AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಡನ್​​​​​​ನಿಂದ ಲೈಂಗಿಕ ಕಿರುಕುಳ

ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹಾಸ್ಟೇಲ್​​ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.

ಬಾಗಲಕೋಟೆ: ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಡನ್​​​​​​ನಿಂದ ಲೈಂಗಿಕ ಕಿರುಕುಳ
ಬಾಗಲಕೋಟೆ ವಿದ್ಯಾರ್ಥಿನಿಯರ ವಸತಿ ನಿಲಯ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Dec 13, 2023 | 1:40 PM

Share

ಬಾಗಲಕೋಟೆ, ಡಿಸೆಂಬರ್​​ 13: ಬೀಳಗಿ (Bilagi) ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ (Students) ಅಂಬೇಡ್ಕರ್ ವಸತಿ ನಿಲಯದ ವಾರ್ಡನ್​​ ಸಂಕನಗೌಡ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹಾಸ್ಟೇಲ್​​ನ 3-4 ವಿದ್ಯಾರ್ಥಿನಿಯರ ಎದೆ, ನಡು ಹಾಗೂ ಹಿಂಭಾಗ ಮುಟ್ಟಿ ವಾರ್ಡನ್ ಸಂಕನಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದರೇ, ನೋಟಿಸ್​ ನೀಡಿದ್ದೇವೆ ಎಂದು ಹೇಳಿ ಕೈ ತೊಳೆದುಕೊಂಡಿದ್ದಾರೆ. ಆದರೆ ಹಾಸ್ಟೆಲ್ ವಾರ್ಡನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ಸದ್ಯ ವಾರ್ಡನ್​​ ಹಾಸ್ಟೆಲ್​ಗೆ ಬಾರದೆ ರಜೆಯಲ್ಲಿದ್ದಾನೆ.

ಕಿರುಕುಳ ಆರೋಪ: ಜೈಲರ್​ಗೆ ಶೋಕಾಸ್ ನೋಟಿಸ್​

ಚಿತ್ರದುರ್ಗ: ಜಿಲ್ಲಾ ಕಾರಾಗೃಹದ ಜೈಲರ್ ಶ್ರೀಮಂತ ಗೌಡ ಪಾಟೀಲ್​ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲರ್​ಗೆ ಶೋಕಾಸ್ ನೋಟಿಸ್​ ನೀಡಿದೆ. ನ್ಯಾಮತಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಹೊನ್ನಾಳಿ ತಾಲೂಕಿನ ಚಿಲೂರು ಗ್ರಾಮದ ಚಂದ್ರಪ್ಪ ಎಂಬ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ದಾವಣಗೆರೆ ಜೈಲಿಂದ ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡಿದ ಆರೋಪ: ಶಿವಮೊಗ್ಗದ ಇಬ್ಬರು ಶಿಕ್ಷಕರು ಅಮಾನತು

ಚಿತ್ರದುರ್ಗ ಜೈಲಿನ ಜೈಲರ್​​ ಶ್ರೀಮಂತ ಗೌಡ ಪಾಟೀಲ್ ತನಗೆ (ಆರೋಪಿ ಚಂದ್ರಪ್ಪ) ಜಾತಿ ಆಧರಿತ ಹಿಂಸೆ ನೀಡಿದ್ದು ಮತ್ತು ಥಳಿತಿಳಿಸಿದ್ದಾರೆ ಎಂದು ವಕೀಲರ ಮೂಲಕ ಕೋರ್ಟ್​​ಗೆ ಲಿಖಿತ ದೂರು ನೀಡಿದ್ದಾರೆ. ಅಲ್ಲದೆ ಚಿತ್ರದುರ್ಗ ಜೈಲಿನಿಂದ ದಾವಣಗೆರೆ ಜೈಲಿಗೆ ಶಿಫ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ಆರೋಪಿ ಚಂದ್ರಪ್ಪ ನೀಡಿರುವ ದೂರು ಆಧರಿಸಿ ನ್ಯಾಯಾಲಯ ನೋಟಿಸ್​ ನೀಡಿದೆ. ನೋಟಿಸ್ ತಲುಪಿದ ಒಂದು ವಾರದೊಳಗೆ ಜೈಲರ್​ ಶ್ರೀಮಂತ ಗೌಡ ಪಾಟೀಲ್​ ಖುದ್ದಾಗಿ ಹಾಜರಾಗಿ ಉತ್ತರಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​