AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಸಂಸದ‌ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಸಂಸದ‌ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ
TV9 Web
| Edited By: |

Updated on:Jan 28, 2024 | 5:36 PM

Share

ಬಾಗಲಕೋಟೆ, (ಜನವರಿ 28): ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಕುಮಾರೇಶ್ವರ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಮೇಶ್ ಜಿಗಜಿಣಗಿ ಆರೋಗ್ಯ ಬಗ್ಗೆ ವೀರಣ್ಣ ಚರಂತಿಮಠ ಮಾಹಿತಿ

ರಮೇಶ್ ಜಿಗಜಿಣಗಿ ಸ್ಥಿರವಾಗಿದೆ, ಯಾವ ತೊಂದರೆ ಇಲ್ಲ. ವಿಜಯಪುರದಿಂದ ಬೆಳಗಾವಿಗೆ ರಮೇಶ್​ ಜಿಗಜಿಣಗಿ ಹೋಗುತ್ತಿದ್ದರು. ಬಳಿಕ ಬೆಳಗಾವಿಯಿಂದ ಕೇಂದ್ರ ಬಜೆಟ್ ಅಧಿವೇಶನಕ್ಕೆ ಹೊರಟಿದ್ದರು. ಆದ್ರೆ, ಮಾರ್ಗ ಮಧ್ಯೆ ಜಿಗಜಿಣಗಿಗೆ ಉಸಿರಾಟ ಸಮಸ್ಯೆಯಾಗಿದೆ. ಆಗ ಜಿಗಜಿಣಗಿರನ್ನು ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು,

ರಮೇಶ್ ಜಿಗಜಿಣಗಿ ಆರೋಗ್ಯದ ವೈದ್ಯ ಡಾ: ಸುಭಾಷ್ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ರಮೇಶ್ ಜಿಗಜಿಣಗಿ ಅವರು ಮಧ್ಯಾಹ್ನ 3.30ಕ್ಕೆ ಆಸ್ಪತ್ರೆಗೆ ಬಂದಿದ್ದಾರೆ. ಉಸಿರಾಟದಲ್ಲಿ ಏರುಪೇರು ಆಗಿತ್ತು. ಅಕ್ಸಿಜನ್ ಲೇವಲ್ ಕಮ್ಮಿ ಆಗಿತ್ತು, ಹಾರ್ಟ್ ಬಿಟ್ ವ್ಯತ್ಯಾಸ ಆಗಿತ್ತು. ಇಲ್ಲಿಗೆ ಬಂದ ಮೇಲೆ ಅಕ್ಸಿಜನ್ ಕೊಟ್ಟು ಸಿಟಿ, ಸ್ಕ್ಯಾನ್ ಇಸಿಜಿ ಮಾಡಿ ತಪಾಸಣೆ ಮಾಡಲಾಗಿದೆ. ಸ್ವಲ್ಪ ಪ್ರಮಾಣ ವಾಟರ್ ಕಂಟೆಂಟ್ ಸ್ಟೋರ್ ಆಗಿತ್ತು. ಟ್ರೀಟ್ಮೆಂಟ್ ಕೊಟ್ಟ ಮೇಲೆ ಎಲ್ಲಾ ಸ್ಟೇಬಲ್ ಆಗಿದೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ, ಹೃದಯಾಘಾತ ಆಗಿಲ್ಲ. ಮೊದಲಿಂದಲೂ ಕೂಡ ಪ್ರಾಬ್ಲಂ ಇತ್ತು. ಇಸಿಜಿ, ಚಸ್ಟ್ ಸಿಟಿ ಸ್ಕ್ಯಾನ್ ಎಲ್ಲ ಮಾಡಲಾಗಿದೆ. ಸದ್ಯ ಈಗ ನಾರ್ಮಲ್ ಇದ್ದಾರೆ ಭಯ ಪಡುವ ಅವಶ್ಯಕತೆಇಲ್ಲ. ಎರಡು ದಿನಗಳಲ್ಲಿ ಡಿಸ್ಚಾರ್ಜ್ ಅಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Published On - 3:59 pm, Sun, 28 January 24

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ