ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಶಿಲ್ಪಾ ಮುತ್ತಗಿ (15 ವರ್ಷ) ಅವರಿಗೆ ಪಿಟ್ಸ್ ಬಂದು ಹಿಮೊಗ್ಲೊಬಿನ್‌ ಕೊರತೆಯಾಗಿ, ಅಶಕ್ತಿಯಾಗಿ ಸೋಮವಾರ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ದೇಹದಲ್ಲಿ ರಕ್ತ ಕಡಿಮೆ ಇದ್ದು, ಬಾಂಬೆ ರಕ್ತದ ಗುಂಪು ಅವಶ್ಯಕತೆ ಇತ್ತು. ಈ ರಕ್ತದ ಗುಂಪುನ್ನು ಹೊಂದಿದ್ದ ವಿಜಯಪುರ ಜಿಲ್ಲೆಯ ಯಲಗೂರು ಗ್ರಾಮದ ಯುವಕ ಮಹಾಂತೇಶ್ ತುಮ್ಮರಮಟ್ಟಿ ಬುಧವಾರ ಶ್ರೀಶೈಲಕ್ಕೆ ಹೊರಟಿದ್ದರು. ಇವರಿಗೆ ಶಿಲ್ಪಾ ಪೋಷಕರು ಕರೆ ಮಾಡಿದ್ದಾರೆ. ಮುಂದೇನಾಯ್ತು ಈ ಸ್ಟೋರಿ ಓದಿ..

ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ
ರಕ್ತದಾನಿ ಮಹಾಂತೇಶ್​
Follow us
| Updated By: ವಿವೇಕ ಬಿರಾದಾರ

Updated on: Feb 15, 2024 | 10:28 AM

ಬಾಗಲಕೋಟೆ, ಫೆಬ್ರವರಿ 15: ವಿರಳವಾಗಿ ಲಭ್ಯವಾಗುವ “ಬಾಂಬೆ ರಕ್ತದ ಗುಂಪು” (Bombay Blood Group) ಅನ್ನು ದಾನ (Blood Donation) ಮಾಡುವ ಮೂಲಕ ವಿಜಯಪುರ (Vijayapur) ಜಿಲ್ಲೆಯ ಯಲಗೂರು ಗ್ರಾಮದ ಯುವಕ ಮಹಾಂತೇಶ್ ತುಮ್ಮರಮಟ್ಟಿ ಮಾನವೀಯತೆ ಮೆರದಿದ್ದಾರೆ.

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಶಿಲ್ಪಾ ಮುತ್ತಗಿ (15 ವರ್ಷ) ಅವರಿಗೆ ಪಿಟ್ಸ್ ಬಂದು ಹಿಮೊಗ್ಲೊಬಿನ್‌ ಕೊರತೆಯಾಗಿ, ಅಶಕ್ತಿಯಾಗಿ ಸೋಮವಾರ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ವೇಳೆ ವೈದ್ಯರು ರೋಗಿಯ ದೇಹದಲ್ಲಿ ರಕ್ತ ಕಡಿಮೆ ಇದೆ, ಶಿಲ್ಪಾರದ್ದು “ಬಾಂಬೆ ಬ್ಲಡ್ ಗ್ರುಪ್” ಎಂದು ಹೇಳಿದ್ದರು. ಅಲ್ಲದೆ ಕೂಡಲೆ ರಕ್ತ ಹಾಕಬೇಕು ಇಲ್ಲದಿದ್ದರೆ ಬದಕುವುದು ಕಷ್ಟ ಎಂದು ವೈದ್ಯರು ಹೇಳಿದ್ದರು.

ಈ ರಕ್ತದ ಗುಂಪು ವಿರಳಾತಿ ವಿರಳ ಆಗಿದ್ದರಿಂದ ಸಿಗುವುದು ಕಷ್ಟ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿ ಕುಮಾರೇಶ್ವರ ಬ್ಲಡ್ ಬ್ಯಾಂಕಿನಲ್ಲಿನ ಬ್ಲಡ್ ಗ್ರುಪ್ ಸದಸ್ಯರ ಹೆಸರಿನ‌ ಪಟ್ಟಿ ಪರಿಶೀಲಿಸಿದ್ದಾರೆ. ಆಗ ಮಹಾಂತೇಶ್ ತುಮ್ಮರಮಟ್ಟಿ ಪತ್ತೆಯಾಗಿದೆ. ಕೂಡಲೆ ಆಸ್ಪತ್ರೆ ಸಿಬ್ಬಂದಿ ಶಿಲ್ಪಾ ಪೋಷಕರಿಗೆ ವಿಷಯ ತಿಳಿಸಿ, ಮಹಾಂತೇಶ್​ ಅವರ ದೂರವಾಣಿ ನಂಬರ್​ ನೀಡಿದ್ದಾರೆ. ಶಿಲ್ಪಾ ಪೋಷಕರು ಮಹಾಂತೇಶ್​ ಅವರಿಗೆ ಕರೆ ಮಾಡಿ ವಿಷಯ ತಿಳಿಸಿ, ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿ ಜಿಲ್ಲೆಯ ಯುವಕರಲ್ಲಿ ಹೆಚ್ಚುತ್ತಿದೆ ರಕ್ತದಾನದ ಅರಿವು; ಹೋರಿಯ ಹೆಸರಿನಲ್ಲಿ ರಕ್ತದಾನ

ಇನ್ನು ಮಹಾಂತೇಶ್ ತುಮ್ಮರಮಟ್ಟಿ ಓರ್ವ ಬಾಡಿಗೆ ವಾಹನ ಚಾಲಕನಾಗಿದ್ದು, ಬುಧವಾರ (ಫೆ.14) ಶ್ರೀಶೈಲಕ್ಕೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ರಕ್ತ ಸಲುವಾಗಿ ಕರೆ ಬಂದಿದೆ. ಕೂಡಲೆ ಮಹಾಂತೇಶ್​ ಬೇರೊಬ್ಬ ಚಾಲಕನನ್ನು ಸ್ಥಳಕ್ಕೆ ಕರೆಸಿ, ಶ್ರೀಶೈಲಕ್ಕೆ ಕಳುಹಿಸಿದ್ದಾರೆ. ಬಳಿಕ ಮಹಾಂತೇಶ್ ಬಸ್ ಹಿಡಿದು, ಬಾಗಲಕೋಟೆ ಬಂದು, ಕುಮಾರೇಶ್ವರ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ಬಾಂಬೆ ರಕ್ತದಾನ ಮಾಡಿ ಹೋಗಿದ್ದಾರೆ. ಮಹಾಂತೇಶ್​ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

50 ಲಕ್ಷ ಜನರಲ್ಲಿ ಒಬ್ಬರಿಗೆ ಇರುವ ರಕ್ತದ ಗುಂಪು

ದೇಹದಲ್ಲಿ ಹೆಚ್ ಆ್ಯಂಟಿಜನ್ ಇರದೆ ಇರುವ ವ್ಯಕ್ತಿಗಳ ರಕ್ತಕ್ಕೆ ಬಾಂಬೆ ಬ್ಲಡ್ ಗ್ರುಪ್ ಎಂದು ಕರೆಯುತ್ತಾರೆ. “ಬಾಂಬೆ ರಕ್ತದ ಗುಂಪು” ಇದು ಅತ್ಯಂತ ವಿರಳವಾಗ ರಕ್ತ ಗುಂಪಾಗಿದೆ. ಸುಮಾರ 50 ಲಕ್ಷ ಜನರಲ್ಲಿ ಒಬ್ಬರಿಗೆ ಇರುವಂತ ರಕ್ತದ ಗುಂಪಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು