AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ ಮೂಡಿಸಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು

ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆಗಳ ಕಾರ್ಯಕರ್ತರು ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್​ ಜಿಹಾದ್ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಬಾಗಲಕೋಟೆ: ದೇವಸ್ಥಾನಕ್ಕೆ ಬರುವ ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ ಮೂಡಿಸಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು
ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ
ಆಯೇಷಾ ಬಾನು
|

Updated on:Mar 22, 2023 | 1:01 PM

Share

ಬಾಗಲಕೋಟೆ: ಇಂದು (ಮಾರ್ಚ್ 22) ಹಿಂದೂಗಳ ಹೊಸ ವರ್ಷ ಯುಗಾದಿ(Ugadi) ಹಬ್ಬ ಹಿನ್ನೆಲೆ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನ ಸಾಗರವೇ ಹರಿದು ಬಂದಿದೆ. ಇದರ ನಡುವೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆಗಳ ಕಾರ್ಯಕರ್ತರು ದೇವಸ್ಥಾನದಲ್ಲಿ ಲವ್​ ಜಿಹಾದ್(Love Jihad)​ ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು ಕರಪತ್ರ ಹಂಚಿದ್ದಾರೆ. ಹೆಣ್ಣು ಮಕ್ಕಳು ಹಾಗೂ ನಾಗರಿಕರಿಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಿದ್ದಾರೆ.

ಯುಗಾದಿ ಪಾಡ್ಯ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಜಟೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇವಸ್ಥಾನಕ್ಕೆ ಬರುತ್ತಿದ್ದು ಈ ವೇಳೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದೂ ಜಾಗರಣಾ ವೇದಿಕೆಗಳ ಕಾರ್ಯಕರ್ತರು ಪ್ರಮುಖವಾಗಿ ಹೆಣ್ಣು ಮಕ್ಕಳಿಗೆ ಹಾಗೂ ನಾಗರಿಕರಿಗೆ ಕರ ಪತ್ರ ಹಂಚಿ ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

Bagalkot Love Jihad

ಹೆಣ್ಣು ಮಕ್ಕಳಿಗೆ ಕರಪತ್ರ ಹಂಚಿ ಲವ್ ಜಿಹಾದ್ ಜಾಗೃತಿ

ಇದನ್ನೂ ಓದಿ: Love jihad: ನರ್ಸಿಂಗ್​ ಓದಿಕೊಂಡು ಕೆಲಸ ಮಾಡ್ತಾ ಮನೆಗೆ ಆಧಾರವಾಗಿದ್ದಳು! ಯಾವ ಮಾಯೆಯಲ್ಲಿ ಲವ್ ಜಿಹಾದ್ ಗೆ ಬಲಿಯಾದಳು ಈ ಯುವತಿ?

ಒಂದು ಹಿಂದು ಹುಡುಗಿ ಹೋದ್ರೆ, ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ನಿಮಗೆ ರಕ್ಷಣೆ ನಮ್ಮದು ಎಂದ ಮುತಾಲಿಕ್

ಬಾಗಲಕೋಟೆ(ಫೆ.19): ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ(Hindu) ಹುಡುಗಿ ಹೋದರೆ ಹತ್ತು ಮುಸ್ಲಿಂ(Muslim) ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ.

ಫೆ.29 ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ , . ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ ಎಂದು ಹೇಳಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:55 pm, Wed, 22 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ