AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯೊಳಗೆ ನುಗ್ಗಿದ ಪ್ರಕರಣ ಬಾಗಲಕೋಟೆಗೆ ಲಿಂಕ್, ನಿವೃತ್ತ ಡಿವೈಎಸ್​ಪಿ ಪುತ್ರನನ್ನು ದೆಹಲಿಗೆ ಕರೆದೊಯ್ದ ಪೊಲೀಸ್ರು

Parliament security breach Case: ಲೋಕಸಭೆಯಲ್ಲಿ ಮನೋರಂಜನ್ ಹಾಗೂ ಇತರರಿಂದ ಸ್ಪ್ರೇ ದಾಳಿ ಪ್ರಕರಣಕ್ಕೆ ಬಾಗಲಕೋಟೆಗೂ ಲಿಂಕ್ ಇರುವುದು ಬೆಳಕಿಗೆ ಬಂದಿದೆ. ಈ ಪ್ರಕರಣದ ಬಂಧಿತ ಆರೋಪಿ ಮನೋರಂಜನ್​ ಸ್ನೇಹಿತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡು ಹೊಗಿದ್ದಾರೆ.

ಲೋಕಸಭೆಯೊಳಗೆ ನುಗ್ಗಿದ ಪ್ರಕರಣ ಬಾಗಲಕೋಟೆಗೆ ಲಿಂಕ್, ನಿವೃತ್ತ ಡಿವೈಎಸ್​ಪಿ ಪುತ್ರನನ್ನು ದೆಹಲಿಗೆ ಕರೆದೊಯ್ದ ಪೊಲೀಸ್ರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 22, 2023 | 10:13 AM

Share

ಬಾಗಲಕೋಟೆ, (ಡಿಸೆಂಬರ್ 20): ಲೋಕಸಭೆಯಲ್ಲಿ ಮನೋರಂಜನ್ ಹಾಗೂ ಇತರರಿಂದ ಸ್ಪ್ರೇ ದಾಳಿ ಪ್ರಕರಣಕ್ಕೆ ಬಾಗಲಕೋಟೆಗೂ ಲಿಂಕ್ ಇರುವುದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಬಂಧನವಾಗಿರುವ ಮೈಸೂರಿನ ಮನೋರಂಜನ್​ಗೆ ಬಾಗಲಕೋಟೆ ನಿವೃತ್ತ DySP ಪುತ್ರ ಸಾಯಿಕೃಷ್ಣಗೂ ಲಿಂಕ್ ಇದ್ದು, ಸದ್ಯ ಸಾಯಿಕೃಷ್ಣನನ್ನು ಪೊಲೀಸರು ವಿಚಾರಣೆಗೊಳಪಡಿಸಿ ಬಳಿಕ ದೆಹಲಿಗೆ ಕರೆದೊಯ್ದಿದ್ದಾರೆ.

ಮನೋರಂಜನ್ ತನ್ನ ಡೈರಿಯಲ್ಲಿ ಸಾಯಿಕೃಷ್ಣ ಹೆಸರು ಬರೆದಿದ್ದ. ಈ ಆಧಾರದ ಮೇಲೆ ದೆಹಲಿ ಪೊಲೀಸರು ಸಾಯಿಕೃಷ್ಣನನ್ನು ವಿಚಾರಣೆಗೊಳಡಿಸಿದ್ದಾರೆ. ಮನೋರಂಜನ್ ಹಾಗೂ ಸಾಯಿಕೃಷ್ಡ ಸ್ನೇಹಿತರಾಗಿದ್ದು, ಬೆಂಗಳೂರು ಬಿಐಟಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಇಬ್ಬರೂ ಕ್ಲಾಸ್ಮೇಟ್. ಅಲ್ಲದೇ 2008-2009ರಲ್ಲಿ ರೂಮ್ ಮೇಟ್ ಆಗಿದ್ದರು. 2012ರಲ್ಲಿ ಸಾಯಿಕೃಷ್ಣ ದೆಹಲಿಗೆ ಹೋಗಿದ್ದ. ಸದ್ಯ ಸಾಯಿಕೃಷ್ಣ ಎನ್ರಿಚ್ ವಿಡಿಯೋ ಕಂಪನಿ ಸೀನಿಯರ್ ಸಾಪ್ಟವೇರ್ ಇಂಜಿನಿಯರ್ ಆಗಿದ್ದಾನೆ.

ಇದನ್ನೂ ಓದಿ: ಸಂಸತ್​​ನ ಒಳಗೆ ನುಗ್ಗಿದ ಯುವಕರ ಉದ್ದೇಶವೇನಿತ್ತು? ಪೊಲೀಸ್ ವಿಚಾರಣೆ ವೇಳೆ ಅವರು ಹೇಳಿದ್ದು ಹೀಗೆ

ದೆಹಲಿ ಕಮೀಷನರೇಟ್​ನ ಪಿಎಸ್​ಐ ಪಿಂಟು ಶರ್ಮಾ ಹಾಗೂ ನಾಲ್ಕು ಸಿಬ್ಬಂದಿ ತಂಡ ಇಂದು ಸಂಜೆ 7 ಗಂಟೆಗೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ನಿವೃತ್ತ ಡಿವೈಎಸ್ ಪಿ ವಿಠ್ಠಲ ಜಗಲಿ ನಿವಾಸಕ್ಕೆ ಭೇಟಿ ಸಾಯಿಕೃಷ್ಣನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನವನಗರ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ. ಬಳಿಕ ದೆಹಲಿಗೆ ಕರೆದೊಯ್ದಿದ್ದಾರೆ.

ಸಾಯಿಕೃಷ್ಣ ಸಹೋದರಿ ಹೇಳಿದ್ದೇನು?

ಇನ್ನು ಈ ಬಗ್ಗೆ ಟಿವಿ9ಗೆ ಸಾಯಿಕೃಷ್ಣ ಸಹೋದರಿ ಸ್ಪಂದನಾ ಪ್ರತಿಕ್ರಿಯಿಸಿದ್ದು, ನಮ್ಮ ಸಹೋದರ ಯಾವುದೇ ತಪ್ಪು ಮಾಡಿಲ್ಲ. ಆತ ಮನೋರಂಜನ್ ಸ್ನೇಹಿತ ಮಾತ್ರ. ಸ್ನೇಹಿತನಾದ ಕಾರಣ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಎಲ್ಲ ತನಿಖೆಗೆ ನಾವು ಸಿದ್ದರಿದ್ದೇವೆ. ತಪ್ಪೇ ಮಾಡಿಲ್ಲ ಅಂದ್ರೆ ಹೆದರುವುದ್ಯಾಕೆ? ಎರಡು ದಿನದಿಂದ ದೆಹಲಿ ಪೊಲೀಸರು ಬಂದು ವಿಚಾರಣೆ ನಡೆಸಿದ್ದಾರೆ. ಎಲ್ಲದಕ್ಕೂ ಸಹಕರಿಸಿದ್ದೇವೆ. ಮನೆಯಿಂದ ವರ್ಕ್ ಪ್ರಾಮ್ ಹೋಮ್ ಕೆಲಸ ಮಾಡುತ್ತಿದ್ದಾನೆ. ನಮ್ಮ ಸಹೋದರ ನಿರಪರಾಧಿ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 pm, Wed, 20 December 23

Follow Us
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?