AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ, ಉಪರಾಷ್ಟ್ರಪತಿಗೆ ಪತ್ರ ಬರೆದರೂ ದಶಕಗಳ ಸಮಸ್ಯೆಗೆ ಪರಿಹಾರವಿಲ್ಲ: ಸುದ್ದಿಗೋಷ್ಠಿಯಲ್ಲಿ ಗಳಗಳನೆ ಅತ್ತ ವೃದ್ಧ

11 ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ವೃದ್ದನ ಹೋರಾಟ ನಡೆಯುತ್ತಿದೆ. ಆದರೂ ದಶಕಗಳಿಂದ ಸಾರ್ವಜನಿಕ ಸಮಸ್ಯೆಗಳಿಗೆ ನ್ಯಾಯ ಸಿಕ್ಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ವೃದ್ಧ ಒಬ್ಬರು ಸುದ್ದಿಗೋಷ್ಠಿಯಲ್ಲೇ ಗಳಗಳನೆ ಕಣ್ಣೀರು ಹಾಕಿದ್ದಾರೆ.

ಪ್ರಧಾನಿ, ಉಪರಾಷ್ಟ್ರಪತಿಗೆ ಪತ್ರ ಬರೆದರೂ ದಶಕಗಳ ಸಮಸ್ಯೆಗೆ ಪರಿಹಾರವಿಲ್ಲ: ಸುದ್ದಿಗೋಷ್ಠಿಯಲ್ಲಿ ಗಳಗಳನೆ ಅತ್ತ ವೃದ್ಧ
ಕಲ್ಲಪ್ಪ ಕಡಬಲ್ಲವರ ಕಣ್ಣೀರು
Follow us
TV9 Web
| Updated By: ganapathi bhat

Updated on:Apr 12, 2022 | 2:50 PM

ಬಾಗಲಕೋಟೆ: ಹಲವು ದಶಕಗಳಿಂದ ಸಾರ್ವಜನಿಕರ ಸಮಸ್ಯೆಗಳಿಗೆ ನ್ಯಾಯ ಸಿಕ್ಕಿಲ್ಲ. ಜೀವನ ಪೂರ್ತಿ ಹೋರಾಟ ಮಾಡಿದ್ರೂ ನ್ಯಾಯ ಸಿಗುತ್ತಿಲ್ಲ. ಗ್ರಾಮದಲ್ಲಿ ಗಾವಠಾಣ ಜಾಗೆಯನ್ನು ಮುಸ್ಲಿಂರು ಅತಿಕ್ರಮಣ ಮಾಡಿರುವ ಆರೋಪ ಇದೆ. ಸಂತ್ರಸ್ತರಿಗೆ ಹಂಚಿಕೆ ಮಾಡಿರುವ ಆಶ್ರಯ ಮನೆಗಳಲ್ಲಿ ಲೋಪ ಇರುವ ಬಗ್ಗೆ ಮಾಹಿತಿ ಲಭಿಸಿದೆ. ಸರ್ಕಾರಿ ಶಾಲೆ ಕಟ್ಟಡ ಪುನರ್ ನಿರ್ಮಾಣಕ್ಕೆ ಆಗ್ರಹ ಕೇಳಿಬಂದಿದೆ. ಹೀಗೆ 11 ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ವೃದ್ದನ ಹೋರಾಟ ನಡೆಯುತ್ತಿದೆ. ಆದರೂ ದಶಕಗಳಿಂದ ಸಾರ್ವಜನಿಕ ಸಮಸ್ಯೆಗಳಿಗೆ ನ್ಯಾಯ ಸಿಕ್ಕಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ವೃದ್ಧ ಒಬ್ಬರು ಸುದ್ದಿಗೋಷ್ಠಿಯಲ್ಲೇ ಗಳಗಳನೆ ಕಣ್ಣೀರು ಹಾಕಿದ್ದಾರೆ.

ಬಾಗಲಕೋಟೆ ಪ್ರೆಸ್ ಕ್ಲಬ್​ನಲ್ಲಿ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದ ಸಾಮಾಜಿಕ ಕಾರ್ಯಕರ್ತ ಕಲ್ಲಪ್ಪ ಕಡಬಲ್ಲವರ ಕಣ್ಣೀರು ಹಾಕಿದ್ದಾರೆ. ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸ್ಥಳೀಯ, ಜಿಲ್ಲಾಡಳಿತ, ಸರ್ಕಾರ, ಲೋಕಾಯುಕ್ತರಿಗೆ ದೂರು ಸಲ್ಲಿಸಿದರೂ ನ್ಯಾಯ ಸಿಕ್ಕಿಲ್ಲ. ಪ್ರಧಾನಮಂತ್ರಿ, ಉಪರಾಷ್ಟ್ರಪತಿಗಳಿಗೂ ಪತ್ರ ಬರೆದಿರುವ ಸಾಮಾಜಿಕ ಕಾರ್ಯಕರ್ತರಿಗೆ ನ್ಯಾಯ ದೊರಕಿಲ್ಲ. ಪ್ರಧಾನಿ, ಉಪರಾಷ್ಟ್ರಪತಿ ಕಾರ್ಯಾಲಯದಿಂದ ರಾಜ್ಯ ಸರ್ಕಾರಕ್ಕೆ ಸೂಚನಾ ಪತ್ರ ಬಂದಿದೆ. ಇಷ್ಟಾದರೂ ನ್ಯಾಯ ಸಿಗತಿಲ್ಲ ಎಂದು ಕಾರ್ಯಕರ್ತ ಕಣ್ಣೀರು ಹಾಕಿದ್ದಾರೆ. ಇದೀಗ ಅಂತಿಮವಾಗಿ ಆಮರಣ ಉಪವಾಸ ಕೂರಲೂ ನಿರ್ಧಾರ ಮಾಡಲಾಗಿದೆ. ಇದೇ ತಿಂಗಳ 18 ನೇ ತಾರೀಖಿನಿಂದ ಢವಳೇಶ್ವರದಲ್ಲಿ ಆಮರಣ ಉಪವಾಸ ಕೂರುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ ಪತ್ರಕರ್ತನನ್ನು ಥಳಿಸಿ, ಆಸ್ಪತ್ರೆಯ ಬೆಡ್​ಗೆ ಕಟ್ಟಿಹಾಕಿದ ಪೊಲೀಸರು

ಇದನ್ನೂ ಓದಿ: ಬಿಬಿಎಂಪಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು; ಒಂದೇ ಕಾಮಗಾರಿಗೆ ಎರಡೆರಡು ಬಾರಿ ಹಣ ಪಾವತಿ

Published On - 2:47 pm, Tue, 12 April 22

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ