AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ದ್ವಾರ ಬಾಗಿಲಲ್ಲೇ ಮಹಿಳೆ ದುರಂತ ಸಾವು, ಕಾರಣವಾಯ್ತು ಮಂಗ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಚಂದ್ರಾದೇವಿ ದೇವಸ್ಥಾನದ ದ್ವಾರಬಾಗಿಲಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ದ್ವಾರ ಬಾಗಲಿನ ಕಲ್ಲು ತಲೆ ಮೇಲೆ ಬಿದ್ದು ತರಕಾರಿ ಮಾರುತ್ತಿದ್ದ ಮಹಿಳೆ ದುರಂತ ಸಾವನ್ನಪ್ಪಿದ್ದಾಳೆ. ಈ ಸಾವಿಗೆ ಒಂದು ಮಂಗ ಕಾರಣ. ತರಕಾರಿ ಮಾರುತ್ತಿದ್ದ ಸುರೇಖಾಗೆ ಇಂದು ತನ್ನ ಬದುಕಿನ ಕೊನೆಯ ದಿನ ಎನ್ನುವುದು ಸಣ್ಣ ಸುಳಿವು ಕೂಡ ಇರಲಿಲ್ಲ.

ದೇವಸ್ಥಾನದ ದ್ವಾರ ಬಾಗಿಲಲ್ಲೇ ಮಹಿಳೆ ದುರಂತ ಸಾವು, ಕಾರಣವಾಯ್ತು ಮಂಗ
ದೇಗುಲದ ದ್ವಾರ ಬಾಗಿಲ್ಲೇ ಮಹಿಳೆ ಸಾವು
ರಮೇಶ್ ಬಿ. ಜವಳಗೇರಾ
|

Updated on:Jul 15, 2024 | 3:42 PM

Share

ಬಾಗಲಕೋಟೆ, (ಜುಲೈ 15): ದೇವಸ್ಥಾನದ ದ್ವಾರ ಬಾಗಲಿನ ಕಲ್ಲು ಬಿದ್ದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರ ಗ್ರಾಮದಲ್ಲಿ ನಡೆದಿದೆ. ಆಲಗೂರ ಗ್ರಾಮದ ಚಂದ್ರಾದೇವಿ ದೇವಸ್ಥಾನದ ಮುಂದೆ ಇಂದು (ಜುಲೈ 15) ತರಕಾರಿ ಮಾರುತ್ತ ಕುಳಿತ್ತಿದ್ದ ಸುರೇಖಾ ಕಂಬಾರ (44) ತಲೆ ಮೇಲೆ ದ್ವಾರಬಾಗಿಲಿನ ಕಲ್ಲು ಬಿದ್ದಿದೆ. ಪರಿಣಾಮ ಸುರೇಖಾ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಆಲಗೂರು ಗ್ರಾಮದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ಈ ಸಂತೆಯಲ್ಲಿ ತರಕಾರಿ ಮಾರಲು ಸುರೇಖಾ ಹೋಗುತ್ತಿದ್ದಳು. ತರಕಾರಿ ಮಾರಾಟದಿಂದ ಬಂದ ಹಣದಿಂದಲೇ ಜೀವನ ಕಟ್ಟಿಕೊಂಡಿದ್ದ ಅವರು, ಇಂದು ಕೂಡ ವ್ಯಾಪಾರಕ್ಕೆ ಹೋಗಿದ್ದರು. ಎಂದಿನಂತೆ ದೇವಾಲಯದ ದ್ವಾರ ಬಾಗಿಲನಲ್ಲಿ ತರಕಾರಿಗಳನ್ನು ಇಟ್ಟುಕೊಂಡು ಕೂತಿದ್ದರು. ಅದರಂತೆ ಇಂದೂ ಸಹ ಅದೇ ಸ್ಥಳದಲ್ಲಿ ಕುಳಿತುಕೊಂಡಿದ್ದರು. ಮತ್ತೊಂದೆಡೆ ದೇವಾಲಯದ ಬಳಿಯಿದ್ದ ಮಂಗಗಳು ಅತ್ತಿಂದಿತ್ತ ಓಡಾಟ ನಡೆಸುತ್ತಿದ್ದವು. ಈ ವೇಳೆ ದ್ವಾರ ಬಾಗಿಲಿಗೆ ಮಂಗವೊಂದು ಜಿಗಿದಿದೆ. ಮಂಗ ಜಿಗಿಯುತ್ತಿದ್ದಂತೆಯೇ ದ್ವಾರಬಾಗಿಲಿನಲ್ಲಿ ಸಿಮೆಂಟ್ ಕಲ್ಲು ಸುರೇಖಾ ತಲೆ ಮೇಲೆ ಬಿದ್ದಿದೆ. ಪರಿಣಾಮ ಸುರೇಖಾ ನೆಲಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುರೇಖಾ ತಲೆಯಿಂದ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಇದನ್ನೂ ಓದಿ: ಗದಗ: ಪತ್ನಿ ಚುಡಾಯಿಸಿದ್ದನ್ನು ಪ್ರಶ್ನೆ ಮಾಡಿದಕ್ಕೆ ಪತಿ, ಕುಟುಂಬಸ್ಥರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಜಮಖಂಡಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ದೇಗುಲದ ಆಡಳಿತ ಮಂಡಳಿ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಆಡಳಿತ ಮಂಡಳಿ ದ್ವಾರಬಾಗಿಲಿನ್ನು ಸರಿಯಾಗಿ ನಿರ್ಮಿಸಿದ್ದರೆ ಹೀಗೆ ಆಗುತ್ತಿರಲಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Mon, 15 July 24

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?