AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಎಸಿಪಿ, ಡಿಸಿಪಿ ಅಂತ ಪೊಲೀಸರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದ ವಿಕಲಚೇತನ ವ್ಯಕ್ತಿ

ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಡಿಹೆಚ್​ಒನಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣ ವರದಿಯಾಗಿತ್ತು. ಇದೀಗ ತಾನು ಎಸಿಪಿ, ಡಿಸಿಪಿ ಅಂತ ಪೊಲೀಸರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಎಫ್​ಐರ್​ ದಾಖಲಾಗಿದೆ.

ಬಾಗಲಕೋಟೆ: ಎಸಿಪಿ, ಡಿಸಿಪಿ ಅಂತ ಪೊಲೀಸರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದ ವಿಕಲಚೇತನ ವ್ಯಕ್ತಿ
ಬನಹಟ್ಟಿ ಪೊಲೀಸ್​ ಠಾಣೆ, ಆರೋಪಿ ಅಪ್ಪು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 14, 2024 | 11:54 AM

Share

ಬಾಗಲಕೋಟೆ, ಜುಲೈ 14: ಎಸಿಪಿ (ACP) ಮತ್ತು ಡಿಸಿಪಿ (DCP) ಅಂತ ಹೇಳಿಕೊಡು ಇನ್ಸಪೆಕ್ಟರ್, ಬೀಟ್ ಪೊಲೀಸರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ವ್ಯಕ್ತಿಯ ವಿರುದ್ಧ ಬನಹಟ್ಟಿ ಪೊಲೀಸ್​ ಠಾಣೆಯಲ್ಲಿ (Banhatti Police Station) ಎಫ್​ಐಆರ್ ದಾಖಲಾಗಿದೆ. ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಆರೋಪಿ, ವಿಕಲಚೇನ ಅಪ್ಪು ಹಿರೇಮಠ ಬನಹಟ್ಟಿ ಠಾಣೆ ಪೊಲೀಸರಿಗೆ ಕರೆ ಮಾಡಿ “ನಾನು ಡಿಸಿಪಿ, ನೀವು ಸರಿಯಾಗಿ ಕರ್ತವ್ಯ ಮಾಡುತ್ತಿಲ್ಲ. ನಿಮ್ಮ ವ್ಯಾಪ್ತಿಯಲ್ಲಿ ಅನೇಕ ಕಾನೂನು ಬಾಹಿರ ದಂದೆ‌ ನಡೆಯುತ್ತಿವೆ. ನಿಯಂತ್ರಣ ಮಾಡುತ್ತಿಲ್ಲ. ನಿಮ್ಮ ವಿರುದ್ಧ ಕ್ರಮ ಕೈಗೊಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನು. ನಂತರ ಇಂತಿಷ್ಟು ಹಣ ಫೋನ್​ ಪೇ ಮಾಡಿ ಎಂದು ಬೇಡಿಕೆ ಇಟ್ಟಿದ್ದನು.”

ಈತನ ಜಾಲ ಪತ್ತೆಹಚ್ಚಿದ ಪೊಲೀಸರು ಆರೋಪಿ ಅಪ್ಪು ಹಿರೇಮಠನನ್ನು ಠಾಣೆಗೆ ಎತ್ತಾಕೊಂಡು ಬಂದಿದ್ದಾರೆ. ಆಗ, ಈತ ವಿಕಲಚೇತನ ವ್ಯಕ್ತಿ ಎಂದು ತಿಳಿದಿದೆ. ಬಳಿಕ ಪೊಲೀಸರು ಅಪ್ಪು ಹಿರೇಮಠನನ್ನು ವಿಚಾರಣೆ ನಡೆಸಿದಾಗ ಈ ಹಿಂದೆ ಜಮಖಂಡಿ, ಬೆಳಗಾವಿ, ಶಿವಮೊಗ್ಗದಲ್ಲೂ ಇದೇ ಮಾದರಿ ಕೃತ್ಯವೆಸಗಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬೆಳಗಾವಿ, ಜಮಖಂಡಿ, ಶಿವಮೊಗ್ಗದಲ್ಲೂ ಈತನ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರಿಗೆ ತಿಳಿದಿದೆ. ನಂತರ ಪೊಲೀಸರು ವಿಕಲಚೇತನ ಅಪ್ಪು ಹಿರೇಮಠಗೆ ಅನುಕಂಪದ ಹಿನ್ನೆಲೆಯಲ್ಲಿ ನೊಟೀಸ್ ಕೊಟ್ಟು ಕಳುಹಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​

ಡಿಹೆಚ್​ಒಗೆ 7 ಲಕ್ಷ ಪಂಗನಾಮ

ತಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಅಂತ ಹೇಳಿ ರಾಮಯ್ಯ ಎಂಬ ವ್ಯಕ್ತಿ ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀ ಅವರಿಗೆ 7 ಲಕ್ಷ ರೂ. ವಂಚಿಸಿದ್ದನು. ಈ ಸಂಬಂಧ ಬೆಂಗಳೂರಿನ ಸಿಸಿಬಿಯಲ್ಲಿ ದೂರು ದಾಖಲಾಗಿದೆ.

ಜಯಶ್ರೀ ಮತ್ತು ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಡಿಹೆಚ್​ಒ ಕುರ್ಚಿಗಾಗಿ ತಿಕ್ಕಾಟ ನಡೆದಿತ್ತು. ಈ ಮಧ್ಯೆ ಡಿಹೆಚಒ ಜಯಶ್ರೀ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಇದನ್ನು ತಡೆ ನೀಡುವಂತೆ ಜಯಶ್ರೀ ಅವರಿಗೆ ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದರು.

ಈ ವಿಧಾನಸೌಧ ಬಳಿ ರಾಮಯ್ಯ ಎಂಬ ವ್ಯಕ್ತಿ ಜಯಶ್ರೀ ಅವರಿಗೆ ಪರಿಚಯವಾಗಿದ್ದನು. ಆತ ನಾನು ಸಿಎಂ ಸಿದ್ದರಾಮಯ್ಯ ಆಪ್ತ, ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಅಂತ 7 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Sun, 14 July 24

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ