AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿಯಲ್ಲಿ ಕಾಲಿಗೆ ಶೂ ಧರಿಸಿ ಭೂಮಿ ಪೂಜೆ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ.

ಬಾದಾಮಿಯಲ್ಲಿ ಕಾಲಿಗೆ ಶೂ ಧರಿಸಿ ಭೂಮಿ ಪೂಜೆ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಬಾದಾಮಿಯಲ್ಲಿ ಸಿದ್ದರಾಮಯ್ಯ
TV9 Web
| Updated By: sandhya thejappa|

Updated on:Jan 25, 2022 | 12:26 PM

Share

ಬಾಗಲಕೋಟೆ: ಇಂದು ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಾದಾಮಿ (Badami) ತಾಲೂಕಿನ ಮುತ್ತಲಗೇರಿಯಲ್ಲಿ ಸರ್ಕಾರಿ ಪ್ರೌಢ ಶಾಲಾ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಸಿದ್ದರಾಮಯ್ಯ ಎಡವಟ್ಟೊಂದು ಮಾಡಿದ್ದಾರೆ. ಭೂಮಿ ಪೂಜೆ ಮಾಡುವಾಗ ಕಾಲಿನಲ್ಲಿದ್ದ ಶೂ (Shoe) ತೆಗೆದಿಲ್ಲ. ಶೂ ಧರಿಸಿಯೇ ಭೂಮಿ ಪೂಜೆ ಮಾಡಿದ್ದಾರೆ. ಸಿದ್ಧರಾಮಯ್ಯ ಬೆಂಬಲಿಗರು ಕೂಡಾ ಶೂ ಧರಿಸಿಯೇ ಭೂಮಿ ಪೂಜೆ ನೆರವೇರಿಸಿದ್ದಾರೆ.

ಸಿದ್ಧರಾಮಯ್ಯನವರಿಗೆ ವಿದ್ಯಾರ್ಥಿಗಳು ಹೂವಿನ ಸುರಿಮಳೆ ಸುರಿಸಿ ಸ್ವಾಗತ ಕೋರಿದರು. ಈ ವೇಳೆ ಸಿದ್ದು ಮಕ್ಕಳತ್ತ ಹಸನ್ಮುಖದಿಂದ ಕೈ ಬೀಸಿದರು.

ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಂದ ಜನರ ಸಮಸ್ಯೆ ಬಗೆಹರಿಯಲ್ಲ. ಉಸ್ತುವಾರಿ ಸಚಿವರಾಗಿದ್ದವರು ಅವರ ಕ್ಷೇತ್ರಕ್ಕೆ ಸೀಮಿತರಾಗಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಮಾತನ್ನು ಯಾರೂ ಕೇಳುವುದಿಲ್ಲ. ಯಾಕಂದ್ರೆ ಇವರು ಕಮಿಷನ್ ಮೇಲೆ ನಿಂತುಬಿಟ್ಟಿದ್ದಾರೆ. ಹೀಗಾಗಿ ಉಸ್ತುವಾರಿಗಳ ಮಾತನ್ನು ಯಾರೂ ಕೇಳೋದಿಲ್ಲ ಅಂತ ಹೇಳಿದರು.

ಬಾದಾಮಿಯಿಂದ ಸ್ಪರ್ಧಿಸಲು ಬೆಂಬಲಿಗರು ಒತ್ತಾಯಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಇನ್ನೂ ಒಂದು ಕಾಲು ವರ್ಷ ಇದೆ, ನೋಡೋಣ. ನಾನು ಈಗಲೇ ಏನೂ ಹೇಳಲಾಗಲ್ಲ. 5-6 ಕಡೆ ಚುನಾವಣೆಗೆ ನಿಲ್ಲುವಂತೆ ನನ್ನನ್ನ ಕರೆಯುತ್ತಿದ್ದಾರೆ. ಅವರನ್ನೆಲ್ಲ ಕೇಳಿ ಚುನಾವಣೆ ಹತ್ತಿರ ಬಂದಾಗ ಹೇಳುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. ಪಕ್ಷ, ಕಾರ್ಯಕರ್ತರು ಚುನಾವಣೆ ಎದುರಿಸಲು ತಯಾರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರೂಮಾಲು ಕಿತ್ತೆಸೆದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕಾತರಕಿಯಲ್ಲಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ವೇಳೆ ವ್ಯಕ್ತಿಯೊಬ್ಬರು ರೂಮಾಲು ತೊಡಿಸಲು ಬಂದರು. ಸಿಟ್ಟಿನಿಂದ ಅರ್ಧ ತೊಡಿಸಿದ್ದ ರೂಮಾಲನ್ನು ಸಿದ್ದರಾಮಯ್ಯ ಕಿತ್ತೆಸೆದಿದ್ದಾರೆ. ಬೇಡ ಅಂದ್ರೂ ರೂಮಾಲು ಸುತ್ತಲು ಬಂದಾಗ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ.

ಇದನ್ನೂ ಓದಿ

‘ಆರ್​ಆರ್​ಆರ್​’ ನಿರ್ಮಾಪಕನ ಖಾತೆಯಿಂದ ಪ್ರಭಾಸ್​ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?  

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

Published On - 11:59 am, Tue, 25 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ