AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!

ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಚರ್ಚೆ ಜೋರಾಗಿದೆ. ಇದರ ನಡುವೆ ಇದೀಗ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ. ಬಾಗಲಕೋಟೆಯ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ದಲಿತ ಸಿಎಂ ಎನ್ನುವ ಧ್ವನಿ ಎತ್ತಿದ್ದಾರೆ.

ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!
ಪ್ರಸನ್ನಾನಂದ ಸ್ವಾಮೀಜಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Nov 05, 2023 | 6:08 PM

Share

ಬಾಗಲಕೋಟೆ, (ನವೆಂಬರ್ 05): ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯಾ ಹಾಗೂ ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಮಾತಿನ ಸಮರ ತಾರಕಕ್ಕೇರಿದೆ. ಸಚಿವ ಕೆಎನ್ ರಾಜಣ್ಣ ಅವರು ಮುಂದಿನ ಸಿಎಂ ಪರಮೇಶ್ವರ್ ಎನ್ನುವ ಮೂಲಕ ದಲಿಯ ಮುಖ್ಯಮಂತ್ರಿ ಎನ್ನುವ ಅರ್ಥದಲ್ಲಿ ಹೇಳಿದ್ದರು. ಇದರ ನಡುವೆ ಇದೀಗ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ಕೂಗು ಎಬ್ಬಿಸಿದ್ದಾರೆ.

ಬಾಗಲಕೋಟೆಯ ಕಲಾಭವನದಲ್ಲಿ ನಡೆದ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ , .ಹಾಗೇ ರಾಜ್ಯದಲ್ಲಿ ದಲಿತ ಸಿಎಂ ಯಾಕೆ ಆಗಬಾರದು? ದಲಿತರು ಮತ ಬ್ಯಾಂಕ್ ಮಾತ್ರ ಅಗಿರಬೇಕಾ? ಸಿಎಂ ಹುದ್ದೆ ಕೆಲವೆ ಸಮುದಾಯಗಳ ಸ್ವತ್ತಾ? ಯಾರಾದ್ರೂ ಗುತ್ತಿ ಪಡೆದುಕೊಂಡಿದ್ದಾರಾ? ದಲಿತರು ಸಿಎಂ ಆಗಲಿ ಎನ್ನುವ ಔದಾರ್ಯ ಹೊಂದಿರದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು. ಇದರೊಂದಿಗೆ ಸ್ವಾಮೀಜಿಯಿಂದ ದಲಿತ ಸಿಎಂ ಕೂಗು ಮತ್ತೆ ಕೇಳಿಬಂದಿದೆ.

ಇದನ್ನೂ ಓದಿ: ಉಪಹಾರಕೂಟ ನೆಪದಲ್ಲಿ ಸಚಿವರೊಂದಿಗೆ ಸಿಎಂ, ಡಿಸಿಎಂ ಮಹತ್ವದ ಸಭೆ: ಇಲ್ಲಿದೆ ಸಭೆಯ ಇನ್​ಸೈಡ್ ಡಿಟೇಲ್ಸ್

ಸಿದ್ದರಾಮಯ್ಯನವರ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಸಾಮಾಜಿಕ ನ್ಯಾಯದ ಹರಿಕಾರ. ಒಂದು ವೇಳೆ ರಾಜ್ಯದಲ್ಲಿ ಏನಾದ್ರು ಬೆಳವಣಿಗೆ ಆದರೆ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ. ಸತೀಶ ಜಾರಕಿಹೊಳಿ ಅವರಿಗೆ ಎಲ್ಲ ರೀತಿಯಲ್ಲಿ ನಾಡಿನ ಸಿಎಂ ಆಗಲು ಅರ್ಹತೆಗಳಿವೆ. ಅವರ ಬೆನ್ನಿಗೆ ನಾವೆಲ್ಲಾ ನಿಲ್ಲಬೇಕಿದೆ ಎಂದು ರಾಜನಹಳ್ಳಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ. ಹೇಳಿದರು.

ಈ ಹಿಂದೆ ಹಲವು ಬಾರಿ ಕರ್ನಾಟಕದಲ್ಲಿ ದಲಿತ ಸಿಎಂ ಕೇಳಿಬಂದಿದ್ದವು. ಆಗಾಗ ಕೇಳಿ ಬರುತ್ತಲ್ಲೇ ಇದೆ. ಇದೀಗ ಸ್ವಾಮೀಜಿಯೊಬ್ಬರ ಬಾಯಿಂದಲೇ ದಲಿತ ಸಿಎಂ ಕೂಗು ಕೇಳಿಬಂದಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್