AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ದ್ವಾರ ಬಾಗಿಲಲ್ಲೇ ಮಹಿಳೆ ದುರಂತ ಸಾವು, ಕಾರಣವಾಯ್ತು ಮಂಗ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಚಂದ್ರಾದೇವಿ ದೇವಸ್ಥಾನದ ದ್ವಾರಬಾಗಿಲಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ದ್ವಾರ ಬಾಗಲಿನ ಕಲ್ಲು ತಲೆ ಮೇಲೆ ಬಿದ್ದು ತರಕಾರಿ ಮಾರುತ್ತಿದ್ದ ಮಹಿಳೆ ದುರಂತ ಸಾವನ್ನಪ್ಪಿದ್ದಾಳೆ. ಈ ಸಾವಿಗೆ ಒಂದು ಮಂಗ ಕಾರಣ. ತರಕಾರಿ ಮಾರುತ್ತಿದ್ದ ಸುರೇಖಾಗೆ ಇಂದು ತನ್ನ ಬದುಕಿನ ಕೊನೆಯ ದಿನ ಎನ್ನುವುದು ಸಣ್ಣ ಸುಳಿವು ಕೂಡ ಇರಲಿಲ್ಲ.

ದೇವಸ್ಥಾನದ ದ್ವಾರ ಬಾಗಿಲಲ್ಲೇ ಮಹಿಳೆ ದುರಂತ ಸಾವು, ಕಾರಣವಾಯ್ತು ಮಂಗ
ದೇಗುಲದ ದ್ವಾರ ಬಾಗಿಲ್ಲೇ ಮಹಿಳೆ ಸಾವು
ರಮೇಶ್ ಬಿ. ಜವಳಗೇರಾ
|

Updated on:Jul 15, 2024 | 3:42 PM

Share

ಬಾಗಲಕೋಟೆ, (ಜುಲೈ 15): ದೇವಸ್ಥಾನದ ದ್ವಾರ ಬಾಗಲಿನ ಕಲ್ಲು ಬಿದ್ದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದಲ್ಲಿ ನಡೆದಿದೆ. ಆಲಗೂರ ಗ್ರಾಮದ ಚಂದ್ರಾದೇವಿ ದೇವಸ್ಥಾನದ ಮುಂದೆ ಇಂದು (ಜುಲೈ 15) ತರಕಾರಿ ಮಾರುತ್ತ ಕುಳಿತ್ತಿದ್ದ ಸುರೇಖಾ ಕಂಬಾರ (44) ತಲೆ ಮೇಲೆ ದ್ವಾರಬಾಗಿಲಿನ ಕಲ್ಲು ಬಿದ್ದಿದೆ. ಪರಿಣಾಮ ಸುರೇಖಾ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಆಲಗೂರು ಗ್ರಾಮದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ಈ ಸಂತೆಯಲ್ಲಿ ತರಕಾರಿ ಮಾರಲು ಸುರೇಖಾ ಹೋಗುತ್ತಿದ್ದಳು. ತರಕಾರಿ ಮಾರಾಟದಿಂದ ಬಂದ ಹಣದಿಂದಲೇ ಜೀವನ ಕಟ್ಟಿಕೊಂಡಿದ್ದ ಅವರು, ಇಂದು ಕೂಡ ವ್ಯಾಪಾರಕ್ಕೆ ಹೋಗಿದ್ದರು. ಎಂದಿನಂತೆ ದೇವಾಲಯದ ದ್ವಾರ ಬಾಗಿಲನಲ್ಲಿ ತರಕಾರಿಗಳನ್ನು ಇಟ್ಟುಕೊಂಡು ಕೂತಿದ್ದರು. ಅದರಂತೆ ಇಂದೂ ಸಹ ಅದೇ ಸ್ಥಳದಲ್ಲಿ ಕುಳಿತುಕೊಂಡಿದ್ದರು. ಮತ್ತೊಂದೆಡೆ ದೇವಾಲಯದ ಬಳಿಯಿದ್ದ ಮಂಗಗಳು ಅತ್ತಿಂದಿತ್ತ ಓಡಾಟ ನಡೆಸುತ್ತಿದ್ದವು. ಈ ವೇಳೆ ದ್ವಾರ ಬಾಗಿಲಿಗೆ ಮಂಗವೊಂದು ಜಿಗಿದಿದೆ. ಮಂಗ ಜಿಗಿಯುತ್ತಿದ್ದಂತೆಯೇ ದ್ವಾರಬಾಗಿಲಿನಲ್ಲಿ ಸಿಮೆಂಟ್ ಕಲ್ಲು ಸುರೇಖಾ ತಲೆ ಮೇಲೆ ಬಿದ್ದಿದೆ. ಪರಿಣಾಮ ಸುರೇಖಾ ನೆಲಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುರೇಖಾ ತಲೆಯಿಂದ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಇದನ್ನೂ ಓದಿ: ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಜಮಖಂಡಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ದೇಗುಲದ ಆಡಳಿತ ಮಂಡಳಿ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಆಡಳಿತ ಮಂಡಳಿ ದ್ವಾರಬಾಗಿಲಿನ್ನು ಸರಿಯಾಗಿ ನಿರ್ಮಿಸಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Mon, 15 July 24

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ