AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿಯಲ್ಲಿ ಕಾಲಿಗೆ ಶೂ ಧರಿಸಿ ಭೂಮಿ ಪೂಜೆ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ.

ಬಾದಾಮಿಯಲ್ಲಿ ಕಾಲಿಗೆ ಶೂ ಧರಿಸಿ ಭೂಮಿ ಪೂಜೆ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬಾದಾಮಿಯಲ್ಲಿ ಸಿದ್ದರಾಮಯ್ಯ
TV9 Web
| Edited By: |

Updated on:Jan 25, 2022 | 12:26 PM

Share

ಬಾಗಲಕೋಟೆ: ಇಂದು ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಾದಾಮಿ (Badami) ತಾಲೂಕಿನ ಮುತ್ತಲಗೇರಿಯಲ್ಲಿ ಸರ್ಕಾರಿ ಪ್ರೌಢ ಶಾಲಾ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಸಿದ್ದರಾಮಯ್ಯ ಎಡವಟ್ಟೊಂದು ಮಾಡಿದ್ದಾರೆ. ಭೂಮಿ ಪೂಜೆ ಮಾಡುವಾಗ ಕಾಲಿನಲ್ಲಿದ್ದ ಶೂ (Shoe) ತೆಗೆದಿಲ್ಲ. ಶೂ ಧರಿಸಿಯೇ ಭೂಮಿ ಪೂಜೆ ಮಾಡಿದ್ದಾರೆ. ಸಿದ್ಧರಾಮಯ್ಯ ಬೆಂಬಲಿಗರು ಕೂಡಾ ಶೂ ಧರಿಸಿಯೇ ಭೂಮಿ ಪೂಜೆ ನೆರವೇರಿಸಿದ್ದಾರೆ.

ಸಿದ್ಧರಾಮಯ್ಯನವರಿಗೆ ವಿದ್ಯಾರ್ಥಿಗಳು ಹೂವಿನ ಸುರಿಮಳೆ ಸುರಿಸಿ ಸ್ವಾಗತ ಕೋರಿದರು. ಈ ವೇಳೆ ಸಿದ್ದು ಮಕ್ಕಳತ್ತ ಹಸನ್ಮುಖದಿಂದ ಕೈ ಬೀಸಿದರು.

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ. ಯಾಕಂದ್ರೆ ಇವರು ಕಮಿಷನ್ ಮೇಲೆ ನಿಂತುಬಿಟ್ಟಿದ್ದಾರೆ. ಹೀಗಾಗಿ ಉಸ್ತುವಾರಿಗಳ ಮಾತನ್ನು ಯಾರೂ ಕೇಳೋದಿಲ್ಲ ಅಂತ ಹೇಳಿದರು.

ಬಾದಾಮಿಯಿಂದ ಸ್ಪರ್ಧಿಸಲು ಬೆಂಬಲಿಗರು ಒತ್ತಾಯಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಒಂದು ಕಾಲು ವರ್ಷ ಇದೆ, ನೋಡೋಣ. ನಾನು ಈಗಲೇ ಏನೂ ಹೇಳಲಾಗಲ್ಲ. 5-6 ಕಡೆ ಚುನಾವಣೆಗೆ ನಿಲ್ಲುವಂತೆ ನನ್ನನ್ನ ಕರೆಯುತ್ತಿದ್ದಾರೆ. ಅವರನ್ನೆಲ್ಲ ಕೇಳಿ ಚುನಾವಣೆ ಹತ್ತಿರ ಬಂದಾಗ ಹೇಳುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. ಪಕ್ಷ, ಕಾರ್ಯಕರ್ತರು ಚುನಾವಣೆ ಎದುರಿಸಲು ತಯಾರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರೂಮಾಲು ಕಿತ್ತೆಸೆದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕಾತರಕಿಯಲ್ಲಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ವೇಳೆ ವ್ಯಕ್ತಿಯೊಬ್ಬರು ರೂಮಾಲು ತೊಡಿಸಲು ಬಂದರು. ಸಿಟ್ಟಿನಿಂದ ಅರ್ಧ ತೊಡಿಸಿದ್ದ ರೂಮಾಲನ್ನು ಸಿದ್ದರಾಮಯ್ಯ ಕಿತ್ತೆಸೆದಿದ್ದಾರೆ. ಬೇಡ ಅಂದ್ರೂ ರೂಮಾಲು ಸುತ್ತಲು ಬಂದಾಗ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ.

ಇದನ್ನೂ ಓದಿ

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

Published On - 11:59 am, Tue, 25 January 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!