ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!

ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಚರ್ಚೆ ಜೋರಾಗಿದೆ. ಇದರ ನಡುವೆ ಇದೀಗ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ. ಬಾಗಲಕೋಟೆಯ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ದಲಿತ ಸಿಎಂ ಎನ್ನುವ ಧ್ವನಿ ಎತ್ತಿದ್ದಾರೆ.

ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!
ಪ್ರಸನ್ನಾನಂದ ಸ್ವಾಮೀಜಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Nov 05, 2023 | 6:08 PM

ಬಾಗಲಕೋಟೆ, (ನವೆಂಬರ್ 05): ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯಾ ಹಾಗೂ ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಮಾತಿನ ಸಮರ ತಾರಕಕ್ಕೇರಿದೆ. ಸಚಿವ ಕೆಎನ್ ರಾಜಣ್ಣ ಅವರು ಮುಂದಿನ ಸಿಎಂ ಪರಮೇಶ್ವರ್ ಎನ್ನುವ ಮೂಲಕ ದಲಿಯ ಮುಖ್ಯಮಂತ್ರಿ ಎನ್ನುವ ಅರ್ಥದಲ್ಲಿ ಹೇಳಿದ್ದರು. ಇದರ ನಡುವೆ ಇದೀಗ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ.

ಬಾಗಲಕೋಟೆಯ ಕಲಾಭವನದಲ್ಲಿ ನಡೆದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ , .ಹಾಗೇ ರಾಜ್ಯದಲ್ಲಿ ದಲಿತ ಸಿಎಂ ಯಾಕೆ ಆಗಬಾರದು? ದಲಿತರು ಮತ ಬ್ಯಾಂಕ್ ಮಾತ್ರ ಅಗಿರಬೇಕಾ? ಸಿಎಂ ಹುದ್ದೆ ಕೆಲವೆ ಸಮುದಾಯಗಳ ಸ್ವತ್ತಾ? ಯಾರಾದ್ರೂ ಗುತ್ತಿ ಪಡೆದುಕೊಂಡಿದ್ದಾರಾ? ದಲಿತರು ಸಿಎಂ ಆಗಲಿ ಎನ್ನುವ ಔದಾರ್ಯ ಹೊಂದಿರದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು. ಇದರೊಂದಿಗೆ ಸ್ವಾಮೀಜಿಯಿಂದ ದಲಿತ ಸಿಎಂ ಕೂಗು ಮತ್ತೆ ಕೇಳಿಬಂದಿದೆ.

ಇದನ್ನೂ ಓದಿ: ಉಪಹಾರಕೂಟ ನೆಪದಲ್ಲಿ ಸಚಿವರೊಂದಿಗೆ ಸಿಎಂ, ಡಿಸಿಎಂ ಮಹತ್ವದ ಸಭೆ: ಇಲ್ಲಿದೆ ಸಭೆಯ ಇನ್​ಸೈಡ್ ಡಿಟೇಲ್ಸ್

ಸಿದ್ದರಾಮಯ್ಯನವರ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಸಾಮಾಜಿಕ ನ್ಯಾಯದ ಹರಿಕಾರ. ಒಂದು ವೇಳೆ ರಾಜ್ಯದಲ್ಲಿ ಏನಾದ್ರು ಬೆಳವಣಿಗೆ ಆದರೆ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ. ಸತೀಶ ಜಾರಕಿಹೊಳಿ ಅವರಿಗೆ ಎಲ್ಲ ರೀತಿಯಲ್ಲಿ ನಾಡಿನ ಸಿಎಂ ಆಗಲು ಅರ್ಹತೆಗಳಿವೆ. ಅವರ ಬೆನ್ನಿಗೆ ನಾವೆಲ್ಲಾ ನಿಲ್ಲಬೇಕಿದೆ ಎಂದು ರಾಜನಹಳ್ಳಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ. ಹೇಳಿದರು.

ಈ ಹಿಂದೆ ಹಲವು ಬಾರಿ ಕರ್ನಾಟಕದಲ್ಲಿ ದಲಿತ ಸಿಎಂ ಕೇಳಿಬಂದಿದ್ದವು. ಆಗಾಗ ಕೇಳಿ ಬರುತ್ತಲ್ಲೇ ಇದೆ. ಇದೀಗ ಸ್ವಾಮೀಜಿಯೊಬ್ಬರ ಬಾಯಿಂದಲೇ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?