AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Bail: 12 ಕೋಟಿ ವಂಚನೆ -ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!

Bagalkot DCC Bank: ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಲ್ಲಿ ಜವಾನ ಕೆಲಸ‌ ಮಾಡುತ್ತಿದ್ದ ವೇಳೆ ಬ್ಯಾಂಕ್ ಮ್ಯಾನೇಜರ್ ಐ.ಡಿ. ಬಳಸಿ 12 ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಜವಾನನಿಗೆ ಸುಪ್ರೀಂ ಕೋರ್ಟ್ ಇದೀಗ ಜಾಮೀನು ದಯಪಾಲಿಸಿದೆ.

Supreme Bail: 12 ಕೋಟಿ ವಂಚನೆ -ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!
12 ಕೋಟಿ ವಂಚನೆ: ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!
TV9 Web
| Updated By: ಸಾಧು ಶ್ರೀನಾಥ್​|

Updated on: Nov 26, 2022 | 12:39 PM

Share

ಬಾಗಲಕೋಟೆ: ಇಲ್ಲಿನ ಡಿಸಿಸಿ ಬ್ಯಾಂಕ್ ಗೆ ಬರೋಬ್ಬರಿ 12 ಕೋಟಿ ರೂಪಾಯಿ ವಂಚನೆ ಮಾಡಿದ್ದ ಬ್ಯಾಂಕಿನ ಜವಾನ ಪ್ರವೀಣ ಪತ್ರಿ ಸೀದಾ ಸುಪ್ರೀಂ ಕೋರ್ಟ್ (Supreme Court) ಕದ ತಟ್ಟಿ ಅಲ್ಲೀಮದ ಜಾಮೀನು (Bail) ತಂದಿದ್ದಾನೆ. ಸದರಿ ಡಿಸಿಸಿ ಬ್ಯಾಂಕಿನ ಮ್ಯಾನೇಜರ್ ಗಳ ಐಡಿ ಬಳಸಿ ತನ್ನ ಹಾಗೂ ಇತರರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದ ಆರೋಪ ಪ್ರವೀಣ ಪತ್ರಿ (Peon Praveen Patri) ಮೇಲಿತ್ತು ಎಂಬುದು ಇಲ್ಲಿ ದಾಖಲಾರ್ಹ.

ಬಾಗಲಕೋಟ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (Bagalkot District Central Co op Bank) ನಲ್ಲಿ ಗ್ರಾಹಕರು ಇಟ್ಟಿದ್ದ ಫಿಕ್ಸೆಡ್​​ ಡೆಪಾಸಿಟ್ (ಎಫ್.ಡಿ) ಮೇಲಿನ ಬಡ್ಡಿ ಹಣದಲ್ಲಿ 12 ಕೋಟಿ ರೂಪಾಯಿ ವಂಚನೆ ಮಾಡಿದ್ದ ಇದೇ ಪ್ರವೀಣ ಪತ್ರಿ. ಈತ ಸಿನಿಮಾ, ಅಲ್ಬಂ ಸಾಂಗ್, ನಾಟಕ, ಯುವಕರ ಪಡೆ ಕಟ್ಟಿಕೊಂಡು ಫುಲ್ ಹವಾ ಕ್ರಿಯೇಟ್ ಮಾಡಿಕೊಳ್ಳೋದರಲ್ಲಿ ಹೆಸರಿಗೆ ತಕ್ಕಂತೆ ಪ್ರವೀಣನಾಗಿದ್ದ. ಅದೂ ಸಾಲದು ಅಂತಾ ಹೆಲಿಕಾಪ್ಟರ್ ಓಡಾಟ, ಮೋಜು ಮಸ್ತಿ, ವಿದ್ಯಾರ್ಥಿಗಳಿಗೆ, ಜಾತ್ರೆಗಳಿಗೆ ಪುಕ್ಸಟ್ಟೆ ಹಣ ದಾನ ಮಾಡಿ ಬಿಲ್ಡಪ್ ಪಡೆಯುತ್ತಿದ್ದ. P ದಿಕ್ಷಿತ್ ಎಂದು ಹೆಸರಿಟ್ಟುಕೊಂಡು ಜ್ಯೂನಿಯರ್ ರಘು ದಿಕ್ಷಿತ್ ಅಂತಾ ಗಿಟಾರ್ ಹಿಡಿದು ಪೋಸ್ ಕೊಡ್ತಿದ್ದ ಈ ಪ್ರವೀಣ ಪತ್ರಿ.

ಹೆಲಿಕಾಪ್ಟರ್ ಮೋಜು ಮಸ್ತಿ ಮಾಡಿಕೊಂಡಿದ್ದ ಆರೋಪಿಗೆ ಜಾಮೀನು ದಯಪಾಲಿಸಿದ ಸುಪ್ರೀಂ ಕೋರ್ಟ್!

Peon Praveen Patri who allegedly did 12 crore rupees fraud in Bagalkot DCC Bank got bail in Supreme Court 3

ಡಿಸಿಸಿ ಬ್ಯಾಂಕ್ ಶಾಖೆಗಳಾದ ಅಮೀನಗಢ, ಕಮತಗಿ, ಗೂಡೂರು ಈ ಮೂರೂ ಡಿಸಿಸಿ ಬ್ಯಾಂಕ್ ನಲ್ಲಿ ಈತ ಜವಾನ ಕೆಲಸ‌ ಮಾಡುತ್ತಿದ್ದ. ಜವಾನನಾಗಿದ್ದ ವೇಳೆ ಆಯಾ ಬ್ಯಾಂಕ್ ಮ್ಯಾನೇಜರ್ ಐಡಿ ಬಳಸಿ ವಂಚನೆ ಮಾಡಿದ್ದ. 12 ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಆರೋಪಿ ಜವಾನನಿಗೆ ಸುಪ್ರೀಂ ಕೋರ್ಟ್ ನಿಂದ ಇದೀಗ ಜಾಮೀನು ದಯಪಾಲಿಸಿದೆ. ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ಮೊದಲು ಡಿಸಿಸಿ ಬ್ಯಾಂಕ್‌ನಿಂದ ದೂರು ದಾಖಲಾಗಿತ್ತು.

Peon Praveen Patri who allegedly did 12 crore rupees fraud in Bagalkot DCC Bank got bail in Supreme Court 2

ಮುಂದೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿತ್ತು. ಈ ಮಧ್ಯೆ, ನವೆಂಬರ್ 10ರಂದು ಸುಪ್ರೀಂ ಕೋರ್ಟ್ ನಿಂದ ಜಾಮೀನು ದಕ್ಕಿದೆ. ಧಾರವಾಡ ಹೈಕೋರ್ಟ್​​ನಲ್ಲಿಯೂ ಸಹ ಆರೋಪಿ ಪ್ರವೀಣ ಪತ್ರಿಗೆ ಜಾಮೀನು ರದ್ದಾಗಿತ್ತು. ಜಾಮೀನು ರದ್ದು ಆದೇಶ ಪ್ರಶ್ನಿಸಿ ಪ್ರವೀಣ ಸುಪ್ರೀಂ ಕೋರ್ಟ್ ಗೆ ಜಾಮೀನು ಸಲ್ಲಿಸಿದ್ದ. ಮುಂದಿನ ಆದೇಶದವರೆಗೂ ಪ್ರವೀಣ ಪತ್ರಿಗೆ ಬಾಧಕವಾಗುವಂತಹ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ. ಪ್ರವೀಣ ಪತ್ರಿ ಕೂಡ ತನಿಖೆಗೆ ಎಲ್ಲ ರೀತಿಯಿಂದಲೂ ಸಹಕರಿಸಬೇಕು ಎಂದು ಸುಪ್ರೀಂ ಆದೇಶದಲ್ಲಿ ತಿಳಿಸಲಾಗಿದೆ. ಸುಪ್ರೀಂ ಕೊರ್ಟ್ ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು