Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನಲು ಬೆಳಕಿನಲ್ಲಿ ರಂಗೇರಿದ ಟಗರು ಫೈಟ್​: ಪ್ರೇಕ್ಷಕರಿಗೆ ಸಖತ್ ಕಿಕ್

ಬಾಗಲಕೋಟೆ: ರಂಗೇರಿರುವ ಅಖಾಡ. ಆ ಅಖಾಡದಲ್ಲಿ ಗೆಲವು ನಂದೇ ಅಂತ ಗುದ್ದಾಡುತ್ತಿರುವ ಟಗರುಗಳು. ಡಿಕ್ಕಿ ಹೊಡೆಯುತ್ತಾ ಎದುರಾಳಿಯನ್ನು ಮಣ್ಣು ಮುಕ್ಕಿಸಲು ಹೋರಾಟ. ಕೊಬ್ಬಿದ ಟಗರುಗಳ ಅಬ್ಬರದ ಕಾಳಗ ಕಂಡು ಸಿಳ್ಳೇ, ಕೇಕೆ ಹಾಕಿ ಸಂಭ್ರಮಿಸುತ್ತಿರುವ ಪ್ರೇಕ್ಷಕರು. ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದಿಂದ ರಾಯಣ್ಣ ಹುತಾತ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರಮಟ್ಟದ ಟಗರಿನ ಕಾಳಗ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಸೇರಿದಂತೆ ರಾಜ್ಯ ಮತ್ತು ಪರರಾಜ್ಯದಿಂದ 200ಕ್ಕೂ ಹೆಚ್ಚು […]

ಹೊನಲು ಬೆಳಕಿನಲ್ಲಿ ರಂಗೇರಿದ ಟಗರು ಫೈಟ್​: ಪ್ರೇಕ್ಷಕರಿಗೆ ಸಖತ್ ಕಿಕ್
Follow us
ಸಾಧು ಶ್ರೀನಾಥ್​
|

Updated on:Jan 30, 2020 | 10:44 AM

ಬಾಗಲಕೋಟೆ: ರಂಗೇರಿರುವ ಅಖಾಡ. ಆ ಅಖಾಡದಲ್ಲಿ ಗೆಲವು ನಂದೇ ಅಂತ ಗುದ್ದಾಡುತ್ತಿರುವ ಟಗರುಗಳು. ಡಿಕ್ಕಿ ಹೊಡೆಯುತ್ತಾ ಎದುರಾಳಿಯನ್ನು ಮಣ್ಣು ಮುಕ್ಕಿಸಲು ಹೋರಾಟ. ಕೊಬ್ಬಿದ ಟಗರುಗಳ ಅಬ್ಬರದ ಕಾಳಗ ಕಂಡು ಸಿಳ್ಳೇ, ಕೇಕೆ ಹಾಕಿ ಸಂಭ್ರಮಿಸುತ್ತಿರುವ ಪ್ರೇಕ್ಷಕರು.

ಬಾಗಲಕೋಟೆ ಜಿಲ್ಲೆ ಬೀಳಗಿ ಪಟ್ಟಣದ ಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದಿಂದ ರಾಯಣ್ಣ ಹುತಾತ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರಮಟ್ಟದ ಟಗರಿನ ಕಾಳಗ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಸೇರಿದಂತೆ ರಾಜ್ಯ ಮತ್ತು ಪರರಾಜ್ಯದಿಂದ 200ಕ್ಕೂ ಹೆಚ್ಚು ಟಗರುಗಳು ಭಾಗಿಯಾಗಿದ್ದವು. ಹಾಲು ಹಲ್ಲು, ನಾಲ್ಕು ಹಲ್ಲು, ಆರು ಹಲ್ಲು, ಎಂಟು ಹಲ್ಲು ಎಂಬಂತೆ ವಿವಿಧ ವಿಭಾಗಗಳಲ್ಲಿ ನಡೆದ ಟಗರಿನ ಕಾಳಗ ನೋಡುಗರನ್ನು ರೋಮಾಂಚನಗೊಳಿಸಿತು. ಅದಕ್ಕೆ ಅನುಗುಣವಾಗಿ ಬಹುಮಾನ ನೀಡಲಾಯ್ತು.

ಹೊನಲು ಬೆಳಕಿನಲ್ಲಿ ಟಗರು ಕಾಳಗ:  ಇನ್ನು ಟಗರಿನ ಕಾಳಗವನ್ನು ಹೊನಲು ಬೆಳಕಿನಲ್ಲಿ ಆಯೋಜಿಸಿದ್ದು ವಿಶೇಷವಾಗಿತ್ತು. ಟಗರಿನ ಕಾಳಗದ ಮೈದಾನದ ಸುತ್ತಲೂ ಲೈಟಿಂಗ್​ನಲ್ಲಿ ನಡೆದ ರೋಚಕ ಗುದ್ದಾಟ ನೋಡುಗರನ್ನು ಸೆಳೆಯಿತು. ಬಲಭೀಮರಂತೆ ದಷ್ಟಪುಷ್ಟವಾಗಿ ಸೊಕ್ಕಿನಿಂದ ಕೊಬ್ಬಿದ ಟಗರುಗಳ ಕಾಳಗ ಜಗಜಟ್ಟಿಗಳ ಸೆಣಸಾಟವನ್ನು ನೆನಪಿಸುವಂತಿತ್ತು. ಈ ಟಗರು ಕಾಳಗ ನೋಡಲು ಜಿಲ್ಲೆ ಮಾತ್ರವಲ್ಲದೆ ಬೇರೆ ಜಿಲ್ಲೆಗಳಿಂದ ಯುವಕರು,ರೈತರು ಆಗಮಿಸಿ ಎಂಜಾಯ್ ಮಾಡಿದ್ರು.

Published On - 9:01 am, Thu, 30 January 20

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್