AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್

ಬಾಗಲಕೋಟೆಯ ಖಾಸಗಿ ಸುದ್ದಿ ವಾಹನಿ ವರದಿಗಾರ ಎಂದು ಹೇಳಿಕೊಂಡು ತಿರುಗಾಡುವ ಬಂದೆನವಾಜ್ ಸರಕಾವಸ್ ಜಮಖಂಡಿ ‌ಬಿಜೆಪಿ ನಗರಮಂಡಳ ಅಧ್ಯಕ್ಷೆ, ಖಾಸಗಿ ಶಾಲಾ ಶಿಕ್ಷಕಿ ಗೀತಾ ಸೂರ್ಯವಂಶಿ ಅವರ ಅಶ್ಲೀಲ ವಿಡಿಯೊ ತಯಾರಿಸಿದ್ದಾನೆ.

ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್
ಸಾಂದರ್ಭಿಕ ಚಿತ್ರ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on:Nov 08, 2023 | 10:29 AM

Share

ಬಾಗಲಕೋಟೆ ನ.08: ಖಾಸಗಿ ಸುದ್ದಿ ವಾಹಿನಿಯ (Privet Channel) ವರದಿಗಾರನೊಬ್ಬ (Reporter) ಅಶ್ಲೀಲ ವಿಡಿಯೋ ತಯಾರಿಸಿ ಬಿಜೆಪಿ ಕಾರ್ಯಕರ್ತೆಗೆ (BJP Activist) ಬ್ಲ್ಯಾಕ್ ‌ಮೇಲ್ (Blackmail) ಮಾಡಿದ್ದಾನೆ. ಪ್ರಕರಣ ಸಂಬಂಧ ಜಮಖಂಡಿ (Jamkhandi) ‌ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದೆನವಾಜ್ ಸರಕಾವಸ್ ಎಂಬುವವನು ಕೃತ್ಯ ಎಸಗಿದ್ದಾನೆ. ಖಾಸಗಿ ಸುದ್ದಿ ವಾಹನಿ ವರದಿಗಾರ ಎಂದು ಹೇಳಿಕೊಂಡು ತಿರುಗಾಡುವ ಬಂದೆನವಾಜ್ ಸರಕಾವಸ್ ಜಮಖಂಡಿ ‌ಬಿಜೆಪಿ ನಗರಮಂಡಳ ಅಧ್ಯಕ್ಷೆ, ಖಾಸಗಿ ಶಾಲಾ ಶಿಕ್ಷಕಿ ಗೀತಾ ಸೂರ್ಯವಂಶಿ ಅವರ ಅಶ್ಲೀಲ ವಿಡಿಯೊ ತಯಾರಿಸಿದ್ದಾನೆ.

ಗೀತಾ ಸೂರ್ಯವಂಶಿ ಅವರ ಭಾವಚಿತ್ರದ ಕಣ್ಣಿಗೆ ಕಪ್ಪು ಪಟ್ಟಿ ಅಂಟಿಸಿದ್ದಾನೆ. ಬಳಿಕ ಅವರದ್ದೇ ಅಶ್ಲೀಲ ವಿಡಿಯೋ ಎಂಬಂತೆ ಬಿಂಬಿಸಲು ಯಾವುದೋ ಪೋರ್ನ್ ‌ದೃಶ್ಯವನ್ನು ಎಡಿಟ್​ ಮಾಡಿ ವಿಡಿಯೋ ತಯಾರಿಸಿದ್ದಾನೆ. ಅದಕ್ಕೆ ಬಿಜೆಪಿ ಕಾರ್ಯಕರ್ತೆಯ ರಾಸಲೀಲೆ ಎಂದು ಬರಹ ಹಾಕಿದ್ದು, ಎಮ್ಮೊ‌ ಎಮ್ಮೊ‌ ನೋಡ್ದೆ ನೋಡ್ದೆ ಹಾಡು ಅಳವಡಿಸಿದ್ದಾನೆ. ಈ ಸಂಬಂಧ ಗೀತಾ ಸೂರ್ಯವಂಶಿ ಅವರು ಜಮಖಂಡಿ ‌ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಇಬ್ಬರು ಯುವಕರೊಂದಿಗೆ ಪ್ರೀತಿಯ ನಾಟಕ; ವಿಷಯ ತಿಳಿದ ಪ್ರಿಯಕರರಿಂದ ಪ್ರೀಯತಮೆಗೆ ಬ್ಲ್ಯಾಕ್​​ಮೇಲ್, ಯುವತಿ ಆತ್ಮಹತ್ಯೆ

“ನನ್ನ ಹತ್ತಿರ‌‌ ನಿಮ್ಮ ರಾಸಲೀಲೆ ವಿಡಿಯೋ ಇದೆ. ನಾನು ಖಾಸಗಿ ಸುದ್ದಿ ವಾಹಿನಿ ವರದಿಗಾರ. ನೀವು ನನಗೆ ಭೇಟಿಯಾಗಬೇಕು. ನಾವು‌ ನೀವು ಕೂಡಿ‌ ಸರಿ‌ಮಾಡಿಕೊಳ್ಳೋಣ. ಸ್ವಲ್ಪ ದುಡ್ಡು ಖರ್ಚಾಗುತ್ತದೆ. ಖರ್ಚು ಮಾಡಲು ಸಿದ್ದ ಇರದೆ ಇದ್ದರೇ ವಿಡಿಯೋ ವೈರಲ್‌ ಮಾಡಿ ನಿಮ್ಮ ಮಾನ ಮರ್ಯಾದೆ ತೆಗೆಯುತ್ತೇನೆ. ಹಣ ನೀಡಿ ಮಾಡಿಕೊಂಡು ಸರಿ‌ಮಾಡಿಕೊಳ್ಳಿ‌” ಎಂದು ಕರೆ ಮಾಡಿ ಬ್ಲ್ಯಾಕ್ ‌ಮೇಲ್‌‌ ಮಾಡಿದ್ದಾನೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:15 am, Wed, 8 November 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More