Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬದಂದು ಕರ್ನಾಟಕದಲ್ಲಿ ಜಲ ಗಂಡಾಂತರ: ಐವರು ನೀರುಪಾಲು

ಯುಗಾದಿ ಹಬ್ಬದಂದು ಕರ್ನಾಟಕದ ವಿವಿಧೆಡೆ ಐವರು ನೀರುಪಾಲಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಮೂವರು ಬಾಲಕರು ನೀರುಪಾಲಾದ ಘಟನೆ ದೊಡ್ಡ ದುರಂತವಾಗಿದೆ. ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಇಂತಹ ಘಟನೆಗಳು ನಡೆದಿವೆ. ನದಿಗಳ ಬಳಿ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ ಈ ದುರಂತಗಳು ಸಂಭವಿಸಿವೆ ಎಂದು ಆರೋಪಿಸಲಾಗಿದೆ.

ಯುಗಾದಿ ಹಬ್ಬದಂದು ಕರ್ನಾಟಕದಲ್ಲಿ ಜಲ ಗಂಡಾಂತರ: ಐವರು ನೀರುಪಾಲು
ಕೃಷ್ಣಾ ನದಿಯಲ್ಲಿ ಮೂವರು ನೀರುಪಾಲು
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Mar 30, 2025 | 6:23 PM

ಬಾಗಲಕೋಟೆ, ಮಾರ್ಚ್​ 30: ಹೊಸ ವರ್ಷ ಯುಗಾದಿ (Ugadi) ಹಬ್ಬದಂದು ರಾಜ್ಯದಲ್ಲಿ ಜಲ ಗಂಡಾಂತರ ಆವರಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐವರು ನೀರುಪಾಲಾಗಿದ್ದಾರೆ. ಬಾಗಲಕೋಟೆ (Bagalkot) ತಾಲೂಕಿನ‌ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿದ್ದಾರೆ. ಸೋಮಶೇಖರ್ ದೇವರಮನಿ (15), ಪರನಗೌಡ ಬೀಳಗಿ (17) ಮತ್ತು ಮಲ್ಲಪ್ಪ ಬಗಲಿ (16) ನೀರುಪಾಲಾದವರು. ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ.

ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಬಳಿಯ ತುಂಗಾ ನದಿಯಲ್ಲಿ ಮುಳುಗಿ ಓರ್ವ ಯುವಕ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ತಾಲೂಕಿನ ಜಿಗಳಗೊಡು ಗ್ರಾಮದ ನಿವಾಸಿ ಕಿರಣ್ (20) ಮೃತ ದುರ್ದೈವಿ. ಕಿರಣ್ ಮೂವರು ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದನು. ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಕಿರಣ್ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
ಬೆಳಗಾವಿ: ಸಾರ್ವಜನಿಕವಾಗಿ ಬಟ್ಟೆ ಹರಿದು ಅತ್ತೆ ಮೇಲೆ ಅಳಿಯನಿಂದ ಹಲ್ಲೆ
Image
ಗರ್ಭಿಣಿಯಾಗಿದ್ದಾಗ್ಲೇ ಬೇರೊಬ್ಬನ ಓಡಿಹೋಗಿದ್ದ ಮಹಿಳೆ, ಮಗುವಿನ ಕೊಂದ ಮಲತಂದೆ
Image
ಪತ್ನಿ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ
Image
ಮದುವೆಯಾಗಿ ಕೇವಲ 15 ದಿನಕ್ಕೆ ಗಂಡನ ಕೊಲೆಗೆ ಸುಪಾರಿ ಕೊಟ್ಟ ಹೆಂಡತಿ

ಯುಗಾದಿ ಹಬ್ಬದಂದು ಪುಣ್ಯಸ್ನಾನಕ್ಕೆಂದು ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ತೆರಳಿದ್ದ ಬಾಲಕ ಮೃತಪಟ್ಟಿದ್ದಾನೆ. ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿ ಶರಣ್​ (13) ಮೃತ ಬಾಲಕ. ಬಾಲಕ ಶರಣ್ ಸ್ನೇಹಿತರ ಜೊತೆ ನದಿಗೆ ಪುಣ್ಯಸ್ನಾನಕ್ಕೆ ತೆರಳಿದ್ದನು. ಈ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಶರಣ್ ಮೃತಪಟ್ಟಿದ್ದಾನೆ. ​

ಇದನ್ನೂ ಓದಿ: ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಭಕ್ತರು ಪುಣ್ಯಸ್ನಾನಕ್ಕೆ ಆಗಮಿಸಿದ್ದಾರೆ. ನದಿ ಬಳಿ ಸೂಚನಾ ಫಲಕ ಅಳವಡಿಸದಿದ್ದಕ್ಕೆ ದುರಂತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಕಳೆದ ವಾರ ಅಜ್ಜ, ಮೊಮ್ಮಕ್ಕಳನ್ನು ಬಲಿ ಪಡೆದಿದ್ದ ಜಾಗದಲ್ಲೇ ಈ ಘಟನೆ ನಡೆದಿದೆ. ಟಿ.ನರಸೀಪುರ ತಾಲೂಕು ಆಡಳಿತ ಮಂಡಳಿ ಬೇಜವಾಬ್ದಾರಿತನಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ.ನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ