AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗದ ರೇಷನ್​​: ಅರೆಹೊಟ್ಟೆಯಲ್ಲಿರುವ ಮಕ್ಕಳು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ಧ ಒಂದಲ್ಲ ಒಂದು ಆರೋಪ ಕೇಳಿ ಬರುತ್ತಲೇ ಇರುತ್ತದೆ. ಇದೀಗ ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಇಳಕಲ್ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಳೆದ ಮೂರು ತಿಂಗಳಿನಿಂದ ರೇಷನ್​ ಸರಬರಾಜು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.

3 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗದ ರೇಷನ್​​: ಅರೆಹೊಟ್ಟೆಯಲ್ಲಿರುವ ಮಕ್ಕಳು
3 ತಿಂಗಳಿನಿಂದ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗದ ರೇಷನ್
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 14, 2024 | 1:36 PM

Share

ಬಾಗಲಕೋಟೆ, ಅಕ್ಟೋಬರ್​ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ (Department of Women and Child Development) ಹುನಗುಂದ (Hunagund) ಮತ್ತು ಇಳಕಲ್ (Ilakal) ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಳೆದ ಮೂರು ತಿಂಗಳಿನಿಂದ ರೇಷನ್​ ಸರಬರಾಜು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಅಂಗನವಾಡಿ ಮಕ್ಕಳು ನಿತ್ಯ ಅರ್ಧಂಬರ್ಧ ಊಟ ಮಾಡುತ್ತಿವೆ. ಅಂಗನವಾಡಿಗಳಿಂದ ತಮಗೆ ಬರಬೇಕಿದ್ದ ಸಮರ್ಪಕ ಪೌಷ್ಟಿಕ ಆಹಾರ ಬಾರದೆ ಗರ್ಭಿಣಿಯರು ನೊಂದಿದ್ದಾರೆ.

ಹುನಗುಂದ, ಇಳಕಲ್ ವ್ಯಾಪ್ತಿಯಲ್ಲಿ ಒಟ್ಟು 422 ಅಂಗನವಾಡಿ ಕೇಂದ್ರಗಳಿವೆ. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಇದೇ ಹಣೆಬರಹವಾಗಿದೆ. ಮೂರು ತಿಂಗಳ ಹಿಂದೆ ಸರಬರಾಜು ಆಗಿದ್ದ ರೇಷನ್​ನಲ್ಲೇ ಅಂಗನವಾಡಿ ಸಿಬ್ಬಂದಿ ಅಡುಗೆ ತಯಾರಿಸಿ ಮಕ್ಕಳಿಗೆ ಮಿತವಾಗಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಹೊಟೇಲ್​ಗಳಲ್ಲಿ ಅಂಗನವಾಡಿ ಮಸಾಲೆ ಪಾಕೆಟ್​ಗಳು ಬಳಕೆ, ಕ್ರಮಕ್ಕೆ ಸ್ಥಳೀಯರ ಆಗ್ರಹ

ಜುಲೈ, ಅಗಷ್ಟ್, ಸೆಪ್ಟೆಂಬರ್ ತಿಂಗಳ ರೇಷನ್​​ ಅಂಗನವಾಡಿ ಕೇಂದ್ರಗಳಿಗೆ ತಲುಪಿಲ್ಲ. ರೇಷನ್​ ಸರಬರಾಜು ಆಗದೆ ಇರುವುದನ್ನು ಹುನಗುಂದ ಸಿಡಿಪಿಒ ಒಪ್ಪಿಕೊಂಡಿದ್ದಾರೆ. ಮೂರು ತಿಂಗಳ ಎಮ್​ಎಸ್​​ಪಿಟಿಸಿ (ಮಹಿಳಾ ಸೆಪ್ಲಿಮೆಂಟರಿ ನ್ಯೂಟ್ರಿಷನ್ ಪ್ರೌಡಕ್ಟ್ ಸೆಂಟರ್)ನಲ್ಲೇ ಕೊಳೆಯುತ್ತಿದೆ.

ಎಮ್​ಎಸ್​ಪಿಟಿಸಿನಿಂದ ಎಲ್ಲ ಅಂಗನವಾಡಿಗೆ ರೇಷನ್ ಸಾಗಿಸಬೇಕು. ಆದರೆ ಯಾವ ಕಾರಣಕ್ಕೆ ಹಂಚಿಕೆಯಾಗಿಲ್ಲ ಎಂಬ ಪ್ರಶ್ನೆಗೆ ಅಧಿಕಾರಿಗಳ ಬಳಿ ಮಾತ್ರ ಉತ್ತರ ಇಲ್ಲ. ಮಹಿಳಾ‌ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನ್ಯೂನ್ಯತೆ ನಡುವೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವತಿಯಿಂದ ಪೋಷಣ್​ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್