುತ್ಯಾ ಸ್ವಾಮೀಜಿ, ಗೋಕಾಕ್​ನ ಗುರುಬಸವ ಸ್ವಾಮೀಜಿ ಸೇರಿದಂತೆ 20 ಸ್ವಾಮೀಜಿಗಳು ಸಭೆಯಲ್ಲಿ ಭಾಗಿ ಆಗಿರುವ ಬಗ್ಗೆ ತಿಳಿದುಬಂದಿದೆ.

ಇದನ್ನೂ ಓದಿ: ಸಿಎಂ ಭರವಸೆ: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದೂಡಲು ಜಯಮೃತ್ಯುಂಜಯ ಸ್ವಾಮೀಜಿ ನಿರ್ಧಾರ

ಇದನ್ನೂ ಓದಿ: ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಸರ್ಕಾರ ಮರೆತಿದೆ ಎಂದ ಜಯಮೃತ್ಯುಂಜಯ ಸ್ವಾಮೀಜಿ, ನೆನಪಿದೆ ಎಂದ ಮುರುಗೇಶ್ ನಿರಾಣಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?