AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ

ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು.

ಹೃದಯ ಸಂಬಂಧಿ ಚಿಕಿತ್ಸೆ ಕೊಡಿಸಲು ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿಕೊಂಡ ಗೋವಿಂದ ಕಾರಜೋಳ
ವಿದ್ಯಾರ್ಥಿ ಗಂಗಮ್ಮ
TV9 Web
| Edited By: |

Updated on:Aug 15, 2021 | 11:30 PM

Share

ಬಾಗಲಕೋಟೆ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲ್ತಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲು ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿನಿ ಗಂಗಮ್ಮಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಮುಚಖಂಡಿ ಗ್ರಾಮದ ನಿವಾಸಿ ಗಂಗಮ್ಮ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದರು. ಗಂಗಮ್ಮಳ ಸಾಧನೆಗೆ ಕರೆ ಮಾಡಿ ಸಚಿವರು ಅಭಿನಂದಿಸಿದ್ದರು. ಹೃದಯದ ಸಮಸ್ಯೆ ಹಾಗೂ ಉಸಿರಾಟದ ತೊಂದರೆ ಇದ್ದಾಗಿಯೂ ವಿದ್ಯಾರ್ಥಿ ಗಂಗಮ್ಮ ಈ ಬಾರಿ ಪರೀಕ್ಷೆ ಬರೆದು ಪೂರ್ಣ ಅಂಕಗಳನ್ನು ಪಡೆದಿದ್ದರು.

ಬಳಿಕ, ಗಂಗಮ್ಮಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ಗಮನಕ್ಕೆ ಬಂದಿತ್ತು. ಈ ವೇಳೆ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದರು. ಸಚಿವ ಕಾರಜೋಳ ಸೂಚನೆ ಮೇರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಕೂಡ ಭೇಟಿ ನೀಡಿದ್ದರು. ಡಿಎಚ್​ಒ ದೇಸಾಯಿ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ್ದರು. ಬಳಿಕ, ಅನಂತ ದೇಸಾಯಿ ವಿದ್ಯಾರ್ಥಿ ಗಂಗಮ್ಮಳನ್ನು ಬೆಂಗಳೂರಿಗೆ ಕಳಿಸಲು ವ್ಯವಸ್ಥೆ ಮಾಡಿದ್ದರು. ಹಾಗಾಗಿ, ಇಂದು ಗಂಗಮ್ಮ ಹಾಗೂ ಪೋಷಕರು ಬೆಂಗಳೂರಿಗೆ ತೆರಳಿದ್ದಾರೆ.

ಇದನ್ನೂ ಓದಿ: ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

ಹೃದಯ ಕಾಯಿಲೆಯಿಂದ ಬಳಲುತ್ತಿರುವ ಎಸ್​ಎಸ್​ಎಲ್​ಸಿ ಟಾಪರ್ ಗಂಗಮ್ಮ ಮನೆಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ

Published On - 11:28 pm, Sun, 15 August 21

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ