ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್

ಬಾಗಲಕೋಟೆಯ ಖಾಸಗಿ ಸುದ್ದಿ ವಾಹನಿ ವರದಿಗಾರ ಎಂದು ಹೇಳಿಕೊಂಡು ತಿರುಗಾಡುವ ಬಂದೆನವಾಜ್ ಸರಕಾವಸ್ ಜಮಖಂಡಿ ‌ಬಿಜೆಪಿ ನಗರಮಂಡಳ ಅಧ್ಯಕ್ಷೆ, ಖಾಸಗಿ ಶಾಲಾ ಶಿಕ್ಷಕಿ ಗೀತಾ ಸೂರ್ಯವಂಶಿ ಅವರ ಅಶ್ಲೀಲ ವಿಡಿಯೊ ತಯಾರಿಸಿದ್ದಾನೆ.

ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Nov 08, 2023 | 10:29 AM

ಬಾಗಲಕೋಟೆ ನ.08: ಖಾಸಗಿ ಸುದ್ದಿ ವಾಹಿನಿಯ (Privet Channel) ವರದಿಗಾರನೊಬ್ಬ (Reporter) ಅಶ್ಲೀಲ ವಿಡಿಯೋ ತಯಾರಿಸಿ ಬಿಜೆಪಿ ಕಾರ್ಯಕರ್ತೆಗೆ (BJP Activist) ಬ್ಲ್ಯಾಕ್ ‌ಮೇಲ್ (Blackmail) ಮಾಡಿದ್ದಾನೆ. ಪ್ರಕರಣ ಸಂಬಂಧ ಜಮಖಂಡಿ (Jamkhandi) ‌ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದೆನವಾಜ್ ಸರಕಾವಸ್ ಎಂಬುವವನು ಕೃತ್ಯ ಎಸಗಿದ್ದಾನೆ. ಖಾಸಗಿ ಸುದ್ದಿ ವಾಹನಿ ವರದಿಗಾರ ಎಂದು ಹೇಳಿಕೊಂಡು ತಿರುಗಾಡುವ ಬಂದೆನವಾಜ್ ಸರಕಾವಸ್ ಜಮಖಂಡಿ ‌ಬಿಜೆಪಿ ನಗರಮಂಡಳ ಅಧ್ಯಕ್ಷೆ, ಖಾಸಗಿ ಶಾಲಾ ಶಿಕ್ಷಕಿ ಗೀತಾ ಸೂರ್ಯವಂಶಿ ಅವರ ಅಶ್ಲೀಲ ವಿಡಿಯೊ ತಯಾರಿಸಿದ್ದಾನೆ.

ಗೀತಾ ಸೂರ್ಯವಂಶಿ ಅವರ ಭಾವಚಿತ್ರದ ಕಣ್ಣಿಗೆ ಕಪ್ಪು ಪಟ್ಟಿ ಅಂಟಿಸಿದ್ದಾನೆ. ಬಳಿಕ ಅವರದ್ದೇ ಅಶ್ಲೀಲ ವಿಡಿಯೋ ಎಂಬಂತೆ ಬಿಂಬಿಸಲು ಯಾವುದೋ ಪೋರ್ನ್ ‌ದೃಶ್ಯವನ್ನು ಎಡಿಟ್​ ಮಾಡಿ ವಿಡಿಯೋ ತಯಾರಿಸಿದ್ದಾನೆ. ಅದಕ್ಕೆ ಬಿಜೆಪಿ ಕಾರ್ಯಕರ್ತೆಯ ರಾಸಲೀಲೆ ಎಂದು ಬರಹ ಹಾಕಿದ್ದು, ಎಮ್ಮೊ‌ ಎಮ್ಮೊ‌ ನೋಡ್ದೆ ನೋಡ್ದೆ ಹಾಡು ಅಳವಡಿಸಿದ್ದಾನೆ. ಈ ಸಂಬಂಧ ಗೀತಾ ಸೂರ್ಯವಂಶಿ ಅವರು ಜಮಖಂಡಿ ‌ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಇಬ್ಬರು ಯುವಕರೊಂದಿಗೆ ಪ್ರೀತಿಯ ನಾಟಕ; ವಿಷಯ ತಿಳಿದ ಪ್ರಿಯಕರರಿಂದ ಪ್ರೀಯತಮೆಗೆ ಬ್ಲ್ಯಾಕ್​​ಮೇಲ್, ಯುವತಿ ಆತ್ಮಹತ್ಯೆ

“ನನ್ನ ಹತ್ತಿರ‌‌ ನಿಮ್ಮ ರಾಸಲೀಲೆ ವಿಡಿಯೋ ಇದೆ. ನಾನು ಖಾಸಗಿ ಸುದ್ದಿ ವಾಹಿನಿ ವರದಿಗಾರ. ನೀವು ನನಗೆ ಭೇಟಿಯಾಗಬೇಕು. ನಾವು‌ ನೀವು ಕೂಡಿ‌ ಸರಿ‌ಮಾಡಿಕೊಳ್ಳೋಣ. ಸ್ವಲ್ಪ ದುಡ್ಡು ಖರ್ಚಾಗುತ್ತದೆ. ಖರ್ಚು ಮಾಡಲು ಸಿದ್ದ ಇರದೆ ಇದ್ದರೇ ವಿಡಿಯೋ ವೈರಲ್‌ ಮಾಡಿ ನಿಮ್ಮ ಮಾನ ಮರ್ಯಾದೆ ತೆಗೆಯುತ್ತೇನೆ. ಹಣ ನೀಡಿ ಮಾಡಿಕೊಂಡು ಸರಿ‌ಮಾಡಿಕೊಳ್ಳಿ‌” ಎಂದು ಕರೆ ಮಾಡಿ ಬ್ಲ್ಯಾಕ್ ‌ಮೇಲ್‌‌ ಮಾಡಿದ್ದಾನೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:15 am, Wed, 8 November 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ