AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಎಸಿಪಿ, ಡಿಸಿಪಿ ಅಂತ ಪೊಲೀಸರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದ ವಿಕಲಚೇತನ ವ್ಯಕ್ತಿ

ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಡಿಹೆಚ್​ಒನಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣ ವರದಿಯಾಗಿತ್ತು. ಇದೀಗ ತಾನು ಎಸಿಪಿ, ಡಿಸಿಪಿ ಅಂತ ಪೊಲೀಸರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಎಫ್​ಐರ್​ ದಾಖಲಾಗಿದೆ.

ಬಾಗಲಕೋಟೆ: ಎಸಿಪಿ, ಡಿಸಿಪಿ ಅಂತ ಪೊಲೀಸರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದ ವಿಕಲಚೇತನ ವ್ಯಕ್ತಿ
ಬನಹಟ್ಟಿ ಪೊಲೀಸ್​ ಠಾಣೆ, ಆರೋಪಿ ಅಪ್ಪು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 14, 2024 | 11:54 AM

Share

ಬಾಗಲಕೋಟೆ, ಜುಲೈ 14: ಎಸಿಪಿ (ACP) ಮತ್ತು ಡಿಸಿಪಿ (DCP) ಅಂತ ಹೇಳಿಕೊಡು ಇನ್ಸಪೆಕ್ಟರ್, ಬೀಟ್ ಪೊಲೀಸರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ವ್ಯಕ್ತಿಯ ವಿರುದ್ಧ ಬನಹಟ್ಟಿ ಪೊಲೀಸ್​ ಠಾಣೆಯಲ್ಲಿ (Banhatti Police Station) ಎಫ್​ಐಆರ್ ದಾಖಲಾಗಿದೆ. ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಆರೋಪಿ, ವಿಕಲಚೇನ ಅಪ್ಪು ಹಿರೇಮಠ ಬನಹಟ್ಟಿ ಠಾಣೆ ಪೊಲೀಸರಿಗೆ ಕರೆ ಮಾಡಿ “ನಾನು ಡಿಸಿಪಿ, ನೀವು ಸರಿಯಾಗಿ ಕರ್ತವ್ಯ ಮಾಡುತ್ತಿಲ್ಲ. ನಿಮ್ಮ ವ್ಯಾಪ್ತಿಯಲ್ಲಿ ಅನೇಕ ಕಾನೂನು ಬಾಹಿರ ದಂದೆ‌ ನಡೆಯುತ್ತಿವೆ. ನಿಯಂತ್ರಣ ಮಾಡುತ್ತಿಲ್ಲ. ನಿಮ್ಮ ವಿರುದ್ಧ ಕ್ರಮ ಕೈಗೊಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದನು. ನಂತರ ಇಂತಿಷ್ಟು ಹಣ ಫೋನ್​ ಪೇ ಮಾಡಿ ಎಂದು ಬೇಡಿಕೆ ಇಟ್ಟಿದ್ದನು.”

ಈತನ ಜಾಲ ಪತ್ತೆಹಚ್ಚಿದ ಪೊಲೀಸರು ಆರೋಪಿ ಅಪ್ಪು ಹಿರೇಮಠನನ್ನು ಠಾಣೆಗೆ ಎತ್ತಾಕೊಂಡು ಬಂದಿದ್ದಾರೆ. ಆಗ, ಈತ ವಿಕಲಚೇತನ ವ್ಯಕ್ತಿ ಎಂದು ತಿಳಿದಿದೆ. ಬಳಿಕ ಪೊಲೀಸರು ಅಪ್ಪು ಹಿರೇಮಠನನ್ನು ವಿಚಾರಣೆ ನಡೆಸಿದಾಗ ಈ ಹಿಂದೆ ಜಮಖಂಡಿ, ಬೆಳಗಾವಿ, ಶಿವಮೊಗ್ಗದಲ್ಲೂ ಇದೇ ಮಾದರಿ ಕೃತ್ಯವೆಸಗಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬೆಳಗಾವಿ, ಜಮಖಂಡಿ, ಶಿವಮೊಗ್ಗದಲ್ಲೂ ಈತನ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರಿಗೆ ತಿಳಿದಿದೆ. ನಂತರ ಪೊಲೀಸರು ವಿಕಲಚೇತನ ಅಪ್ಪು ಹಿರೇಮಠಗೆ ಅನುಕಂಪದ ಹಿನ್ನೆಲೆಯಲ್ಲಿ ನೊಟೀಸ್ ಕೊಟ್ಟು ಕಳುಹಿಸಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​

ಡಿಹೆಚ್​ಒಗೆ 7 ಲಕ್ಷ ಪಂಗನಾಮ

ತಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಅಂತ ಹೇಳಿ ರಾಮಯ್ಯ ಎಂಬ ವ್ಯಕ್ತಿ ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀ ಅವರಿಗೆ 7 ಲಕ್ಷ ರೂ. ವಂಚಿಸಿದ್ದನು. ಈ ಸಂಬಂಧ ಬೆಂಗಳೂರಿನ ಸಿಸಿಬಿಯಲ್ಲಿ ದೂರು ದಾಖಲಾಗಿದೆ.

ಜಯಶ್ರೀ ಮತ್ತು ಶಾಸಕ ಹೆಚ್​ವೈ ಮೇಟಿ ಅಳಿಯ ರಾಜ್​ಕುಮಾರ್​ ಮಧ್ಯೆ ಡಿಹೆಚ್​ಒ ಕುರ್ಚಿಗಾಗಿ ತಿಕ್ಕಾಟ ನಡೆದಿತ್ತು. ಈ ಮಧ್ಯೆ ಡಿಹೆಚಒ ಜಯಶ್ರೀ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಇದನ್ನು ತಡೆ ನೀಡುವಂತೆ ಜಯಶ್ರೀ ಅವರಿಗೆ ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದರು.

ಈ ವಿಧಾನಸೌಧ ಬಳಿ ರಾಮಯ್ಯ ಎಂಬ ವ್ಯಕ್ತಿ ಜಯಶ್ರೀ ಅವರಿಗೆ ಪರಿಚಯವಾಗಿದ್ದನು. ಆತ ನಾನು ಸಿಎಂ ಸಿದ್ದರಾಮಯ್ಯ ಆಪ್ತ, ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಅಂತ 7 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Sun, 14 July 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?