AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ: ಸರ್ಕಾರದ ಮೇಲೆ ಒತ್ತಡ ಹೇರಲು ಮೂರು ನಿರ್ಣಯ

ಮೀಸಲಾತಿ ಹೋರಾಟ ಯಾತ್ರೆಗೆ 1 ವರ್ಷವಾದ ಹಿನ್ನೆಲೆಯಲ್ಲಿ ‘ಮೀಸಲಾತಿಗಾಗಿ ಜನಾಕ್ರೋಶ’ ಹೆಸರಿನಲ್ಲಿ ಸಂಕ್ರಾಂತಿ ಹಬ್ಬದ ದಿನ ಕೂಡಲಸಂಗಮದಲ್ಲಿ ಪಂಚಮಸಾಲಿ ಪಾದಯಾತ್ರೆ ವರ್ಷಾಚರಣೆ ನಡೆಸಲಾಗುವುದು.

ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ: ಸರ್ಕಾರದ ಮೇಲೆ ಒತ್ತಡ ಹೇರಲು ಮೂರು ನಿರ್ಣಯ
ಬಸವ ಜಯಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 09, 2021 | 10:19 PM

Share

ಬಾಗಲಕೋಟೆ: ಪಂಚಮಸಾಲಿ ಸಮುದಾಯದ ರಾಜ್ಯ ಕಾರ್ಯಕಾರಿಣಿ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ಮೂರು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಮೀಸಲಾತಿ ಹೋರಾಟ ಯಾತ್ರೆಗೆ 1 ವರ್ಷವಾದ ಹಿನ್ನೆಲೆಯಲ್ಲಿ ‘ಮೀಸಲಾತಿಗಾಗಿ ಜನಾಕ್ರೋಶ’ ಹೆಸರಿನಲ್ಲಿ ಸಂಕ್ರಾಂತಿ ಹಬ್ಬದ ದಿನ ಕೂಡಲಸಂಗಮದಲ್ಲಿ ಪಂಚಮಸಾಲಿ ಪಾದಯಾತ್ರೆ ವರ್ಷಾಚರಣೆ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಮೀಸಲಾತಿ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಮೀಸಲಾತಿ ಪಡೆಯುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ಪಂಚಮಸಾಲಿ ಸಮಾಜದ ಹಾಲಿ‌ ಮತ್ತು ಮಾಜಿ ಶಾಸಕರ ಸಭೆ ಕರೆಯಲಾಗಿದೆ. ಬೆಳಗಾವಿಯಲ್ಲಿ ಡಿಸೆಂಬರ್ 15ರಂದು ಸಂಜೆ 5 ಗಂಟೆಗೆ ಸಭೆ ಕರೆಯಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಗೆ ಬಂದು ಮಾಹಿತಿ ನೀಡಬೇಕು ನಿರ್ಣಯ ತೆಗೆದುಕೊಳ್ಳಲಾಯಿತು.

1995ನೇ ಇಸವಿಯಲ್ಲಿ ಸ್ಥಾಪನೆಯಾದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯೇ ಅಂತಿಮ. ಸರ್ಕಾರವು ಇದೀಗ ಹೊಸದಾಗಿ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಯನ್ನು ರದ್ದು ಪಡಿಸಬೇಕು ಎಂದು ನಿರ್ಣಯಿಸಲಾಯಿತು. ಬಾಗಲಕೋಟೆಯ ಖಾಸಗಿ ಹೊಟೆಲ್ ಒಂದರಲ್ಲಿ ನಡೆದ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಸಕ ಬಸನಗೌಡ ಪಾಟಿಲ್ ಯತ್ನಾಳ್, ಶಾಸಕ ಅರವಿಂದ ಬೆಲ್ಲದ ಹಾಗೂ ಸಮಾಜದ ಗಣ್ಯರು ಪಾಲ್ಗೊಂಡಿದ್ದರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ನಾಯಕತ್ವದಲ್ಲಿ ಸಭೆ ನಡೆಯಿತು.

ಸ್ವಾಮೀಜಿ ಘೋಷಿಸಿದ ಮೂರು ನಿರ್ಣಯಗಳು 1) ಪಂಚಮಸಾಲಿ ಮೀಸಲಾತಿ ಹೋರಾಟ ಪಾದಯಾತ್ರೆ ಮುಗಿದು ಒಂದು ವರ್ಷವಾದ ನೆನಪಿಗೆ ‘ಮೀಸಲಾತಿಗಾಗಿ ಜನಾಕ್ರೋಶ’ ಎಂಬ ಶೀರ್ಷಿಕೆಯಡಿ, ಅಂತಿಮ ಘೋಷಣೆಗಾಗಿ ಜನವರಿ 14, 2022ರ ಸಂಕ್ರಾಂತಿಯಂದು ಕೂಡಲಸಂಗಮದಲ್ಲಿ ಪಂಚಮಸಾಲಿ ಪಾದಯಾತ್ರೆ ವರ್ಷಾಚರಣೆ. 2) ಸರ್ಕಾರದ ಮೇಲೆ ಒತ್ತಡ ಹೇರಲು ಡಿಸೆಂಬರ್ 15ರಂದು ಸಂಜೆ 5 ಗಂಟೆಗೆ ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ‌ ಮಾಜಿ ಶಾಸಕರ ಸಭೆ. ಸಭೆಗೆ ಮುಖ್ಯಮಂತ್ರಿಗೂ ಆಹ್ವಾನ. ೩) 1995ರಲ್ಲಿ ರಚನೆಯಾದ ಶಾಸ್ವತ ಹಿಂದುಳಿದ ವರ್ಗದ ಆಯೋಗದ ವರದಿಯೇ ಅಂತಿಮ. ಸರ್ಕಾರವು ಇದೀಗ ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿ ರದ್ದು ಪಡಿಸಬೇಕು.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ: ಸಿಎಂ ಭರವಸೆ ಒಪ್ಪಿದ ಬಸವ ಜಯಮೃತ್ಯುಂಜಯಶ್ರೀ ಇದನ್ನೂ ಓದಿ: ಪಂಚಮಸಾಲಿ 3ನೇ ಪೀಠ ರಚನೆಗಾಗಿ ಜಮಖಂಡಿಯಲ್ಲಿ ಟ್ರಸ್ಟ್​ ನೋಂದಣಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ