Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote News: ಉಚಿತ ಪ್ರಯಾಣದಿಂದ ರಶ್​ ಆದ​ ಬಸ್​​ನಲ್ಲಿ ಕಳ್ಳರ ಕೈಚಳಕ, ಅಜ್ಜಿಯ ಬ್ಯಾಗನಿಂದ ಹಣ ಮಾಯ

ಬ್ಯಾಗನಲ್ಲಿ ಸಾವಿರಾರು ರೂಪಾಯಿ ಹಣ ಇಟ್ಟುಕೊಂಡು ಸಂಬಂಧಿಕರ ಮನೆಗೆ ತೆರಳುತ್ತಿದ್ದ ಅಜ್ಜಿಯ ಹಣವನ್ನು ಕಳ್ಳರು ಕದ್ದಿರುವ ಘಟನೆ ಭಾಗಲಕೋಟೆ ತಾಲೂಕಿನ ಗದ್ದನಕೇರಿಯಲ್ಲಿ ನಡೆದಿದೆ.

Bagalkote News: ಉಚಿತ ಪ್ರಯಾಣದಿಂದ ರಶ್​ ಆದ​ ಬಸ್​​ನಲ್ಲಿ ಕಳ್ಳರ ಕೈಚಳಕ, ಅಜ್ಜಿಯ ಬ್ಯಾಗನಿಂದ ಹಣ ಮಾಯ
ಹಣ ಕಳೆದುಕೊಂಡ ಅಜ್ಜಿ
Follow us
ವಿವೇಕ ಬಿರಾದಾರ
|

Updated on: Jun 12, 2023 | 12:13 PM

ಬಾಗಲಕೋಟೆ: ಶಕ್ತಿ ಯೋಜನೆ (Shakti Yojana) ಅಡಿ ಮಹಿಳೆಯರು ಸರ್ಕಾರಿ ಬಸ್ (Government Bus) ​ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದು, ಬೆಳಿಗ್ಗೆಯಿಂದ ರಾಜ್ಯಾದ್ಯಂತ ಸರ್ಕಾರಿಗಳು ರಶ್​​​​ ಆಗಿವೆ. ಬಸ್​​ ಒಳಗಡೆ ನಿಲ್ಲಲು ಸಹಿತ ಜಾಗವಿಲ್ಲದೆ ಪುಟ್​​ಬೋರ್ಡ್​​ಗಳ ಮೇಲೆ ನಿಂತು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದೇರೀತಿ ಬಾಗಲಕೋಟೆ ಜಿಲ್ಲೆಯ ಸಿಟಿ, ಬೇರೆ ಬೇರೆ ಊರುಗಳಿಗೆ ತೆರಳುವ ಬಸ್​ಗಳು ರಶ್​​ ಆಗಿವೆ. ಈ ರಶ್​ ಆದ ಬಸ್​​ಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಅಜ್ಜಿಯೊಬ್ಬರ ಬ್ಯಾಗನಲ್ಲಿದ್ದ 30 ಸಾವಿರ ಊ. ಹಣವನ್ನು ಎಗರಿಸಿದ್ದಾರೆ. ​​ ​​

ವೃದ್ದೆ ಚೆನ್ನಮ್ಮ ಬಾಣದ ಎಂಬವರು ಬಾದಾಮಿಯ ಸಂಬಂಧಿಕರೊಬ್ಬರಿಗೆ 30 ಸಾವಿರ ರೂ. ಹಣ ಕೊಡಲು ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​ನಿಂದ ಸರ್ಕಾರಿ ಬಸ್​​ನಲ್ಲಿ ಹೊರಟಿದ್ದರು. ಈ ವೇಳೆ ಗದ್ದನಕೇರಿ ಕ್ರಾಸ್​-ಬಾಗಲಕೋಟೆ ಮಧ್ಯೆ ಅಜ್ಜಿ ಬ್ಯಾಗ್​ನಲ್ಲಿದ್ದ 30 ಸಾವಿರ ರೂ. ಹಣವನ್ನು ಎಗರಿಸಿದ್ದಾರೆ.

ಇದನ್ನೂ ಓದಿ: ಉಚಿತ ಬಸ್ ಪ್ರಯಾಣದಿಂದ ವಂಚಿತರಾದ ಗಡಿಭಾಗದ ಗ್ರಾಮಗಳ ಮಹಿಳೆಯರು, ಏಕೆ ? ಇಲ್ಲಿದೆ ಓದಿ

ಮಹಿಳೆಯರು ಬಸ್ ನಲ್ಲಿ ಹೆಚ್ಚು ಜನರು ಇದ್ದರು, ಇತರೆ ಜನರು ಇದ್ದರು. ಇದರಿಂದ ಬಸ್ ಬಹಳ ರಶ್ ಆಗಿತ್ತು. ಬಸ್​​ನಲ್ಲಿ ಜನದಟ್ಟಣೆ ಹೆಚ್ಚಾದ್ದರಿಂದ ಮೊದಲು ಎರಡು ಬಸ್​ನಲ್ಲಿ ಹತ್ತಲಿಲ್ಲ. ನಂತರದ ಬಸ್ ರಶ್ ಇರೋದಿಲ್ಲ ಅನ್ಕೊಂಡಿದ್ದೆ, ಆದರೆ ಮೂರನೇ ಬಸ್ ಅದು ಕೂಡ ರಶ್ ಇತ್ತು. ಅನಿರ್ವಾಯ ಅಂತ ಅದೇ ಬಸ್ ಹತ್ತಿದೆ. ಸೀಟ್ ಸಿಗಲಿಲ್ಲ. ನಿಂತಾಗ ಹಣ ಹೊಡೆದಿದ್ದಾರೆ ಎಂದು ಚೆನ್ನಮ್ಮ ಬಾಣದ ಹೇಳಿದ್ದಾರೆ.

ಬಾಗಲಕೋಟೆ ಬಸ್ ಸ್ಟ್ಯಾಂಡ್ ಬಳಿ ಬರುತ್ತಿದ್ದಂತೆ ಬ್ಯಾಗ್ ‌ನೋಡಿದಾಗ ಹಣ ಇರಲಿಲ್ಲ. ಮನೆಯಲ್ಲಿ ಪೋನ್ ಪೆ‌ ಮಾಡ್ತಿದ್ವಿ ಯಾಕೆ ಹೊರಡಬೇಕಿತ್ತು ಅಂತ ಕೇಳ್ತಾರೆ ಏನು ಮಾಡೋದು. ಈಗ ಕಂಪ್ಲೆಂಟ್ ಕೊಡಬೇಕು ಅಂತ ಮಾಡಿನಿ ಎಂದು ಪೊಲೀಸರ ಎದುರು ಬ್ಯಾಗ್ ತೋರಿಸಿ ಅಜ್ಜಿ ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ