AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಸಂಸದ‌ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಸಂಸದ‌ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ
TV9 Web
| Edited By: |

Updated on:Jan 28, 2024 | 5:36 PM

Share

ಬಾಗಲಕೋಟೆ, (ಜನವರಿ 28): ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ (BJP MP ramesh jigajinagi) ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಕುಮಾರೇಶ್ವರ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಮೇಶ್ ಜಿಗಜಿಣಗಿ ಆರೋಗ್ಯ ಬಗ್ಗೆ ವೀರಣ್ಣ ಚರಂತಿಮಠ ಮಾಹಿತಿ

ರಮೇಶ್ ಜಿಗಜಿಣಗಿ ಸ್ಥಿರವಾಗಿದೆ, ಯಾವ ತೊಂದರೆ ಇಲ್ಲ. ವಿಜಯಪುರದಿಂದ ಬೆಳಗಾವಿಗೆ ರಮೇಶ್​ ಜಿಗಜಿಣಗಿ ಹೋಗುತ್ತಿದ್ದರು. ಬಳಿಕ ಬೆಳಗಾವಿಯಿಂದ ಕೇಂದ್ರ ಬಜೆಟ್ ಅಧಿವೇಶನಕ್ಕೆ ಹೊರಟಿದ್ದರು. ಆದ್ರೆ, ಮಾರ್ಗ ಮಧ್ಯೆ ಜಿಗಜಿಣಗಿಗೆ ಉಸಿರಾಟ ಸಮಸ್ಯೆಯಾಗಿದೆ. ಆಗ ಜಿಗಜಿಣಗಿರನ್ನು ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು,

ರಮೇಶ್ ಜಿಗಜಿಣಗಿ ಆರೋಗ್ಯದ ವೈದ್ಯ ಡಾ: ಸುಭಾಷ್ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ರಮೇಶ್ ಜಿಗಜಿಣಗಿ ಅವರು ಮಧ್ಯಾಹ್ನ 3.30ಕ್ಕೆ ಆಸ್ಪತ್ರೆಗೆ ಬಂದಿದ್ದಾರೆ. ಉಸಿರಾಟದಲ್ಲಿ ಏರುಪೇರು ಆಗಿತ್ತು. ಅಕ್ಸಿಜನ್ ಲೇವಲ್ ಕಮ್ಮಿ ಆಗಿತ್ತು, ಹಾರ್ಟ್ ಬಿಟ್ ವ್ಯತ್ಯಾಸ ಆಗಿತ್ತು. ಇಲ್ಲಿಗೆ ಬಂದ ಮೇಲೆ ಅಕ್ಸಿಜನ್ ಕೊಟ್ಟು ಸಿಟಿ, ಸ್ಕ್ಯಾನ್ ಇಸಿಜಿ ಮಾಡಿ ತಪಾಸಣೆ ಮಾಡಲಾಗಿದೆ. ಸ್ವಲ್ಪ ಪ್ರಮಾಣ ವಾಟರ್ ಕಂಟೆಂಟ್ ಸ್ಟೋರ್ ಆಗಿತ್ತು. ಟ್ರೀಟ್ಮೆಂಟ್ ಕೊಟ್ಟ ಮೇಲೆ ಎಲ್ಲಾ ಸ್ಟೇಬಲ್ ಆಗಿದೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ, ಹೃದಯಾಘಾತ ಆಗಿಲ್ಲ. ಮೊದಲಿಂದಲೂ ಕೂಡ ಪ್ರಾಬ್ಲಂ ಇತ್ತು. ಇಸಿಜಿ, ಚಸ್ಟ್ ಸಿಟಿ ಸ್ಕ್ಯಾನ್ ಎಲ್ಲ ಮಾಡಲಾಗಿದೆ. ಸದ್ಯ ಈಗ ನಾರ್ಮಲ್ ಇದ್ದಾರೆ ಭಯ ಪಡುವ ಅವಶ್ಯಕತೆಇಲ್ಲ. ಎರಡು ದಿನಗಳಲ್ಲಿ ಡಿಸ್ಚಾರ್ಜ್ ಅಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Published On - 3:59 pm, Sun, 28 January 24

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್