Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಹೆಸರು ಬರೆದಿಟ್ಟು ಎಸ್​ಡಿಎ ಆತ್ಮಹತ್ಯೆ ಪ್ರಕರಣ: ಚಿತ್ರದುರ್ಗ ಎಸ್​ಪಿ ಸ್ಪಷ್ಟನೆ

ಮರಣ ಪತ್ರದಲ್ಲಿ ಬಿಜೆಪಿ ಶಾಸಕ ಎಂ ಚಂದ್ರಪ್ಪ ಹೆಸರು ಉಲ್ಲೇಖಿಸಿ ಎಸ್​ಡಿಎ ನೌಕರ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಚಿತ್ರದುರ್ಗ ಎಸ್​ಪಿ ಪರಶುರಾಮ್ ಅವರು ಸ್ಪಷ್ಟನೆ ನೀಡಿದ್ದಾರೆ.

ಶಾಸಕರ ಹೆಸರು ಬರೆದಿಟ್ಟು ಎಸ್​ಡಿಎ ಆತ್ಮಹತ್ಯೆ ಪ್ರಕರಣ: ಚಿತ್ರದುರ್ಗ ಎಸ್​ಪಿ ಸ್ಪಷ್ಟನೆ
ಎಸ್​ಡಿಎ ತಿಪ್ಪೇಸ್ವಾಮಿ ಆತ್ಮಹತ್ಯೆ ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ ಚಿತ್ರದುರ್ಗ ಎಸ್​ಪಿ ಕೆ. ಪರಶುರಾಮ್
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: Rakesh Nayak Manchi

Updated on: Aug 06, 2023 | 7:25 PM

ಚಿತ್ರದುರ್ಗ, ಆಗಸ್ಟ್ 6: ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯತ್​ ಎಸ್​ಡಿಎ ಆತ್ಮಹತ್ಯೆ (Suicide) ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಮೃತ ತಿಪ್ಪೇಸ್ವಾಮಿ ಅವರ ಪತ್ನಿ ಆಶಾ ಅವರು ನೀಡಿದ ದೂರಿನಲ್ಲಿ ಶಾಸಕ ಎಂ.ಚಂದ್ರಪ್ಪ ಹಾಗೂ ಇಒ ರವಿ ಹೆಸರು ಉಲ್ಲೇಖಿಸಿಲ್ಲ ಎಂದರು. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ (M Chandrappa) ಅವರ ಅಮಾನತು ಬೆದರಿಕೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮರಣ ಪತ್ರ ಬರೆದಿಟ್ಟು ವಿಷ ಸೇವಿಸಿ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪತ್ನಿ ಆಶಾ ಅವರು ಹೊಸದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಎಸ್​ಪಿ ಪರಶುರಾಮ್, ತಿಪ್ಪೇಸ್ವಾಮಿ ಡೆತ್‌ನೋಟ್‌ನಲ್ಲಿ ಶಾಸಕ, ಇಒ ಹೆಸರು ಉಲ್ಲೇಖಿಸಿದ್ದರು. ಆದರೆ ದೂರಿನಲ್ಲಿ ಅವರ ಹೆಸರು ಉಲ್ಲೇಖಿಸಿಲ್ಲ. ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ಏನಿದು ಪ್ರಕರಣ?

ಶಾಸಕರು ಹಾಗೂ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಎಸ್​ಡಿಎ ತಿಪ್ಪೇಸ್ವಾಮಿ ಅವರು ಮರಣ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮರಣ ಪತ್ರದಲ್ಲಿರುವಂತೆ, ದಿನಾಂಕ 3-8-2023ರಂದು ಎಂಎಲ್​ಎ ಚಂದ್ರಪ್ಪನವರು, ನಿನ್ನನ್ನು ಅಮಾನತು ಮಾಡುಸುತ್ತೇನೆ ಎಂದು ಬೆದರಿಕೆ ಹಾಕಿದ್ದರು. ಮತ್ತು ಇಓ ರವಿ ಅವರು ಹಿಂಸೆ ಕೊಡುತ್ತಿದ್ದರು. ಅಲ್ಲದೇ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹನ್, ಮೂರ್ತಿ, ಉಗ್ರಪ್ಪ, ಲವ, ರಾಜಪ್ಪ ಕಿರುಕುಳ ನೀಡುತ್ತಿದ್ದ ಎಂಬಿತ್ಯಾದಿ ಮಾಹಿತಿಗಳನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ, ನನ್ನ ಸಾವಿಗೆ ಇವರೇ ಕಾರಣ ಅಂತಾನೂ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್