AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲಿಗರಿಗೆ ಆಹಾರವಾದ ವಿಜಯಾನಂದ ಕಾಶಪ್ಪನವರ 2ನೇ ಮದುವೆ: ಜನರಿಗೆ ಇಳಕಲ್ ಕ್ರಿಕೆಟ್ ಪಂದ್ಯಾವಳಿ ನೆನಪು

ಈ ಹಿಂದೆ ಕ್ಷೇತ್ರದಲ್ಲಿ ಪೂಜಾಶ್ರೀ ಹೆಸರು ಯಾವಾಗೆಲ್ಲಾ ಪ್ರಸ್ತಾಪವಾಗಿತ್ತು ಎಂದು ಕ್ಷೇತ್ರದ ಜನರು ನೆನಪಿಸಿಕೊಳ್ಳುತ್ತಿದ್ದಾರೆ.

ಟ್ರೋಲಿಗರಿಗೆ ಆಹಾರವಾದ ವಿಜಯಾನಂದ ಕಾಶಪ್ಪನವರ 2ನೇ ಮದುವೆ: ಜನರಿಗೆ ಇಳಕಲ್ ಕ್ರಿಕೆಟ್ ಪಂದ್ಯಾವಳಿ ನೆನಪು
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮತ್ತು ಪೂಜಾಶ್ರೀ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 24, 2022 | 12:59 PM

ಬಾಗಲಕೋಟೆ: ಜಿಲ್ಲೆಯ ಹುನಗುಂದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ (Vijayanand Kashappanavar) ಎರಡನೇ ಮದುವೆ ಪ್ರಕರಣವು ಇದೀಗ ಟ್ರೋಲಿಗರಿಗೆ ಆಹಾರವಾಗಿದೆ. ಈ ಹಿಂದೆ ಕ್ಷೇತ್ರದಲ್ಲಿ ಪೂಜಾಶ್ರೀ ಹೆಸರು ಯಾವಾಗೆಲ್ಲಾ ಪ್ರಸ್ತಾಪವಾಗಿತ್ತು ಎಂದು ಕ್ಷೇತ್ರದ ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಕಳೆದ ಜುಲೈ 1ರಂದು ಇಳಕಲ್​ ಪಟ್ಟಣದಲ್ಲಿ ನಡೆದಿದ್ದ ಐಪಿಎಲ್ ಪ್ರಿಮಿಯರ್ ಲೀಗ್ ಉದ್ಘಾಟನೆ ವೇಳೆ ನಟಿ ಪೂಜಾಶ್ರೀ ಅವರ ಹೆಸರು ಮೈಕ್​ನಲ್ಲಿ ಪ್ರಕಟವಾಗಿತ್ತು ಎಂದು ಹೇಳಲಾಗಿದೆ.

ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆಗೆಂದು ಇಳಕಲ್​ಗೆ ಹಲವು ಕಿರುತೆರೆ ಹಾಗೂ ಹಾಗೂ ಹಿರಿತೆರೆ ಕಲಾವಿದರನ್ನು ಕರೆಸಲಾಗಿತ್ತು. ಈ ವೇಳೆ ಕಲಾವಿದರ ಹೆಸರು ಹೇಳುವಾಗ ಪೂಜಾಶ್ರಿ ಹೆಸರನ್ನು ಸಹ ಘೋಷಿಸಲಾಗಿತ್ತು. ಇತರ ಕಲಾವಿದರು ಎದ್ದು ನಿಂತು ಕೈ ಬೀಸಿ, ಕೈ‌ ಮುಗಿದಿದ್ದರು. ಆದರೆ ಪೂಜಾಶ್ರಿ ಹೆಸರು ಘೋಷಣೆಯಾದರೂ ಆಕೆ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ.

ಕಲಾವಿದರ ಪಟ್ಟಿಯಲ್ಲಿ ಪೂಜಾಶ್ರಿ ಹೆಸರು ಇತ್ತಾದರೂ, ಆಮಂತ್ರಣ ಪತ್ರಿಕೆಯಲ್ಲಿ ವಿಜಯಾನಂದ ಕಾಶಪ್ಪನವರ ಅವರ ಧರ್ಮಪತ್ನಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ವೀಣಾ ಅವರ ಹೆಸರು ಕಾಣಿಸಿರಲಿಲ್ಲ.

Vijayananda-Kashappanavar

ವೈರಲ್ ಆಗಿರುವ ಮೆಸೇಜ್

ಬಿಜೆಪಿಯಿಂದ ಟ್ರೋಲ್​

ಹುನಗುಂದ ಶಾಸಕ ದೊಡ್ಡನಗೌಡ ಪಾಟಿಲ್ ಅಭಿಮಾನಿ ಬಳಗ ಗ್ರೂಪ್​ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯಾನಂದ ಕಾಶಪ್ಪನವರ ಎರಡನೇ ಮದುವೆ ಆಗಿದ್ದನ್ನು ಪ್ರಸ್ತಾಪಿಸಿ ಟ್ರೋಲ್ ಮಾಡಿದ್ದಾರೆ. ಸಾಹೇಬರು ಎಲ್ಲದಕ್ಕೂ ಮಾಧ್ಯಮದವರಿಗೆ ದಾಖಲೆ ಕೇಳುತ್ತಾರೆ. ಇನ್ನು ಸ್ವಲ್ಪ ದಿನ ಕಾಯಿರಿ. ನಿಮ್ಮ ಎರಡನೇ ಹೆಂಡತಿಯ ಹೆಣ್ಣು ಮಗು ದಾಖಲೆ ತಗೊಂಡು ಬರುತ್ತೆ ಎಂದು ವ್ಯಂಗ್ಯವಾಡಿದ್ದಾರೆ.

‘ನೀವು ಮಾಡೋದೆಲ್ಲ ಇಂಥ ಕೆಲಸ. ಮತ್ತೆ ನಮ್ಮ ಕರ್ನಾಟಕದ ‌ಬಿಜೆಪಿ ಕಿಗ್ ಯಡ್ಡಿ ಅಪ್ಪಾಜಿಗೆ ಚಾಲೆಂಜ್ ಹಾಕ್ತಿಯಾ. ಹಾಕು ಹಾಕು ನೀ ಚಾಲೆಂಜ್ ಹಾಕಿದಾಗ ನಮ್ಮ ಡಿಜಿಪಿ (ದೊಡ್ಡನಗೌಡ ಪಾಟಿಲ್) ಗೆದ್ದಿದ್ದಾರೆ. ಇನ್ನೊಮ್ಮೆ ಚಾಲೆಂಜ್ ಹಾಕು ನಮ್ಮ ರಾಮುಲು ಜಿ ನೂ ಗೆಲ್ತಾರೆ. ನಿನ್ ಚಾಲೇಂಜ್ ನಮ್ಮ ಗೆಲುವಿನ ಮುನ್ಸೂಚನೆ’ ಎಂದು ವಾಟ್ಸಾಪ್ ಗ್ರೂಪ್‌ನಲ್ಲಿ ಸಂದೇಶಗಳನ್ನು ಹರಿಬಿಡಲಾಗಿದೆ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ