AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote News: ರಾಜ್ಯಮಟ್ಟದ ಪತ್ರಿಕೆ ಪತ್ರಕರ್ತ ಶವವಾಗಿ ಪತ್ತೆ; ನದಿಗೆ ಹಾರಿ ಆತ್ಮಹತ್ಯೆ ಶಂಕೆ

ಪೊಲೀಸ್ ಕಮಿಷನರ್​​ ಕಚೇರಿ ಗೇಟ್​ನಲ್ಲಿ ವ್ಯಕ್ತಿ ಓರ್ವ ವಿಷ ಸೇವಿಸಿರುವಂತಹ ಘಟನೆ ನಡೆದಿದೆ. ವಿಜಯಪುರ ಮೂಲದ ಸಿದ್ದರಾಮಗೌಡ ವಿಷ ಸೇವಿಸಿ ಅಸ್ವಸ್ಥ ಆದ ವ್ಯಕ್ತಿ.

Bagalkote News: ರಾಜ್ಯಮಟ್ಟದ ಪತ್ರಿಕೆ ಪತ್ರಕರ್ತ ಶವವಾಗಿ ಪತ್ತೆ; ನದಿಗೆ ಹಾರಿ ಆತ್ಮಹತ್ಯೆ ಶಂಕೆ
ಪತ್ರಿಕೆ ಸ್ಟ್ರಿಂಜರ್ ಶವವಾಗಿ ಪತ್ತೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 25, 2022 | 3:10 PM

Share

ಬಾಗಲಕೋಟೆ: ರಾಜ್ಯಮಟ್ಟದ ಪತ್ರಿಕೆ ಪತ್ರಕರ್ತ ಶವವಾಗಿ (dead body) ಪತ್ತೆಯಾಗಿರುವಂತಹ ಘಟನೆ ಜಿಲ್ಲೆ ಬೀಳಗಿ ತಾಲ್ಲೂಕಿನ ಅನಗವಾಡಿಯಲ್ಲಿ ನಡೆದಿದೆ. ಪ್ರಭು ಲಕ್ಷಟ್ಟಿ(43) ಮೃತ ಸ್ಟ್ರಿಂಜರ್. ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದ ಪ್ರಜಾವಾಣಿ ಸ್ಟ್ರಿಂಜರ್ ಆಗಿದ್ದು, ಮೊನ್ನೆ ರಾತ್ರಿಯಿಂದ ನಾಪತ್ತೆಯಾಗಿದ್ದರು. ನಿನ್ನೆ ಅನಗವಾಡಿ ಘಟಪ್ರಭಾ ನದಿ ಸೇತುವೆ ಮೇಲೆ ಚಪ್ಪಲಿ ಬೈಕ್ ಪತ್ತೆಯಾಗಿದ್ದು, ನದಿಗೆ ಹಾರಿದ ಶಂಕೆ ವ್ಯಕ್ತವಾಗಿತ್ತು. ಬೀಳಗಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆಯಿಂದ ಇದೀಗ ಶವ ಪತ್ತೆಯಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದು, ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರೆಂಬ ಮಾಹಿತಿ ಕೂಡ ಇದೆ.

ಇದನ್ನೂ ಓದಿ; ತಂದೆಯನ್ನು ಕೊಲ್ಲಲು ಫೇಸ್‌ಬುಕ್ ಮೂಲಕ ಕೊಲೆಗಾರನಿಗೆ ಸುಪಾರಿ ಕೊಟ್ಟ ಮಗ

ಕಮಿಷನರ್​​ ಕಚೇರಿ ಎದುರು ವಿಷ ಸೇವಿಸಿ ಅಸ್ವಸ್ಥ ಆದ ವ್ಯಕ್ತಿ

ಬೆಂಗಳೂರು: ಪೊಲೀಸ್ ಕಮಿಷನರ್​​ ಕಚೇರಿ ಗೇಟ್​ನಲ್ಲಿ ವ್ಯಕ್ತಿ ಓರ್ವ ವಿಷ ಸೇವಿಸಿರುವಂತಹ ಘಟನೆ ನಡೆದಿದೆ. ವಿಜಯಪುರ ಮೂಲದ ಸಿದ್ದರಾಮಗೌಡ ವಿಷ ಸೇವಿಸಿ ಅಸ್ವಸ್ಥ ಆದ ವ್ಯಕ್ತಿ. ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ನನಗೆ ನ್ಯಾಯ ನೀಡಿಲ್ಲ. ಮಗಳ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಅನ್ಯಾಯವಾಗಿದೆ. ಪೊಲೀಸರು ಹಣ, ಚಿನ್ನಾಭರಣ ಪಡೆದು ಮೋಸ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತರ ಕಚೇರಿ ಹಿಂದಿನ ಗೇಟ್​ನಲ್ಲಿ ವಿಷಸೇವಿಸಿ ಸಿದ್ದರಾಮಗೌಡ ಅಸ್ವಸ್ಥರಾಗಿ ಬಿದಿದ್ದ. ಕೂಡಲೇ ಬೌರಿಂಗ್ ಆಸ್ಪತ್ರೆಗೆ ಪೊಲೀಸ್ ಸಿಬ್ಬಂದಿ ರವಾನಿಸಿದರು.

ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸ್ನೇಹಿತರು ಜನ್ಮದಿನ ಆಚರಣೆ

ಬೆಳಗಾವಿ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸ್ನೇಹಿತರು ಜನ್ಮದಿನ ಆಚರಿಸಿಕೊಂಡಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಜುಲೈ 23 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಗನಕೇರಿ ಗ್ರಾಮದ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರರಿಂದ ಜನ್ಮದಿನಾಚರಣೆ ಮಾಡಲಾಗಿದೆ. ಸಾರ್ವಜನಿಕವಾಗಿ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ತಲ್ವಾರ್‌ನಿಂದ ಕೇಕ್ ಕತ್ತರಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗಿದೆ. ತಲ್ವಾರ್​ನಿಂದ ಕೇಕ್ ಕಟ್ ಮಾಡಿದವರ ಮೇಲೆ ಘಟಪ್ರಭಾ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಇದನ್ನೂ ಓದಿ: Students Missing: ರಾಯಚೂರು; ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ನೀರಿನ ತೊಟ್ಟಿಗೆ ಬಿದ್ದು ಒಂದೂವರೆ ವರ್ಷದ ಬಾಲಕಿ ಸಾವು

ಚಿತ್ರದುರ್ಗ: ನೀರಿನ ತೊಟ್ಟಿಗೆ ಬಿದ್ದು ಒಂದೂವರೆ ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ. ತನು ಸಾವನ್ನಪ್ಪಿರುವ ಬಾಲಕಿ. ಮನೆ ಬಳಿ ಆಟವಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತಿದ್ದ ಲಾರಿಗೆ ಬೈಕ್​ ಡಿಕ್ಕಿ: ಬೈಕ್ ಸವಾರ ಸಾವು

ಬಾಗಲಕೋಟೆ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಆನದಿನ್ನಿ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ಶ್ರೀಕಾಂತ ಕುಂಚನೂರು (45) ಮೃತ ಬೈಕ್ ಸವಾರ. ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದ ನಿವಾಸಿ.

Published On - 3:03 pm, Mon, 25 July 22

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ