AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವೆ ನಮ್ಮ ಪಾಲಿಗೆ ಕೆಎಸ್ಆರ್​ಟಿಸಿ ಎಂಡಿ ಎಂದು ಸಿದ್ದರಾಮಯ್ಯಗೆ KSRTC ನೌಕರ ಗೋಗರೆದಿದ್ದು ಏಕೆ?

ಇಂದು ಬಾಗಲಕೋಟೆ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಜಿಲ್ಲೆಯ ಬಾದಾಮಿ ಕೃಷ್ಣಾ ಹೆರಿಟೇಜ್ ಹೋಟೆಲ್ ಬಳಿ ಅಹವಾಲು ಸ್ವೀಕರಿಸಿದ್ರು. ಈ ವೇಳೆ KSRTC ನೌಕರ ವರ್ಗಾವಣೆಗೆ ಮನವಿ ಸಲ್ಲಿಸಿ ಈ ಬಗ್ಗೆ ಫೋನ್ ಮಾಡಿ ಹೇಳಿ ಸರ್ ಎಂದ. ಹೀಗಾಗಿ ಕೋಪಗೊಂಡ ಸಿದ್ದರಾಮಯ್ಯ ಫೋನ್ ಮಾಡಿದ್ರೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ರು.

ನೀವೆ ನಮ್ಮ ಪಾಲಿಗೆ ಕೆಎಸ್ಆರ್​ಟಿಸಿ ಎಂಡಿ ಎಂದು ಸಿದ್ದರಾಮಯ್ಯಗೆ KSRTC ನೌಕರ ಗೋಗರೆದಿದ್ದು ಏಕೆ?
KSRTC ನೌಕರ ನೀವೆ ನಮ್ಮ ಪಾಲಿಗೆ ಕೆಎಸ್ಆರ್ಟಿಸಿ ಎಂಡಿ ಎಂದು ಸಿದ್ದರಾಮಯ್ಯಗೆ ಗೋಗರೆದಿದ್ದು ಏಕೆ?
TV9 Web
| Edited By: |

Updated on:Sep 28, 2021 | 12:35 PM

Share

ಬಾಗಲಕೋಟೆ: ಬಾದಾಮಿ ಕೃಷ್ಣಾ ಹೆರಿಟೇಜ್ ಹೋಟೆಲ್ ಬಳಿ ಅಹವಾಲು ಸ್ವೀಕರಿಸುವ ವೇಳೆ ಸಿದ್ದರಾಮಯ್ಯ ಕೆಎಸ್ಆರ್ಟಿಸಿ ನೌಕರರ ಮೇಲೆ ಗರಂ ಆಗಿದ್ದಾರೆ. ವರ್ಗಾವಣೆ ಬಗ್ಗೆ ಮನವಿ ಸಲ್ಲಿಸಲು ಬಂದ ನೌಕರನ ಮೇಲೆ ಗರಂ ಆಗಿದ್ದಾರೆ.

ಇಂದು ಬಾಗಲಕೋಟೆ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಜಿಲ್ಲೆಯ ಬಾದಾಮಿ ಕೃಷ್ಣಾ ಹೆರಿಟೇಜ್ ಹೋಟೆಲ್ ಬಳಿ ಅಹವಾಲು ಸ್ವೀಕರಿಸಿದ್ರು. ಈ ವೇಳೆ KSRTC ನೌಕರ ವರ್ಗಾವಣೆಗೆ ಮನವಿ ಸಲ್ಲಿಸಿ ಈ ಬಗ್ಗೆ ಫೋನ್ ಮಾಡಿ ಹೇಳಿ ಸರ್ ಎಂದ. ಹೀಗಾಗಿ ಕೋಪಗೊಂಡ ಸಿದ್ದರಾಮಯ್ಯ ಫೋನ್ ಮಾಡಿದ್ರೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ರು. ನಾನೇ ಎಂಡಿ ಅನ್ನೋ ರೀತಿ ಮಾತಾಡುತ್ತೀಯಲ್ಲ. ಸುಮ್ನೇ ಹೋಗಯ್ಯ ಎಂದು ನೌಕರನ ವಿರುದ್ಧ ಗರಂ ಆದ್ರು. ಆಗ ನೌಕರ ನೀವೆ ನಮ್ಮ ಪಾಲಿಗೆ ಎಂಡಿ ಸರ್ ಎಂದು ಉತ್ತರಿಸಿದ.

ನೌಕರನ ವರ್ಗಾವಣೆ ವಿಚಾರವಾಗಿ ಪದೇ ಪದೇ ಸಿದ್ದರಾಮಯ್ಯನವರ ಬಳಿ ಕೇಳಿದ್ದಕ್ಕೆ ಸಿದ್ದು ಗರಂ ಆಗಿದ ಪ್ರಸಂಗ ನಡೆಯಿತು.

ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಇನ್ನು ಮತ್ತೊಂದೆಡೆ ಆರ್‌ಎಸ್‌ಎಸ್‌ ಇಲ್ಲದಿದ್ರೆ ಸಿದ್ದರಾಮಯ್ಯ ಪಂಚೆ ಅಷ್ಟೇ ಅಲ್ಲ. ಅವರೂ ನೇತಾಡುತ್ತಿದ್ದರು ಎಂದು ಸಿ.ಟಿ.ರವಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿ.ಟಿ.ರವಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಶಾಸಕ ಸಿ.ಟಿ.ರವಿಯಿಂದ ದೇಶಭಕ್ತಿ ಪಾಠ ಕಲಿಯಬೇಕಾ?’ ‘ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಆರ್‌ಎಸ್‌ಎಸ್‌ನವರಿಂದ್ಲಾ?’ ‘ಸ್ವಾತಂತ್ರ್ಯ ಸಿಕ್ಕಿದ್ದು ಗಾಂಧೀಜಿ, ತಿಲಕ್, ನೆಹರು ಅವರಿಂದ’ ‘ಏನು ಗೋಡ್ಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆಯಾ?’ ‘ಸಾವರ್ಕರ್ ಅವರಿಂದ ಸ್ವಾತಂತ್ರ್ಯ ಬಂದಿದೆಯಾ?’ ‘ಅವಕ್ಕೆ ಇತಿಹಾಸ ಗೊತ್ತಿಲ್ಲ ಪಾಪ ಮಾತಾಡುತ್ತವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶಕ್ಕಾಗಿ ಪ್ರಾಣ ಕಳೆದುಕೊಂಡವರು ಯಾರು? RSSನ ಒಬ್ಬರಾದರೂ ದೇಶಕ್ಕಾಗಿ ಸತ್ತಿದ್ದಾರಾ ಹೇಳಿ ನೋಡೋಣ. ನಿಮ್ಮಲ್ಲಿ ಯಾರು ದೇಶಕ್ಕಾಗಿ ಸತ್ತಿದ್ದಾರೆ ಎಂದು ಸಿ.ಟಿ.ರವಿ ಕೇಳಿ. ದೇಶಭಕ್ತಿ ಅಂದರೆ ಬಾಯಲ್ಲಿ ಹೇಳೋದಾ? ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರು ದೇಶಭಕ್ತರು ಎಂದು ಬಾದಾಮಿಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತ ವಿರುದ್ಧ ಅಧಿಕಾರ ದುರುಪಯೋಗದ ಆರೋಪ

Published On - 12:30 pm, Tue, 28 September 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ