AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ 50 ಲಕ್ಷ ರೂ.ಗೆ ಡಿಮ್ಯಾಂಡ್, ಬಾಲಕಿಯ ಜೂಜುಕೋರ ಮಾವನ ಮೇಲೆಯೇ ಅನುಮಾನ

ತಿಪ್ಪಣ್ಣ ಕೊಡಗಾನೂರು, ಸುನಿತಾ ದಂಪತಿಯ ಪುತ್ರಿ ಕೃತಿಕಾ ಟ್ಯೂಷನ್‌ಗೆ ಹೋಗಿದ್ದ ವೇಳೆ ಅಪಹರಣಕಾರರು ಕಿಡ್ನ್ಯಾಪ್ ಮಾಡಿದ್ದಾರೆ. ಘಟನೆ ಸಂಬಂಧ ಕೃತಿಕಾ ಮಾವ ಅನಿಲ್ ಬಾಡಗಂಡಿಯ ಮೇಲೆ ಅನುಮಾನ ವ್ಯಕ್ತವಾಗಿದೆ.

7 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ 50 ಲಕ್ಷ ರೂ.ಗೆ ಡಿಮ್ಯಾಂಡ್, ಬಾಲಕಿಯ ಜೂಜುಕೋರ ಮಾವನ ಮೇಲೆಯೇ ಅನುಮಾನ
7 ವರ್ಷದ ಬಾಲಕಿ ಕಿಡ್ನ್ಯಾಪ್
TV9 Web
| Edited By: |

Updated on:Oct 28, 2021 | 8:34 AM

Share

ಬಾಗಲಕೋಟೆ: ಬಾಗಲಕೋಟೆಯ ನವನಗರದ 61ನೇ ಸೆಕ್ಟರ್‌ನಲ್ಲಿ ಬಾಲಕಿಯನ್ನ ಅಪಹರಿಸಿ, 50 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಲಾಗಿರುವ ಘಟನೆ ನಡೆದಿದೆ. ನಿನ್ನೆ ಟ್ಯೂಷನ್‌ಗೆ ಹೋಗಿದ್ದ 7 ವರ್ಷದ ಕೃತಿಕಾ ಕಿಡ್ನ್ಯಾಪ್ ಆದ ಬಾಲಕಿ. ಟ್ಯೂಷನ್‌ಗೆ ಹೋಗಿದ್ದ ಬಾಲಕಿಯನ್ನು ರಾತ್ರಿ 8 ಗಂಟೆಗೆ ಅಪಹರಣಕಾರರು ಕಿಡ್ನ್ಯಾಪ್ ಮಾಡಿರುವುದಾಗಿ ಮಾಹಿತಿ ಸಿಕ್ಕಿದೆ.

ತಿಪ್ಪಣ್ಣ ಕೊಡಗಾನೂರು, ಸುನಿತಾ ದಂಪತಿಯ ಪುತ್ರಿ ಕೃತಿಕಾ ಟ್ಯೂಷನ್‌ಗೆ ಹೋಗಿದ್ದ ವೇಳೆ ಅಪಹರಣಕಾರರು ಕಿಡ್ನ್ಯಾಪ್ ಮಾಡಿದ್ದಾರೆ. ಘಟನೆ ಸಂಬಂಧ ಕೃತಿಕಾ ಮಾವ ಅನಿಲ್ ಬಾಡಗಂಡಿಯ ಮೇಲೆ ಅನುಮಾನ ವ್ಯಕ್ತವಾಗಿದೆ. ಅನಿಲ್, ಬಿಹಾರದ ನಾಲ್ವರು ಸಹಚರರೊಂದಿಗೆ ಸೇರಿ ಈ ಕೃತ್ಯ ಎಸಗಿರಬಹುದು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಾವನೇ ಕಿಡ್ನ್ಯಾಪ್ ಮಾಡಿರೋದಾಗಿ ಸ್ಥಳೀಯರು ಮಾಹಿತಿ ಕೊಟ್ಟಿದ್ದಾರೆ. ಇತ್ತೀಚೆಗೆ ಅನಿಲ್ ಬಾಡಗಂಡಿ ಜೂಜಿನಿಂದ ಲಾಸ್ ಆಗಿದ್ದ. ಹೀಗಾಗಿ ಹಣಕ್ಕಾಗಿ ಮಾವನೇ ಕಿಡ್ನ್ಯಾಪ್ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸದ್ಯ ನವನಗರ ಠಾಣೆ ಪೊಲೀಸರು ಬಾಲಕಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಜೂಜುಕೋರ ಮಾವನಿಂದಲೇ ಬಾಲಕಿ ಕಿಡ್ನಾಪ್? ಟ್ಯೂಷನ್‌ಗೆ ಹೋಗಿ ಬರುವ ವೇಳೆ ಚಾಕಲೇಟ್ ಕೊಡುವ ನೆಪ ಮಾಡಿ ಕಾರಿನಲ್ಲಿ ಎಳೆದೊಯ್ದ ಅನಿಲ ಬಾಡಗಂಡಿ ಹಾಗೂ ನಾಲ್ವರು ಸಹಚರರು ಕಿಡ್ನಾಪ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅನಿಲ್ ಬಾಡಗಂಡಿ ಕ್ಯಾಸಿನೊ, ಇಸ್ಪಿಟ್ ದಾಸನಾಗಿದ್ದ. ಇತ್ತೀಚೆಗೆ ಸಾಕಷ್ಟು ಹಣ ಕಳೆದುಕೊಂಡು ಲಾಸ್ ಆಗಿದ್ದ. ಹೀಗಾಗಿ ಹಣ ಮಾಡಲು ಈ ಕೃತ್ಯ ಎಸಗಿದ್ದಾನೆ. ಘಟನೆ ಬಳಿಕ ಬಾಲಕಿ ಪೋಷಕರು, ಪೊಲೀಸರು ರಾತ್ರಿಯಿಡೀ ಹುಡುಕಾಡಿದ್ದಾರೆ. ಬಾಲಕಿ ತಾಯಿ ಹಾಗೂ ಸಹೋದರನನ್ನು ವಿಚಾರಿಸಿ ಠಾಣೆಯಿಂದ ಮನೆಗೆ ಕಳಿಸಿದ್ದಾರೆ. ಅಪಹರಣಗಾರರು ಬಾಲಕಿ ತಂದೆ ಜೊತೆ ಹಿಂದಿಯಲ್ಲಿ ಮಾತನಾಡಿದ್ದಾರಂತೆ. ಈ ವೇಳೆ ಮಗುವಿಗೆ ಏನಾದರೂ ಹೆಚ್ಚುಕಮ್ಮಿ ಆದರೆ ನಿಮ್ಮನ್ನು ಬಿಡೋದಿಲ್ಲ ಎಂದು ತಂದೆ ತಿಪ್ಪಣ್ಣ ವಾರ್ನಿಂಗ್ ಮಾಡಿದ್ದಾರೆ. ಇಲ್ಲ ಏನು ಮಾಡೋದಿಲ್ಲ ಐವತ್ತು ಲಕ್ಷ ತೆಗೆದುಕೊಂಡು ಬನ್ನಿ ಎಂದು ಪೊಲೀಸರಿಗೆ ಹೇಳದಂತೆ ಕಿಡ್ನಾಪರ್ಸ್ ಎಚ್ಚರಿಕೆ ನೀಡಿದ್ರಂತೆ.

ಇದನ್ನೂ ಓದಿ: Coconut Water: ತೆಂಗಿನ ನೀರಿನ ಆರೋಗ್ಯ ಪ್ರಯೋಜನಗಳನ್ನು ತಿಳಿದ್ರೆ ನಿಜವಾಗಿಯೂ ಆಶ್ಚರ್ಯವಾಗುತ್ತೆ

Published On - 8:19 am, Thu, 28 October 21

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು