AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಶಾಲೆಯಿಂದ ವಾಪಸ್ ತೆರಳಲು ಬಸ್ ಇಲ್ಲದ ಹಿನ್ನೆಲೆ; ವಿದ್ಯಾರ್ಥಿಗಳ ಪ್ರತಿಭಟನೆ

ರಸ್ತೆಯಲ್ಲಿ ಬಸ್ ತಡೆದ ಪರಿಣಾಮ ಕುಳಗೇರಿ ಕ್ರಾಸ್ -ಬಾದಾಮಿ ಮಾರ್ಗದ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ನಂತರ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಸ್ ಬಿಡುವ ಭರವಸೆ ನೀಡಿ ಮನವೊಲಿಸಿದ ಕಾರಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಬಾಗಲಕೋಟೆ: ಶಾಲೆಯಿಂದ ವಾಪಸ್ ತೆರಳಲು ಬಸ್ ಇಲ್ಲದ ಹಿನ್ನೆಲೆ; ವಿದ್ಯಾರ್ಥಿಗಳ ಪ್ರತಿಭಟನೆ
ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 11, 2021 | 6:15 PM

Share

ಬಾಗಲಕೋಟೆ: ಶಾಲೆಯಿಂದ ವಾಪಸ್ ಗ್ರಾಮಕ್ಕೆ ತೆರಳಲು ಬಸ್ ಇಲ್ಲದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬೀರನೂರು, ತಳಕವಾಡ, ಆಲೂರು.ಎಸ್.ಕೆ, ಹಾಗನೂರು, ಕರ್ಲಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಂದ ಬಸ್ ತಡೆದು ಧರಣಿ ನಡೆಸಲಾಗಿದೆ.

ಮದ್ಯಾಹ್ನವೇ ಶಾಲೆ ಬಿಟ್ಟರೂ ಸಂಜೆ ಐದು ಗಂಟೆ ಆದರೂ ಬಸ್ ಬಾರದ ಹಿನ್ನೆಲೆ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದರು. ಇದರಿಂದ ಕುಳಗೇರಿ ಕ್ರಾಸ್ ನಲ್ಲಿ ಬಾದಾಮಿ ಮಾರ್ಗದ ಬಸ್ ತಡೆದು ಸಮರ್ಪಕ‌ ಬಸ್ ಬಿಡುವಂತೆ ಆಗ್ರಹ ಮಾಡಿದ್ದರು. ಸ್ಥಳಕ್ಕೆ ಬಂದ ಕೆಎಸ್​ಆರ್​ಟಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ರಸ್ತೆಯಲ್ಲಿ ಬಸ್ ತಡೆದ ಪರಿಣಾಮ ಕುಳಗೇರಿ ಕ್ರಾಸ್ -ಬಾದಾಮಿ ಮಾರ್ಗದ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ನಂತರ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಸ್ ಬಿಡುವ ಭರವಸೆ ನೀಡಿ ಮನವೊಲಿಸಿದ ಕಾರಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಹಾಸನ: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ಎಐಡಿಎಸ್​ಒ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. ಪೂರ್ವಸಿದ್ಧತೆ ಮಾಡಿಕೊಳ್ಳದೆ ಎನ್​ಇಪಿ ಜಾರಿಗೆ ಆಕ್ರೋಶ ವ್ಯಕ್ತವಾಗಿದೆ. ಹೊಸ ಪಠ್ಯಕ್ರಮಕ್ಕೆ ತಯಾರಿಯನ್ನೇ ಮಾಡದೆ ಏಕಾಏಕಿ ಹೊಸ ಪದ್ದತಿ ಹೇರಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ಹೊಸ ಶಿಕ್ಷಣ ಪದ್ದತಿಯಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಿದೆ ಎಂದು ಆರೋಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು: ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಧರಣಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಸರ್ಕಾರದ ನೀತಿಗೆ ಖಂಡನೆ ವ್ಯಕ್ತವಾಗಿದೆ. ತುಮಕೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರು ಧರಣಿ ಕೈಗೊಂಡಿದ್ದಾರೆ. ಪಾಠ ಪ್ರವಚನ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: Parliament Winter Session ರೈತರ ಪ್ರತಿಭಟನೆಯ ವೇಳೆ ಪೊಲೀಸರ ಕ್ರಮದಿಂದಾಗಿ ರೈತರು ಸಾವಿಗೀಡಾಗಿಲ್ಲ: ಕೇಂದ್ರ ಸಚಿವ ತೋಮರ್

ಇದನ್ನೂ ಓದಿ: ಕಲಬುರಗಿ: ವರ್ಗಾವಣೆಗೊಂಡ ಶಿಕ್ಷಕನ ಬಿಳ್ಕೋಡುಗೆ ಕಾರ್ಯಕ್ರಮದಲ್ಲಿ ಗಳಗಳನೆ ಅತ್ತ ವಿದ್ಯಾರ್ಥಿನಿಯರು

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ