AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ರೈತರಿಗೆ ತೊಟ್ಟು ನೀರು ಸಿಗ್ತಿರಲಿಲ್ಲ; 3 ವರ್ಷ ನಂತರ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ‌!

13 ಹಳ್ಳಿಗಳ ಒಣ ಭೂಮಿಗೆ ನೀರಾವರಿ ಕಲ್ಪಿಸುವ ಅಚನೂರು ಏತ‌ನೀರಾವರಿ ಯೋಜನೆಗೆ ಕೊನೆಗೂ ರಾಜ್ಯ ಸರ್ಕಾರ‌ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ಈ ಯೋಜನೆಗಾಗಿ ರಾಜ್ಯ ಸರ್ಕಾರದ 346 ಕೋಟಿ ರೂಪಾಯಿ ಅನುಮೋದನೆ ಲಭಿಸಿದೆ. 

ಪಕ್ಕದಲ್ಲೇ ನದಿ ಹರಿಯುತ್ತಿದ್ದರೂ ರೈತರಿಗೆ ತೊಟ್ಟು ನೀರು ಸಿಗ್ತಿರಲಿಲ್ಲ; 3 ವರ್ಷ ನಂತರ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ‌!
ಅಚನೂರು ಏತ ನೀರಾವರಿ ಯೋಜನೆ
TV9 Web
| Edited By: |

Updated on: Sep 01, 2021 | 11:55 AM

Share

ಬಾಗಲಕೋಟೆ: ಘಟಪ್ರಭಾ ನದಿ ಪಕ್ಕದಲ್ಲೇ ಹರಿಯುತ್ತಿದ್ದರೂ ಸುತ್ತಮುತ್ತಲ ಜಮೀನಿಗೆ ಹನಿ ನೀರು ಹರಿಯುತ್ತಿರಲಿಲ್ಲ. ಪಕ್ಕದಲ್ಲೇ ನದಿ ತುಂಬಿ ಹರಿಯುವುದನ್ನು ರೈತರು ನೋಡಿಕೊಂಡೆ ಮನದಲ್ಲಿ ಸಂಕಟಪಡುತ್ತಿದ್ದರು. ಈ ನೀರು ನಮ್ಮ ಜಮೀನಿಗೆ ಬರುವುದು ಯಾವಾಗ ಎಂದು ಕನಸು ಕಾಣುತ್ತಿದ್ದರು. ಈ ಮಧ್ಯೆ ಮೂರು ವರ್ಷದಿಂದ ರೈತರು ನೀರಿಗಾಗಿ ನಿರಂತರ ಹೋರಾಟ ನಡೆಸಿದ್ದರು. ಆದರೆ ರೈತರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಈ ಯೋಜನೆಗೆ ಸದ್ಯ ಸರಕಾರದಿಂದ ಅನುಮೋದನೆ ಸಿಕ್ಕಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ. ಸುಮಾರು 8 ಕಿ.ಮೀ ಅಂತರದಲ್ಲಿಯೇ ಆಲಮಟ್ಟಿ ಜಲಾಶಯ ಇದ್ದರೂ ಕೂಡಾ ಬಾಗಲಕೋಟೆ ತಾಲ್ಲೂಕಿನ 13 ಗ್ರಾಮಗಳಿಗೆ ನೀರಾವರಿ ಸೌಲಭ್ಯ ಸಿಕ್ಕಿರಲಿಲ್ಲ. ಸುಮಾರು ಮೂರು ದಶಕಗಳಿಂದ ನೀರಾವರಿ ಯೋಜನೆ ಕಲ್ಪಿಸುವಂತೆ ಈ ಭಾಗದ ರೈತರು ಬೇಡಿಕೆಕೊಂಡಿದ್ದರು. ಹಲವು ಹೋರಾಟಗಳನ್ನು ಕೂಡ ಮಾಡಿದ್ದರು ಕಳೆದ ಮೂರು ವರ್ಷಗಳಿಂದ ಅಚನೂರು ಏತನೀರಾವರಿ ಹೋರಾಟ ಸಮಿತಿ ಮಾಡಿಕೊಂಡು ಪ್ರತಿಭಟನೆ ನಡೆಸುತ್ತಲೇ ಇದ್ದರು. ಆದರೀಗ ರೈತರ ಹೋರಾಟಕ್ಕೆ ಕಡೆಗೂ ಪ್ರತಿಫಲ ಸಿಕ್ಕಿದೆ.

13 ಹಳ್ಳಿಗಳ ಒಣ ಭೂಮಿಗೆ ನೀರಾವರಿ ಕಲ್ಪಿಸುವ ಅಚನೂರು ಏತ‌ನೀರಾವರಿ ಯೋಜನೆಗೆ ಕೊನೆಗೂ ರಾಜ್ಯ ಸರ್ಕಾರ‌ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ಈ ಯೋಜನೆಗಾಗಿ ರಾಜ್ಯ ಸರ್ಕಾರದ 346 ಕೋಟಿ ರೂಪಾಯಿ ಅನುಮೋದನೆ ಲಭಿಸಿದೆ.  ಮೂರು ವರ್ಷಗಳಲ್ಲಿ ಈ ಯೋಜನೆ ಅಂತ್ಯವಾಗಲಿದ್ದು, ಆ ಮೂಲಕ ಬಾಗಲಕೋಟೆ ತಾಲ್ಲೂಕಿನ 13 ಹಳ್ಳಿಗಳ‌ 20880 ಎಕರೆ ಒಣಭೂಮಿ ನೀರಾವರಿ ಭೂಮಿಯಾಗಲಿವೆ. ಈ ಬಗ್ಗೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಈ ಭಾಗದಲ್ಲಿ ನೀರಾವರಿ ಇಲ್ಲದ ಕಾರಣ ತೊಗರಿ, ಶೆಂಗಾ, ಸೂರ್ಯಕಾಂತಿ ಸೇರಿದಂತೆ ಕೇವಲ‌ ಮಳೆಯಾಶ್ರಿತ ಬೆಳೆಯನ್ನು ಬೆಳೆಯುತ್ತಿದ್ದರು. ತೀರಾ ನದಿ ಪಕ್ಕದಲ್ಲಿ ಮಾತ್ರ ಕಬ್ಬು, ತರಕಾರಿ ಬೆಳೆಯುತ್ತಿದ್ದರು. ಇನ್ಮುಂದೆ ಯೋಜನೆ ಮುಗಿದ ಬಳಿಕ ಕಬ್ಬು, ತರಕಾರಿ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಸಮೃದ್ಧವಾಗಿ ಬೆಳೆಯಬಹುದು.

ರೈತರ ಹೋರಾಟಕ್ಕೆ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಸಾತ್ ನೀಡಿದ್ದು, ಕೊನೆಗೂ ರೈತರ ಬೇಡಿಕೆ ಈಡೇರಿಕೆಗೆ ದಿನಗಣನೆ ಪ್ರಾರಂಭವಾಗಿವೆ. ಈ ಮೂಲಕ ಬಾಗಲಕೋಟೆ ತಾಲ್ಲೂಕಿನ 13 ಗ್ರಾಮಗಳಾದ ಬೆನಕಟ್ಟಿ, ಮನ್ನಿಕಟ್ಟಿ, ಭಗವತಿ, ಮುಡಪುಜಿ, ಕಡ್ಲಿಮಟ್ಟಿ, ಅಚನೂರು, ಹಳ್ಳೂರ, ಬೇವೂರು, ಸಂಗಾಪೂರ, ಬಿಲ್ ಕೆರೂರು, ಭೈರಮಟ್ಟಿ, ಶಿರೂರು, ತಿಮ್ಮಾಪುರ ಗ್ರಾಮಗಳ ಜಮೀನುಗಳು ನೀರಾವರಿ ಆಗಲಿವೆ. ಇದರ ಜೊತೆಗೆ ಇದೇ ಯೋಜನೆಯಡಿಯಲ್ಲಿ ಭಗವತಿ, ಹಳ್ಳೂರು, ಬೇವೂರು ಮತ್ತು ಸಂಗಾಪೂರ ಗ್ರಾಮಗಳಲ್ಲಿನ ನಾಲ್ಕು ಕೆರೆಗಳು ತುಂಬಲಿವೆ.

1.7 ಟಿಎಮ್​ಸಿ ನೀರು ಈ ಯೋಜನೆಗೆ ಹಂಚಿಕೆಯಾಗಲಿದೆ. ಇನ್ನು ರೈತರ ಹೋರಾಟಕ್ಕೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಪ್ರಯತ್ನವೂ ಕೂಡಾ ಸಾಕಷ್ಟಿದೆ. ಹೀಗಾಗಿ ಈ ಭಾಗದ ರೈತರು ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸರ್ಕಾರದಿಂದ ಅನುಮೋದನೆ ಸಿಕ್ಕಿರುವ ಆಚನೂರು ಏತ ನೀರಾವರಿ ಯೋಜನೆ ನಿಗದಿತ ಸಮಯದಲ್ಲಿ ಮುಕ್ತಾಯಗೊಳ್ಳಬೇಕು. ಕಾಲಹರಣ ಆಗಬಾರದು. ಆದಷ್ಟು ಬೇಗ ಟೆಂಡರ್ ಕರೆದು ಯೋಜನೆಯ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಡೆಸಬೇಕೆಂದು ರೈತರು ಒತ್ತಾಯ ಮಾಡಿದರು.

ವರದಿ: ರವಿ ಮೂಕಿ

ಇದನ್ನೂ ಓದಿ: ರೈತ ಹೋರಾಟಕ್ಕಾಗಿ ಒಂದು ಬೆಳೆ ತ್ಯಾಗ ಮಾಡಲು ಸಿದ್ಧರಾಗಿ; ರೈತ ನಾಯಕ ರಾಕೇಶ್ ಟಿಕಾಯತ್ ಕರೆ

ಇದು ಸ್ವಾತಂತ್ರ್ಯ ಹೋರಾಟವೇನೂ ಅಲ್ಲ, ಹೋರಾಡುವುದಾದರೆ ಕೊವಿಡ್ ವಿರುದ್ಧ ಹೋರಾಡಿ: ಬಿಜೆಪಿ ವಿರುದ್ಧ ಗುಡುಗಿದ ಉದ್ಧವ್ ಠಾಕ್ರೆ

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!