AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಅತ್ಯಾಚಾರ, ಕೊಲೆ ಕೇಸ್​: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಅತ್ಯಾಚಾರ ಮಾಡಿ ಮರ್ಮಾಂಗ ಕೊಯ್ದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷ ಕಠಿಣ ಮತ್ತು ಜೀವಾವಧಿ ಶಿಕ್ಷೆ ವಿಧಿಸಿ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಅತ್ಯಾಚಾರ, ಕೊಲೆ ಕೇಸ್​: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 14, 2023 | 10:16 PM

Share

ಬಾಗಲಕೋಟೆ: ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಅತ್ಯಾಚಾರ ಮಾಡಿ ಮರ್ಮಾಂಗ ಕೊಯ್ದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷ ಕಠಿಣ ಮತ್ತು ಜೀವಾವಧಿ ಶಿಕ್ಷೆ (life imprisonment) ವಿಧಿಸಿ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸೈಯದ್ ಬಲೆಗೂರ ರೆಹಮಾನ್​ ಆದೇಶ ಹೊರಡಿಸಿದ್ದಾರೆ. ಮೂಲಕ 2018ರಲ್ಲಿ ಜಿಲ್ಲೆಯ ಬನಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ತೆರೆ ಎಳೆಯಲಾಗಿದೆ. ಪ್ರಕರಣದಲ್ಲಿ ವಿಶೇಷ ಜಿಲ್ಲಾ ಸರಕಾರಿ ಅಭಿಯೋಜಕರಾಗಿ ಮಲ್ಲಿಕಾರ್ಜುನ ಹಂಡಿ ವಾದ ಮಂಡಿಸಿದ್ದಾರೆ.

ಸಾಬು ಪರಗೊಂಡ ಎಂಬಾತ ಬಾಲಕನ ಮೇಲೆ ವಿಕೃತಿ ಮೆರೆದಿದ್ದ. ಆತನ ವಿರುದ್ಧ ಅಪ್ರಾಪ್ತನ ತಂದೆ ಬನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕೋರ್ಟ್​ಗೆ ಬನಹಟ್ಟಿ ಸಿಪಿಐ ಚಾರ್ಜ್ ಶೀಟ್​ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ವಿಚಾರಣೆ ನಡೆದಿದ್ದು, ಒಟ್ಟು ಐದು ಸೆಕ್ಷನ್​ಗಳ ಅಡಿಯಲ್ಲಿ ಇಂದು ಶಿಕ್ಷೆಯ ತೀರ್ಪು ಪ್ರಕಟಣೆ ಮಾಡಲಾಗಿದೆ.

ಇದನ್ನೂ ಓದಿ: Bengaluru Double Murder: 10 ಸಾವಿರ ರೂಪಾಯಿಗೆ ಡೀಲ್ ಆಗಿತ್ತು ಒಂದು ಕೊಲೆ, ಆದರೆ ನಡೆದಿದ್ದು ಜೋಡಿ ಹತ್ಯೆ

302ರ ಪ್ರಕಾರ ಜೀವಾವಧಿ ಕಠಿಣ ಶಿಕ್ಷೆ 10 ಸಾವಿರ ದಂಡ. ಪೋಕ್ಸೊ ಕೇಸ್​ಯಡಿ 20 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ. 363 ಸೆಕ್ಷನ್ ಪ್ರಕಾರ 4 ವರ್ಷ, 404 ಅಪರಾಧಕ್ಕೆ 3 ವರ್ಷ, 201 ಅಪರಾಧಕ್ಕೆ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಅಪ್ರಾಪ್ತನ ತಂದೆಗೆ 7 ಲಕ್ಷ ರೂ ಪರಿಹಾರ ಧನ ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ.

ಇದನ್ನೂ ಓದಿ: 7 ವರ್ಷ ಜೈಲಿನಲ್ಲಿದ್ದರೂ ಬುದ್ದಿಕಲಿಯದ ಆರೋಪಿ; ಹೊರ ಬಂದ ಕೆಲ ದಿನಗಳಲ್ಲೇ ಮತ್ತೇರಡು ಕೇಸ್​ ದಾಖಲು

ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸವಾರ ಸಾವು

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಬಳಿ ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಹೊಸದುರ್ಗ ಮೂಲದ ಲೋಹಿತ್(33), ನಾಗರಾಜ್(35) ಮೃತರು. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:04 pm, Fri, 14 July 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ