AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಶಿಲ್ಪಾ ಮುತ್ತಗಿ (15 ವರ್ಷ) ಅವರಿಗೆ ಪಿಟ್ಸ್ ಬಂದು ಹಿಮೊಗ್ಲೊಬಿನ್‌ ಕೊರತೆಯಾಗಿ, ಅಶಕ್ತಿಯಾಗಿ ಸೋಮವಾರ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ದೇಹದಲ್ಲಿ ರಕ್ತ ಕಡಿಮೆ ಇದ್ದು, ಬಾಂಬೆ ರಕ್ತದ ಗುಂಪು ಅವಶ್ಯಕತೆ ಇತ್ತು. ಈ ರಕ್ತದ ಗುಂಪುನ್ನು ಹೊಂದಿದ್ದ ವಿಜಯಪುರ ಜಿಲ್ಲೆಯ ಯಲಗೂರು ಗ್ರಾಮದ ಯುವಕ ಮಹಾಂತೇಶ್ ತುಮ್ಮರಮಟ್ಟಿ ಬುಧವಾರ ಶ್ರೀಶೈಲಕ್ಕೆ ಹೊರಟಿದ್ದರು. ಇವರಿಗೆ ಶಿಲ್ಪಾ ಪೋಷಕರು ಕರೆ ಮಾಡಿದ್ದಾರೆ. ಮುಂದೇನಾಯ್ತು ಈ ಸ್ಟೋರಿ ಓದಿ..

ಶ್ರೀಶೈಲಕ್ಕೆ ಹೊರಟ್ಟಿದ್ದವ ಅರ್ಧಕ್ಕೆ ಹಿಂತಿರುಗಿ ಬಂದು ಬಾಗಲಕೋಟೆಯಲ್ಲಿ ವಿಶಿಷ್ಟ ಗುಂಪಿನ ರಕ್ತ ದಾನ ಮಾಡಿದ ಯುವಕ
ರಕ್ತದಾನಿ ಮಹಾಂತೇಶ್​
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ|

Updated on: Feb 15, 2024 | 10:28 AM

Share

ಬಾಗಲಕೋಟೆ, ಫೆಬ್ರವರಿ 15: ವಿರಳವಾಗಿ ಲಭ್ಯವಾಗುವ “ಬಾಂಬೆ ರಕ್ತದ ಗುಂಪು” (Bombay Blood Group) ಅನ್ನು ದಾನ (Blood Donation) ಮಾಡುವ ಮೂಲಕ ವಿಜಯಪುರ (Vijayapur) ಜಿಲ್ಲೆಯ ಯಲಗೂರು ಗ್ರಾಮದ ಯುವಕ ಮಹಾಂತೇಶ್ ತುಮ್ಮರಮಟ್ಟಿ ಮಾನವೀಯತೆ ಮೆರದಿದ್ದಾರೆ.

ಬಾಗಲಕೋಟೆಯ ವಿದ್ಯಾಗಿರಿ ನಿವಾಸಿ ಶಿಲ್ಪಾ ಮುತ್ತಗಿ (15 ವರ್ಷ) ಅವರಿಗೆ ಪಿಟ್ಸ್ ಬಂದು ಹಿಮೊಗ್ಲೊಬಿನ್‌ ಕೊರತೆಯಾಗಿ, ಅಶಕ್ತಿಯಾಗಿ ಸೋಮವಾರ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ವೇಳೆ ವೈದ್ಯರು ರೋಗಿಯ ದೇಹದಲ್ಲಿ ರಕ್ತ ಕಡಿಮೆ ಇದೆ, ಶಿಲ್ಪಾರದ್ದು “ಬಾಂಬೆ ಬ್ಲಡ್ ಗ್ರುಪ್” ಎಂದು ಹೇಳಿದ್ದರು. ಅಲ್ಲದೆ ಕೂಡಲೆ ರಕ್ತ ಹಾಕಬೇಕು ಇಲ್ಲದಿದ್ದರೆ ಬದಕುವುದು ಕಷ್ಟ ಎಂದು ವೈದ್ಯರು ಹೇಳಿದ್ದರು.

ಈ ರಕ್ತದ ಗುಂಪು ವಿರಳಾತಿ ವಿರಳ ಆಗಿದ್ದರಿಂದ ಸಿಗುವುದು ಕಷ್ಟ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿ ಕುಮಾರೇಶ್ವರ ಬ್ಲಡ್ ಬ್ಯಾಂಕಿನಲ್ಲಿನ ಬ್ಲಡ್ ಗ್ರುಪ್ ಸದಸ್ಯರ ಹೆಸರಿನ‌ ಪಟ್ಟಿ ಪರಿಶೀಲಿಸಿದ್ದಾರೆ. ಆಗ ಮಹಾಂತೇಶ್ ತುಮ್ಮರಮಟ್ಟಿ ಪತ್ತೆಯಾಗಿದೆ. ಕೂಡಲೆ ಆಸ್ಪತ್ರೆ ಸಿಬ್ಬಂದಿ ಶಿಲ್ಪಾ ಪೋಷಕರಿಗೆ ವಿಷಯ ತಿಳಿಸಿ, ಮಹಾಂತೇಶ್​ ಅವರ ದೂರವಾಣಿ ನಂಬರ್​ ನೀಡಿದ್ದಾರೆ. ಶಿಲ್ಪಾ ಪೋಷಕರು ಮಹಾಂತೇಶ್​ ಅವರಿಗೆ ಕರೆ ಮಾಡಿ ವಿಷಯ ತಿಳಿಸಿ, ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿ ಜಿಲ್ಲೆಯ ಯುವಕರಲ್ಲಿ ಹೆಚ್ಚುತ್ತಿದೆ ರಕ್ತದಾನದ ಅರಿವು; ಹೋರಿಯ ಹೆಸರಿನಲ್ಲಿ ರಕ್ತದಾನ

ಇನ್ನು ಮಹಾಂತೇಶ್ ತುಮ್ಮರಮಟ್ಟಿ ಓರ್ವ ಬಾಡಿಗೆ ವಾಹನ ಚಾಲಕನಾಗಿದ್ದು, ಬುಧವಾರ (ಫೆ.14) ಶ್ರೀಶೈಲಕ್ಕೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ರಕ್ತ ಸಲುವಾಗಿ ಕರೆ ಬಂದಿದೆ. ಕೂಡಲೆ ಮಹಾಂತೇಶ್​ ಬೇರೊಬ್ಬ ಚಾಲಕನನ್ನು ಸ್ಥಳಕ್ಕೆ ಕರೆಸಿ, ಶ್ರೀಶೈಲಕ್ಕೆ ಕಳುಹಿಸಿದ್ದಾರೆ. ಬಳಿಕ ಮಹಾಂತೇಶ್ ಬಸ್ ಹಿಡಿದು, ಬಾಗಲಕೋಟೆ ಬಂದು, ಕುಮಾರೇಶ್ವರ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ಬಾಂಬೆ ರಕ್ತದಾನ ಮಾಡಿ ಹೋಗಿದ್ದಾರೆ. ಮಹಾಂತೇಶ್​ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

50 ಲಕ್ಷ ಜನರಲ್ಲಿ ಒಬ್ಬರಿಗೆ ಇರುವ ರಕ್ತದ ಗುಂಪು

ದೇಹದಲ್ಲಿ ಹೆಚ್ ಆ್ಯಂಟಿಜನ್ ಇರದೆ ಇರುವ ವ್ಯಕ್ತಿಗಳ ರಕ್ತಕ್ಕೆ ಬಾಂಬೆ ಬ್ಲಡ್ ಗ್ರುಪ್ ಎಂದು ಕರೆಯುತ್ತಾರೆ. “ಬಾಂಬೆ ರಕ್ತದ ಗುಂಪು” ಇದು ಅತ್ಯಂತ ವಿರಳವಾಗ ರಕ್ತ ಗುಂಪಾಗಿದೆ. ಸುಮಾರ 50 ಲಕ್ಷ ಜನರಲ್ಲಿ ಒಬ್ಬರಿಗೆ ಇರುವಂತ ರಕ್ತದ ಗುಂಪಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ