AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಕ್ಕೆ ನೂರರಷ್ಟು ಕಾಶಪ್ಪನವರ್​ಗೆ ಟಿಕೆಟ್ ಕೊಡುತ್ತೇವೆ, ಈ ಸಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ: ಸಿದ್ದರಾಮಯ್ಯ

ಈ ಸಾರಿ ನಾವು ಅಧಿಕಾರಕ್ಕೆ ನಾವು ಬಂದೇ ಬರುತ್ತೇವೆ. ನೂರಕ್ಕೆ ನೂರರಷ್ಟು ವಿಜಯಾನಂದ ಕಾಶಪ್ಪನವರ್​ಗೆ ಕಾಂಗ್ರೆಸ್​ ಟಿಕೆಟ್​ ಕೊಡುತ್ತೇವೆ ಎಂದು ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್​ ಗ್ರಾಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ನೂರಕ್ಕೆ ನೂರರಷ್ಟು ಕಾಶಪ್ಪನವರ್​ಗೆ ಟಿಕೆಟ್ ಕೊಡುತ್ತೇವೆ, ಈ ಸಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ: ಸಿದ್ದರಾಮಯ್ಯ
ಕಾಶಪ್ಪನವರ ಅವರ ಒಡೆತನದ ಎಸ್.ಆರ್​.ಕೆ ಸಕ್ಕರೆ ಕಾರ್ಖಾನೆಗೆ ಭೂಮಿಪೂಜೆ ನೆರವೇರಿಸಿ ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 14, 2022 | 5:03 PM

ಬಾಗಲಕೋಟೆ: ಈ ಸಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ನೂರಕ್ಕೆ ನೂರರಷ್ಟು ವಿಜಯಾನಂದ ಕಾಶಪ್ಪನವರ್ (Kashappanavar) ​ಗೆ ಕಾಂಗ್ರೆಸ್​ ಟಿಕೆಟ್​ ಕೊಡುತ್ತೇವೆ ಎಂದು ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್​ ಗ್ರಾಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದರು. ವಿಜಯಾನಂದ ಕಾಶಪ್ಪನವರ್​ಗೆ ನೀವು ಆಶೀರ್ವಾದ ಮಾಡುತ್ತೀರಲ್ಲಾ ಎಂದು ಜನರನ್ನು ಸಿದ್ದರಾಮಯ್ಯ ಪ್ರಶ್ನಿಸಿದರು. ಹುನಗುಂದ ಭಾಗದಲ್ಲಿ ರೈತಾಪಿ ಜನ ಇರುವಂತವರು. ಹಿಂದುಳಿದ ವರ್ಗದವರು ಇರುವಂತವರು. ನಿರುದ್ಯೋಗ ಇರುವಂತವರು. ಈ ಭಾಗದಲ್ಲಿ ಎಸ್​ಆರ್ ಕಾಶಪ್ಪನವರ ಕಾಲದಲ್ಲೇ ಜಮೀನು ಖರೀದಿಸಿದ್ದೇವೆ. ಇದಕ್ಕೆ ಅನುಮತಿ ಕೊಡಬೇಕೆಂದು ಕೇಳಿಕೊಂಡರು. ಒಂದೇ ಸಾರಿಗೆ ನಾವು ಕಾರ್ಖಾನೆ ಆರಂಭಿಸಲು ಮಂಜೂರಾತಿ ಕೊಟ್ಟಿದ್ದೇವೆ ಎಂದರು.

ಕಾಶಪ್ಪನವರ ಈ ಭಾಗದಲ್ಲಿ ನೀರಾವರಿ ಕಡಿಮೆ ಇದೆ. ನೀರಾವರಿ ಪ್ರದೇಶ ಆಗಬೇಕು ಅಂತ ನನ್ನ ಬಳಿ ಹೇಳಿದರು. ಆಗ ರಾಮಥಾಳ ಲಿಪ್ಟ್ ಇರಿಗೇಷನ್ 762 ಕೋಟಿ ರೂ. ಅನುದಾನದಲ್ಲಿ ಆ ಯೋಜನೆಗೆ ಮಂಜೂರಾತಿ ಕೊಟ್ಟಿತು. ಸುಮಾರು 60 ಸಾವಿರ ಎಕರೆಗೆ ನೀರು ಸಿಗಬೇಕಾದರೆ ಅದಕ್ಕೆ ಕಾಶಪ್ಪನವರ ಕಾರಣ ಎಂದು ತಿಳಿಸಿದರು.

ಇದನ್ನೂ ಓದಿ: ಜನವರಿ 9ರಿಂದ ಜಿಲ್ಲಾ ಕೇಂದ್ರಗಳಲ್ಲಿ ಬಸ್​ ಯಾತ್ರೆ ಮಾಡುತ್ತೇವೆ: ಸಿದ್ದರಾಮಯ್ಯ

ರೈತರು ಉಳಿದರೆ ಸರ್ಕಾರ, ನಾವೆಲ್ಲಾ ಉಳಿಯುವುದಕ್ಕೆ ಸಾಧ್ಯ

ಸೂಕ್ತ ಬೆಲೆ ನಿಗದಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರ ಧರಣಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಸೂಕ್ತ ಬೆಲೆ ನಿಗದಿ ಮಾಡಿ ಎಂದು ರೈತರು ಹೋರಾಟ ಮಾಡ್ತಿದ್ದಾರೆ. ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದರೆ ಕಬ್ಬು ಬೆಳೆಗಾರರಷ್ಟೇ ಅಲ್ಲ. ಯಾವುದೇ ಬೆಳೆ ಆದರೂ ಎಂಎಸ್​​ಪಿ ಮಾದರಿ ಬೆಲೆ ಕೊಡುತ್ತೇವೆ. ರೈತರು ಉಳಿದರೆ ಸರ್ಕಾರ, ನಾವೆಲ್ಲಾ ಉಳಿಯುವುದಕ್ಕೆ ಸಾಧ್ಯ. ಜನರ ಹಣ ಖರ್ಚು ಮಾಡಲು ಸಿಎಂಗೆ ಯಾಕೆ ಹೊಟ್ಟೆ ಉರಿ ಎಂದು ಪ್ರಶ್ನಿಸಿದರು. ಅಧಿಕಾರಕ್ಕೆ ಬಂದ್ರೆ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ. ಜನರಿಗೆ ನಾವು ಕೊಟ್ಟ ಎಲ್ಲಾ ಭರವಸೆಯನ್ನು ಈಡೇರಿಸುತ್ತೇವೆ ಎಂದು ಹೇಳಿದರು.

ನಾವು ಅಧಿಕಾರಕ್ಕೆ ಬಂದ್ರೆ 7 ಕೆಜಿಯಲ್ಲ, 10 ಕೆಜಿ ಅಕ್ಕಿ ಕೊಡ್ತೇವೆ.

ನಾವು ಅಧಿಕಾರಕ್ಕೆ ಬಂದರೆ 7 ಕೆಜಿಯಲ್ಲ 10 ಕೆಜಿ ಅಕ್ಕಿ ಕೊಡುತ್ತೇವೆ. ಸ್ವಾತಂತ್ರ್ಯ ಬಂದಾಗ ನಮಗೆ ಆಹಾರ ಸ್ವಾವಲಂಬನೆ ಇರಲಿಲ್ಲ. ಇಂದಿರಾ ಗಾಂಧಿ ನೇತೃತ್ವದ​ ಸರ್ಕಾರ ಆಹಾರ ಸ್ವಾವಲಂಬನೆ ಮಾಡಿತು. ನಾನು ಸಿಎಂ ಆದ ಮೇಲೂ ಉಚಿತವಾಗಿ ಹಸಿವು ಮುಕ್ತ ರಾಜ್ಯ ಆಗಲೇಬೇಕು ಅಂತಾ ತಲಾ 7 ಕೆಜಿ ಅಕ್ಕಿ ಕೊಟ್ಟೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೆ ಪುಕ್ಕಟೆ ಪ್ರಚಾರ ಪಡೆದ್ರು ಅಂದರು. ಅಲ್ಲದೇ ಉಚಿತವಾಗಿ ಕೊಡ್ತಿದ್ದ 7 ಕೆಜಿ ಅಕ್ಕಿ 5 ಕೆಜಿಗೆ ಇಳಿಸಿದ್ರು. ಹಾಗಾದ್ರೆ ಗುಜರಾತ್​, ಮಧ್ಯಪ್ರದೇಶದಲ್ಲಿ ಉಚಿತವಾಗಿ ಅಕ್ಕಿ ಕೊಡ್ತಾರಾ? ಸಿಎಂ​ ಬಸವರಾಜ ಬೊಮ್ಮಾಯಿ ಯಾಕೆ ಜನರಿಗೆ ಸುಳ್ಳು ಹೇಳ್ತಿದ್ದೀರಿ? ನಾವು ಅಧಿಕಾರಕ್ಕೆ ಬಂದ್ರೆ 7 ಕೆಜಿಯಲ್ಲ, 10 ಕೆಜಿ ಅಕ್ಕಿ ಕೊಡ್ತೇವೆ. ಬಡವರು, ರೈತರು, ಕಾರ್ಮಿಕರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದೆ. ಬೊಮ್ಮಾಯಿ ಅವರೇ ಯಾಕೆ ಇಂದಿರಾ ಕ್ಯಾಂಟೀನ್ ಬಂದ್​​ ಮಾಡಿದ್ರಿ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್