Bagalkote News: ಉಚಿತ ಪ್ರಯಾಣದಿಂದ ರಶ್​ ಆದ​ ಬಸ್​​ನಲ್ಲಿ ಕಳ್ಳರ ಕೈಚಳಕ, ಅಜ್ಜಿಯ ಬ್ಯಾಗನಿಂದ ಹಣ ಮಾಯ

ಬ್ಯಾಗನಲ್ಲಿ ಸಾವಿರಾರು ರೂಪಾಯಿ ಹಣ ಇಟ್ಟುಕೊಂಡು ಸಂಬಂಧಿಕರ ಮನೆಗೆ ತೆರಳುತ್ತಿದ್ದ ಅಜ್ಜಿಯ ಹಣವನ್ನು ಕಳ್ಳರು ಕದ್ದಿರುವ ಘಟನೆ ಭಾಗಲಕೋಟೆ ತಾಲೂಕಿನ ಗದ್ದನಕೇರಿಯಲ್ಲಿ ನಡೆದಿದೆ.

Bagalkote News: ಉಚಿತ ಪ್ರಯಾಣದಿಂದ ರಶ್​ ಆದ​ ಬಸ್​​ನಲ್ಲಿ ಕಳ್ಳರ ಕೈಚಳಕ, ಅಜ್ಜಿಯ ಬ್ಯಾಗನಿಂದ ಹಣ ಮಾಯ
ಹಣ ಕಳೆದುಕೊಂಡ ಅಜ್ಜಿ
Follow us
|

Updated on: Jun 12, 2023 | 12:13 PM

ಬಾಗಲಕೋಟೆ: ಶಕ್ತಿ ಯೋಜನೆ (Shakti Yojana) ಅಡಿ ಮಹಿಳೆಯರು ಸರ್ಕಾರಿ ಬಸ್ (Government Bus) ​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದು, ಬೆಳಿಗ್ಗೆಯಿಂದ ರಾಜ್ಯಾದ್ಯಂತ ಸರ್ಕಾರಿಗಳು ರಶ್​​​​ ಆಗಿವೆ. ಬಸ್​​ ಒಳಗಡೆ ನಿಲ್ಲಲು ಸಹಿತ ಜಾಗವಿಲ್ಲದೆ ಪುಟ್​​ಬೋರ್ಡ್​​ಗಳ ಮೇಲೆ ನಿಂತು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದೇರೀತಿ ಬಾಗಲಕೋಟೆ ಜಿಲ್ಲೆಯ ಸಿಟಿ, ಬೇರೆ ಬೇರೆ ಊರುಗಳಿಗೆ ತೆರಳುವ ಬಸ್​ಗಳು ರಶ್​​ ಆಗಿವೆ. ಈ ರಶ್​ ಆದ ಬಸ್​​ಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಅಜ್ಜಿಯೊಬ್ಬರ ಬ್ಯಾಗನಲ್ಲಿದ್ದ 30 ಸಾವಿರ ಊ. ಹಣವನ್ನು ಎಗರಿಸಿದ್ದಾರೆ. ​​ ​​

ವೃದ್ದೆ ಚೆನ್ನಮ್ಮ ಬಾಣದ ಎಂಬವರು ಬಾದಾಮಿಯ ಸಂಬಂಧಿಕರೊಬ್ಬರಿಗೆ 30 ಸಾವಿರ ರೂ. ಹಣ ಕೊಡಲು ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​ನಿಂದ ಸರ್ಕಾರಿ ಬಸ್​​ನಲ್ಲಿ ಹೊರಟಿದ್ದರು. ಈ ವೇಳೆ ಗದ್ದನಕೇರಿ ಕ್ರಾಸ್​-ಬಾಗಲಕೋಟೆ ಮಧ್ಯೆ ಅಜ್ಜಿ ಬ್ಯಾಗ್​ನಲ್ಲಿದ್ದ 30 ಸಾವಿರ ರೂ. ಹಣವನ್ನು ಎಗರಿಸಿದ್ದಾರೆ.

ಇದನ್ನೂ ಓದಿ: ಉಚಿತ ಬಸ್ ಪ್ರಯಾಣದಿಂದ ವಂಚಿತರಾದ ಗಡಿಭಾಗದ ಗ್ರಾಮಗಳ ಮಹಿಳೆಯರು, ಏಕೆ ? ಇಲ್ಲಿದೆ ಓದಿ

ಮಹಿಳೆಯರು ಬಸ್ ನಲ್ಲಿ ಹೆಚ್ಚು ಜನರು ಇದ್ದರು, ಇತರೆ ಜನರು ಇದ್ದರು. ಇದರಿಂದ ಬಸ್ ಬಹಳ ರಶ್ ಆಗಿತ್ತು. ಬಸ್​​ನಲ್ಲಿ ಜನದಟ್ಟಣೆ ಹೆಚ್ಚಾದ್ದರಿಂದ ಮೊದಲು ಎರಡು ಬಸ್​ನಲ್ಲಿ ಹತ್ತಲಿಲ್ಲ. ನಂತರದ ಬಸ್ ರಶ್ ಇರೋದಿಲ್ಲ ಅನ್ಕೊಂಡಿದ್ದೆ, ಆದರೆ ಮೂರನೇ ಬಸ್ ಅದು ಕೂಡ ರಶ್ ಇತ್ತು. ಅನಿರ್ವಾಯ ಅಂತ ಅದೇ ಬಸ್ ಹತ್ತಿದೆ. ಸೀಟ್ ಸಿಗಲಿಲ್ಲ. ನಿಂತಾಗ ಹಣ ಹೊಡೆದಿದ್ದಾರೆ ಎಂದು ಚೆನ್ನಮ್ಮ ಬಾಣದ ಹೇಳಿದ್ದಾರೆ.

ಬಾಗಲಕೋಟೆ ಬಸ್ ಸ್ಟ್ಯಾಂಡ್ ಬಳಿ ಬರುತ್ತಿದ್ದಂತೆ ಬ್ಯಾಗ್ ‌ನೋಡಿದಾಗ ಹಣ ಇರಲಿಲ್ಲ. ಮನೆಯಲ್ಲಿ ಪೋನ್ ಪೆ‌ ಮಾಡ್ತಿದ್ವಿ ಯಾಕೆ ಹೊರಡಬೇಕಿತ್ತು ಅಂತ ಕೇಳ್ತಾರೆ ಏನು ಮಾಡೋದು. ಈಗ ಕಂಪ್ಲೆಂಟ್ ಕೊಡಬೇಕು ಅಂತ ಮಾಡಿನಿ ಎಂದು ಪೊಲೀಸರ ಎದುರು ಬ್ಯಾಗ್ ತೋರಿಸಿ ಅಜ್ಜಿ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ