AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಶಿಲ್ಪಾ ಮುತ್ತಗಿ (15 ವರ್ಷ) ಅವರಿಗೆ ಪಿಟ್ಸ್ ಬಂದು ಹಿಮೊಗ್ಲೊಬಿನ್‌ ಕೊರತೆಯಾಗಿ, ಅಶಕ್ತಿಯಾಗಿ ಸೋಮವಾರ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ದೇಹದಲ್ಲಿ ರಕ್ತ ಕಡಿಮೆ ಇದ್ದು, ಬಾಂಬೆ ರಕ್ತದ ಗುಂಪು ಅವಶ್ಯಕತೆ ಇತ್ತು. ಈ ರಕ್ತದ ಗುಂಪುನ್ನು ಹೊಂದಿದ್ದ ವಿಜಯಪುರ ಜಿಲ್ಲೆಯ ಯಲಗೂರು ಗ್ರಾಮದ ಯುವಕ ಮಹಾಂತೇಶ್ ತುಮ್ಮರಮಟ್ಟಿ ಬುಧವಾರ ಶ್ರೀಶೈಲಕ್ಕೆ ಹೊರಟಿದ್ದರು. ಇವರಿಗೆ ಶಿಲ್ಪಾ ಪೋಷಕರು ಕರೆ ಮಾಡಿದ್ದಾರೆ. ಮುಂದೇನಾಯ್ತು ಈ ಸ್ಟೋರಿ ಓದಿ..

ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ
ರಕ್ತದಾನಿ ಮಹಾಂತೇಶ್​
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Feb 15, 2024 | 10:28 AM

ಬಾಗಲಕೋಟೆ, ಫೆಬ್ರವರಿ 15: ವಿರಳವಾಗಿ ಲಭ್ಯವಾಗುವ “ಬಾಂಬೆ ರಕ್ತದ ಗುಂಪು” (Bombay Blood Group) ಅನ್ನು ದಾನ (Blood Donation) ಮಾಡುವ ಮೂಲಕ ವಿಜಯಪುರ (Vijayapur) ಜಿಲ್ಲೆಯ ಯಲಗೂರು ಗ್ರಾಮದ ಯುವಕ ಮಹಾಂತೇಶ್ ತುಮ್ಮರಮಟ್ಟಿ ಮಾನವೀಯತೆ ಮೆರದಿದ್ದಾರೆ.

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಶಿಲ್ಪಾ ಮುತ್ತಗಿ (15 ವರ್ಷ) ಅವರಿಗೆ ಪಿಟ್ಸ್ ಬಂದು ಹಿಮೊಗ್ಲೊಬಿನ್‌ ಕೊರತೆಯಾಗಿ, ಅಶಕ್ತಿಯಾಗಿ ಸೋಮವಾರ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ವೇಳೆ ವೈದ್ಯರು ರೋಗಿಯ ದೇಹದಲ್ಲಿ ರಕ್ತ ಕಡಿಮೆ ಇದೆ, ಶಿಲ್ಪಾರದ್ದು “ಬಾಂಬೆ ಬ್ಲಡ್ ಗ್ರುಪ್” ಎಂದು ಹೇಳಿದ್ದರು. ಅಲ್ಲದೆ ಕೂಡಲೆ ರಕ್ತ ಹಾಕಬೇಕು ಇಲ್ಲದಿದ್ದರೆ ಬದಕುವುದು ಕಷ್ಟ ಎಂದು ವೈದ್ಯರು ಹೇಳಿದ್ದರು.

ಈ ರಕ್ತದ ಗುಂಪು ವಿರಳಾತಿ ವಿರಳ ಆಗಿದ್ದರಿಂದ ಸಿಗುವುದು ಕಷ್ಟ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿ ಕುಮಾರೇಶ್ವರ ಬ್ಲಡ್ ಬ್ಯಾಂಕಿನಲ್ಲಿನ ಬ್ಲಡ್ ಗ್ರುಪ್ ಸದಸ್ಯರ ಹೆಸರಿನ‌ ಪಟ್ಟಿ ಪರಿಶೀಲಿಸಿದ್ದಾರೆ. ಆಗ ಮಹಾಂತೇಶ್ ತುಮ್ಮರಮಟ್ಟಿ ಪತ್ತೆಯಾಗಿದೆ. ಕೂಡಲೆ ಆಸ್ಪತ್ರೆ ಸಿಬ್ಬಂದಿ ಶಿಲ್ಪಾ ಪೋಷಕರಿಗೆ ವಿಷಯ ತಿಳಿಸಿ, ಮಹಾಂತೇಶ್​ ಅವರ ದೂರವಾಣಿ ನಂಬರ್​ ನೀಡಿದ್ದಾರೆ. ಶಿಲ್ಪಾ ಪೋಷಕರು ಮಹಾಂತೇಶ್​ ಅವರಿಗೆ ಕರೆ ಮಾಡಿ ವಿಷಯ ತಿಳಿಸಿ, ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿ ಜಿಲ್ಲೆಯ ಯುವಕರಲ್ಲಿ ಹೆಚ್ಚುತ್ತಿದೆ ರಕ್ತದಾನದ ಅರಿವು; ಹೋರಿಯ ಹೆಸರಿನಲ್ಲಿ ರಕ್ತದಾನ

ಇನ್ನು ಮಹಾಂತೇಶ್ ತುಮ್ಮರಮಟ್ಟಿ ಓರ್ವ ಬಾಡಿಗೆ ವಾಹನ ಚಾಲಕನಾಗಿದ್ದು, ಬುಧವಾರ (ಫೆ.14) ಶ್ರೀಶೈಲಕ್ಕೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ರಕ್ತ ಸಲುವಾಗಿ ಕರೆ ಬಂದಿದೆ. ಕೂಡಲೆ ಮಹಾಂತೇಶ್​ ಬೇರೊಬ್ಬ ಚಾಲಕನನ್ನು ಸ್ಥಳಕ್ಕೆ ಕರೆಸಿ, ಶ್ರೀಶೈಲಕ್ಕೆ ಕಳುಹಿಸಿದ್ದಾರೆ. ಬಳಿಕ ಮಹಾಂತೇಶ್ ಬಸ್ ಹಿಡಿದು, ಬಾಗಲಕೋಟೆ ಬಂದು, ಕುಮಾರೇಶ್ವರ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ಬಾಂಬೆ ರಕ್ತದಾನ ಮಾಡಿ ಹೋಗಿದ್ದಾರೆ. ಮಹಾಂತೇಶ್​ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

50 ಲಕ್ಷ ಜನರಲ್ಲಿ ಒಬ್ಬರಿಗೆ ಇರುವ ರಕ್ತದ ಗುಂಪು

ದೇಹದಲ್ಲಿ ಹೆಚ್ ಆ್ಯಂಟಿಜನ್ ಇರದೆ ಇರುವ ವ್ಯಕ್ತಿಗಳ ರಕ್ತಕ್ಕೆ ಬಾಂಬೆ ಬ್ಲಡ್ ಗ್ರುಪ್ ಎಂದು ಕರೆಯುತ್ತಾರೆ. “ಬಾಂಬೆ ರಕ್ತದ ಗುಂಪು” ಇದು ಅತ್ಯಂತ ವಿರಳವಾಗ ರಕ್ತ ಗುಂಪಾಗಿದೆ. ಸುಮಾರ 50 ಲಕ್ಷ ಜನರಲ್ಲಿ ಒಬ್ಬರಿಗೆ ಇರುವಂತ ರಕ್ತದ ಗುಂಪಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ