AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಕಳ್ಳರೆಂದು ಭಾವಿಸಿ ಬೈಕ್​​ನಲ್ಲಿ ಕಾರು ಚೇಸ್ ಮಾಡಿದ ಜನ: ಕಾರು ಪಲ್ಟಿ, ಗಾಯಾಳುಗಳು ಆಸ್ಪತ್ರೆಗೆ ದಾಖಲು

ಮಕ್ಕಳ ಕಳ್ಳರೆಂದು ಭಾವಿಸಿ ಬೀಳಗಿಯಿಂದ ಗ್ರಾಮದ ಜನರು ಬೈಕ್​​ನಲ್ಲಿ ಕಾರು ಬೆನ್ನತ್ತಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ.

ಮಕ್ಕಳ ಕಳ್ಳರೆಂದು ಭಾವಿಸಿ ಬೈಕ್​​ನಲ್ಲಿ ಕಾರು ಚೇಸ್ ಮಾಡಿದ ಜನ: ಕಾರು ಪಲ್ಟಿ, ಗಾಯಾಳುಗಳು ಆಸ್ಪತ್ರೆಗೆ ದಾಖಲು
ಅಪಘಾತದಲ್ಲಿ ಜಖಂಗೊಂಡಿರುವ ಕಾರು
TV9 Web
| Edited By: |

Updated on:Sep 18, 2022 | 12:11 PM

Share

ಬಾಗಲಕೋಟೆ: ಕಳೆದ ಕೆಲ ದಿನಗಳಿಂದ ಮಕ್ಕಳ ಕಳ್ಳರ ಬಗ್ಗೆ ಹಲವು ವದಂತಿಗಳು ಹರಿದಾಡುತ್ತಿವೆ. ಊರಿನ ಜನರು ಮಕ್ಕಳು ಕಳ್ಳರೆಂದು ಭಾವಿಸಿ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದೇ ರೀತಿಯ ಘಟನೆ ಮರು ಕಳಿಸಿದೆ. ಮಕ್ಕಳ ಕಳ್ಳರೆಂದು ಅನುಮಾನಗೊಂಡು ಜನರು ಕಾರು ಬೆನ್ನತ್ತಿದ್ದು ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾದ ಘಟನೆ ನಡೆದಿದೆ.

ಮಕ್ಕಳ ಕಳ್ಳರೆಂದು ಭಾವಿಸಿ ಬೀಳಗಿಯಿಂದ ಗ್ರಾಮದ ಜನರು ಬೈಕ್​​ನಲ್ಲಿ ಕಾರು ಬೆನ್ನತ್ತಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ದೇವರಾಜ ಭಾರತಿ, ಜಯದೀಪ ಜಗದಾಳೆ, ಮೊಹಮ್ಮದ್​ ಇಲಿಯಾಸ್​ಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬೆಳಗಾವಿ, ಕೊಪ್ಪಳದಲ್ಲಿ ಹೆಚ್ಚಾದ ಮಕ್ಕಳ ಕಳ್ಳರ ವದಂತಿ: ಇದು ಸುಳ್ಳು ಸುದ್ದಿ, ಇದಕ್ಕೆ ಕಿವಿ ಕೊಡ ಬೇಡಿ ಎಂದ ಎಸ್​ಪಿ

ಮಕ್ಕಳ ಕಳ್ಳರು ಎಂದು ಶಂಕಿಸಿ 4 ಸಾಧುಗಳ ಮೇಲೆ ಹಲ್ಲೆ

ಮುಂಬೈ(ಸೆ.14): ಮಂಗಳವಾರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರು ಎಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ಲವಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೋಲುಗಳಿಂದ ಜನ ಇರುವ ಪ್ರದೇಶದಲ್ಲಿ ಸಾಧುಗಳನ್ನು ಥಳಿಸುತ್ತಿರುವುದು ಕಂಡುಬಂದಿದೆ. ಆದರೆ ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಾವು ಯಾವುದೇ ದೂರು ಸ್ವೀಕರಿಸಿಲ್ಲ, ಆದರೆ ವೈರಲ್ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಈ ಘಟನೆಯ ಬಗ್ಗೆ ನಿಜಾಂಶ ಏನು ಎಂದು ಪರಿಶೀಲಿಸುತ್ತಿದ್ದೇವೆ. ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಂಗ್ಲಿ ಎಸ್ಪಿ ದೀಕ್ಷಿತ್ ಗೆಡಮ್ ಸಂಸ್ಥೆ ANI ತಿಳಿಸಿದ್ದಾರೆ

ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಘಟನೆಯನ್ನು ಖಂಡಿಸಿದ್ದಾರೆ ಮತ್ತು ರಾಜ್ಯ ಸರ್ಕಾರವು ಸಾಧುಗಳೊಂದಿಗೆ ಇಂತಹ ದುಷ್ಕೃತ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:11 pm, Sun, 18 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ