ಬಾಗಲಕೋಟೆ: ಶಾಲೆಯಿಂದ ವಾಪಸ್ ತೆರಳಲು ಬಸ್ ಇಲ್ಲದ ಹಿನ್ನೆಲೆ; ವಿದ್ಯಾರ್ಥಿಗಳ ಪ್ರತಿಭಟನೆ
ರಸ್ತೆಯಲ್ಲಿ ಬಸ್ ತಡೆದ ಪರಿಣಾಮ ಕುಳಗೇರಿ ಕ್ರಾಸ್ -ಬಾದಾಮಿ ಮಾರ್ಗದ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ನಂತರ ಕೆಎಸ್ಆರ್ಟಿಸಿ ಸಿಬ್ಬಂದಿ ಬಸ್ ಬಿಡುವ ಭರವಸೆ ನೀಡಿ ಮನವೊಲಿಸಿದ ಕಾರಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಬಾಗಲಕೋಟೆ: ಶಾಲೆಯಿಂದ ವಾಪಸ್ ಗ್ರಾಮಕ್ಕೆ ತೆರಳಲು ಬಸ್ ಇಲ್ಲದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬೀರನೂರು, ತಳಕವಾಡ, ಆಲೂರು.ಎಸ್.ಕೆ, ಹಾಗನೂರು, ಕರ್ಲಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಂದ ಬಸ್ ತಡೆದು ಧರಣಿ ನಡೆಸಲಾಗಿದೆ.
ಮದ್ಯಾಹ್ನವೇ ಶಾಲೆ ಬಿಟ್ಟರೂ ಸಂಜೆ ಐದು ಗಂಟೆ ಆದರೂ ಬಸ್ ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದರು. ಇದರಿಂದ ಕುಳಗೇರಿ ಕ್ರಾಸ್ ನಲ್ಲಿ ಬಾದಾಮಿ ಮಾರ್ಗದ ಬಸ್ ತಡೆದು ಸಮರ್ಪಕ ಬಸ್ ಬಿಡುವಂತೆ ಆಗ್ರಹ ಮಾಡಿದ್ದರು. ಸ್ಥಳಕ್ಕೆ ಬಂದ ಕೆಎಸ್ಆರ್ಟಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ರಸ್ತೆಯಲ್ಲಿ ಬಸ್ ತಡೆದ ಪರಿಣಾಮ ಕುಳಗೇರಿ ಕ್ರಾಸ್ -ಬಾದಾಮಿ ಮಾರ್ಗದ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ನಂತರ ಕೆಎಸ್ಆರ್ಟಿಸಿ ಸಿಬ್ಬಂದಿ ಬಸ್ ಬಿಡುವ ಭರವಸೆ ನೀಡಿ ಮನವೊಲಿಸಿದ ಕಾರಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.
ಹಾಸನ: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ಎಐಡಿಎಸ್ಒ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. ಪೂರ್ವಸಿದ್ಧತೆ ಮಾಡಿಕೊಳ್ಳದೆ ಎನ್ಇಪಿ ಜಾರಿಗೆ ಆಕ್ರೋಶ ವ್ಯಕ್ತವಾಗಿದೆ. ಹೊಸ ಪಠ್ಯಕ್ರಮಕ್ಕೆ ತಯಾರಿಯನ್ನೇ ಮಾಡದೆ ಏಕಾಏಕಿ ಹೊಸ ಪದ್ದತಿ ಹೇರಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ಹೊಸ ಶಿಕ್ಷಣ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಿದೆ ಎಂದು ಆರೋಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು: ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಧರಣಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಸರ್ಕಾರದ ನೀತಿಗೆ ಖಂಡನೆ ವ್ಯಕ್ತವಾಗಿದೆ. ತುಮಕೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರು ಧರಣಿ ಕೈಗೊಂಡಿದ್ದಾರೆ. ಪಾಠ ಪ್ರವಚನ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡಿದ್ದಾರೆ.
ಇದನ್ನೂ ಓದಿ: Parliament Winter Session ರೈತರ ಪ್ರತಿಭಟನೆಯ ವೇಳೆ ಪೊಲೀಸರ ಕ್ರಮದಿಂದಾಗಿ ರೈತರು ಸಾವಿಗೀಡಾಗಿಲ್ಲ: ಕೇಂದ್ರ ಸಚಿವ ತೋಮರ್
ಇದನ್ನೂ ಓದಿ: ಕಲಬುರಗಿ: ವರ್ಗಾವಣೆಗೊಂಡ ಶಿಕ್ಷಕನ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ವಿದ್ಯಾರ್ಥಿನಿಯರು