AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಮತ್ತೆ ಕಬ್ಬಿನ ಕಂಟಕ: 5,500 ರೂ ನಿಗದಿಗೆ ಪಟ್ಟು; ಬಾಗಲಕೋಟೆಯಲ್ಲಿ ಮತ್ತೆ ಸಿಡಿದೆದ್ದ ರೈತರು

ಕಬ್ಬು ಬೆಳೆಗಾರರು ಪ್ರತಿ ಟನ್‌ಗೆ 5,500 ಬೆಲೆ ನಿಗದಿ, ಎಂಎಸ್‌ಪಿ ಪರಿಷ್ಕರಣೆ ಮತ್ತು ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಕಬ್ಬು ಬೆಳೆಗಾರರು ಮತ್ತೆ ಸಜ್ಜಾಗಿದ್ದಾರೆ. ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ ರೈತರು ಸಂಘಟಿತರಾಗಿದ್ದು, ಕೇಂದ್ರ ಸಚಿವ ಪ್ರಲ್ಹಾಸ್​ ಜೋಶಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಸರ್ಕಾರಕ್ಕೆ ಮತ್ತೆ ಕಬ್ಬಿನ ಕಂಟಕ: 5,500 ರೂ ನಿಗದಿಗೆ ಪಟ್ಟು; ಬಾಗಲಕೋಟೆಯಲ್ಲಿ ಮತ್ತೆ ಸಿಡಿದೆದ್ದ ರೈತರು
ಕಬ್ಬು ಬೆಳೆಗಾರರ ಹೋರಾಟImage Credit source: tv9 kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Sep 17, 2026 | 7:19 PM

Share

ಬಾಗಲಕೋಟೆ, ಸೆಪ್ಟೆಂಬರ್​ 17: ಕಬ್ಬು ನುರಿಸುವ ಹಂಗಾಮು ಸಮೀಪಿಸುತ್ತಿದ್ದಂತೆ ಕಬ್ಬು ಬೆಳೆಗಾರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಕಳೆದ ವರ್ಷ ನಡೆದ ತೀವ್ರ ಪ್ರತಿಭಟನೆಗೆ ಮಣಿದು ಸರ್ಕಾರ ಪ್ರತಿ ಟನ್‌ಗೆ 3,300 ರೂ ನೀಡಲು ಒಪ್ಪಿತ್ತು. ಆದರೆ ಈ ಬಾರಿ ಪ್ರತಿ ಟನ್ ಕಬ್ಬಿಗೆ 5,500 ಬೆಲೆ ನಿಗದಿ ಮಾಡಬೇಕೆಂದು ರೈತರು ಪಟ್ಟು ಹಿಡಿದಿದ್ದು, ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ಬೆಲೆ ಘೋಷಣೆ ಮಾಡಿದ ನಂತರವೇ ನವೆಂಬರ್‌ನಲ್ಲಿ ಕಾರ್ಖಾನೆಗಳನ್ನು ಆರಂಭಿಸಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ರೈತರ ಸಂಘಟನೆ: ಬೈಕ್ ರ‍್ಯಾಲಿ ಮೂಲಕ ಜಾಗೃತಿ

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಅಧ್ಯಕ್ಷ ಚೂನಪ್ಪ ಪೂಜಾರಿ, ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ಹೋರಾಟಕ್ಕೆ ರೈತರನ್ನು ಈಗಿಂದಲೇ ಬಾಗಲಕೋಟೆ ‌ಜಿಲ್ಲೆಯಲ್ಲಿ ಸಂಘಟನೆ ಮಾಡಲಾಗುತ್ತಿದೆ. ಈಗಾಗಲೇ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಕೆರೂರು ಸೇರಿದಂತೆ ವಿವಿಧೆಡೆ ಜಿಲ್ಲೆಯ ರೈತರ ಸಭೆ ಮಾಡಲಾಗುತ್ತಿದೆ. ಬೈಕ್ ರ‍್ಯಾಲಿ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

LIVE TV

ಈ ವರ್ಷ ಟನ್ ಕಬ್ಬಿಗೆ 5,500 ರೂ ಬೆಲೆಗೆ ರೈತರ ಆಗ್ರಹವಿದ್ದು, ಸರ್ಕಾರದ ಮುಂದೆ ಬಾರಿ ಸವಾಲು ಎದುರಾಗಿದೆ. ನವೆಂಬರ್​ನಲ್ಲಿ ಕಬ್ಬು ನುರಿಸುವ ಕಾರ್ಯ ಶುರುವಾಗಲಿದ್ದು 5,500 ಬೆಲೆ ಘೋಷಣೆ ಮಾಡಿಯೇ ಕಾರ್ಖಾನೆ ಆರಂಭಿಸಬೇಕು, ಇಲ್ಲದಿದ್ದರೆ ಬೃಹತ್ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆಗೆ ಮುತ್ತಿಗೆ ಹಾಕಲು ಪ್ಲ್ಯಾನ್​​

ಕಳೆದ ವರ್ಷ 3500 ರೂ.ಗೆ ಹೋರಾಟ ತೀವ್ರವಾಗಿತ್ತು. ಬಾಗಲಕೋಟೆಯಲ್ಲಿ ಸಮೀರವಾಡಿ ಸಕ್ಕರೆ ಕಾರ್ಖಾನೆ ಮುಂದೆ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚಿದ ಪ್ರಸಂಗವೂ ನಡೆದಿತ್ತು. ಈ ವರ್ಷ ಅದಕ್ಕಿಂತ ದೊಡ್ಡ ಹೋರಾಟಕ್ಕೆ ಬಾಗಲಕೋಟೆ ಕಬ್ಬು ಬೆಳೆಗಾರರು ಸಜ್ಜಾಗಿದ್ದಾರೆ. ರೈತರ ಪ್ರಮುಖ ಬೇಡಿಕೆಗಳಾದ ಪ್ರತಿ ಟನ್ ಕಬ್ಬಿಗೆ 5,500 ರೂ ನಿಗದಿ, ಕೇಂದ್ರದಿಂದ MSP ಪರಿಷ್ಕರಣೆ, ಸ್ವಾಮಿನಾಥನ್ ವರದಿ ಜಾರಿ ಪ್ರಮುಖ ಬೇಡಿಕೆಗಳಾಗಿದ್ದು, ಈ ಬೇಡಿಕೆಗಳ ಈಡೇರಿಕೆಗಾಗಿ ಸೆಪ್ಟೆಂಬರ್ 29ಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿಯಲ್ಲಿರುವ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ. ಈಗಾಗಲೇ ಬಾಗಲಕೋಟೆ ಜಿಲ್ಲೆಯಾದ್ಯಂತ ಸಂಘಟನೆ ಜೋರಾಗಿದೆ.

ಇದನ್ನೂ ಓದಿ: ‘ಬೆಲ್ಲದ ನಾಡು’ ಮಹಾಲಿಂಗಪುರಕ್ಕೆ ಕಹಿ ಕಾಲ: ಗತವೈಭವ ಕಳೆದುಕೊಂಡ ಏಷ್ಯಾದ ಪ್ರಸಿದ್ಧ ಬೆಲ್ಲದ ಮಾರುಕಟ್ಟೆ!

ಒಟ್ಟಿನಲ್ಲಿ ಕಬ್ಬು ನುರಿಸುವ ಸೀಸನ್ ಆರಂಭಕ್ಕೂ ಮುನ್ನವೇ ರೈತರು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ. ಪ್ರತಿ ಟನ್​ಗೆ 5500 ರೂ ಬೇಡಿಕೆ ಸರಕಾರಕ್ಕೆ ಮುಂದೆ ದೊಡ್ಡ ಸವಾಲು ಆಗೋದರಲ್ಲಿ ಎರಡು ಮಾತಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ